![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 13, 2023, 1:08 PM IST
ಕ್ರೈಸ್ಟ್ ಚರ್ಚ್: ರೋಚಕ ಹಣಾಹಣಿಯಲ್ಲಿ ನ್ಯೂಜಿಲ್ಯಾಂಡ್ ತಂಡವು ಅಂತಿಮ ಎಸೆತದಲ್ಲಿ ಕ್ರೈಸ್ಟ್ ಚರ್ಚ್ ಪಂದ್ಯವನ್ನು ಗೆದ್ದುಕೊಂಡಿದೆ. ಈ ಸೋಲಿನ ಮೂಲಕ ಶ್ರೀಲಂಕಾದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಸೆ ಕಮರಿದ್ದು, ಭಾರತ ತಂಡವು ಫೈನಲ್ ಗೆ ಅರ್ಹತೆ ಪಡೆದಿದೆ.
ಗೆಲುವಿಗೆ 285 ರನ್ ಗುರಿ ಪಡೆದ ಕಿವೀಸ್ ತಂಡಕ್ಕೆ ಕೇನ್ ವಿಲಿಯಮ್ಸನ್ ಶತಕ ಬಾರಿಸಿ ನೆರವಾದರು. ಎಂಟು ವಿಕೆಟ್ ಕಳೆದುಕೊಂಡ ಕಿವೀಸ್ ಅಂತಿಮ ಎಸೆತದಲ್ಲಿ ಪಂದ್ಯ ಗೆದ್ದುಕೊಂಡಿತು.
ಒಂದು ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿದ್ದಲ್ಲಿಂದ ಅಂತಿಮ ದಿನದಾಟ ಆರಂಭಿಸಿದಾಗ ಮಳೆ ಅಡ್ಡಿಯಾಯಿತು. ಮಳೆಯ ಕಾರಣದಿಂದ 37 ಓವರ್ ಗಳ ಪಂದ್ಯ ನಷ್ಟವಾಯಿತು. 53 ಓವರ್ ಗಳಲ್ಲಿ 257 ರನ್ ಗಳಿಸಬೇಕಾದ ಅನಿವಾರ್ಯತೆಗೆ ಸಿಲುಕಿದ ಕಿವೀಸ್ ಗೆ ಕೇನ್ ವಿಲಿಯಮ್ಸನ್ ಮತ್ತು ಡ್ಯಾರೆಲ್ ಮಿಚೆಲ್ ನೆರವಾದರು.
ವಿಲಿಯಮ್ಸನ್ ಅಜೇಯ 121 ರನ್ ಗಳಿಸಿದರೆ, ಮೊದಲ ಇನ್ನಿಂಗ್ಸ್ ನ ಶತಕವೀರ ಮಿಚೆಲ್ 86 ಎಸೆತಗಳಲ್ಲಿ 81 ರನ್ ಮಾಡಿ ನೆರವಾದರು. ಕೊನೆಯ ಮೂರು ಎಸೆತದಲ್ಲಿ ಐದು ರನ್ ಅಗತ್ಯವಿದ್ದಾಗ ವಿಲಿಯಮ್ಸನ್ ಅವರು ಬೌಂಡರಿ ಮತ್ತು ಕೊನೆಯ ಎಸೆತದಲ್ಲಿ ಒಂದು ರನ್ ಕದಿಯುವ ಮೂಲಕ ತಂಡಕ್ಕೆ ಗೆಲುವು ತಂದಿತ್ತರು.
Kane Williamson finishes it for New Zealand – they’re 1-0 in the series.
A Test match to remember! pic.twitter.com/CDl7QtDkKe
— Mufaddal Vohra (@mufaddal_vohra) March 13, 2023
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ತಲುಪಬೇಕಾದರೆ ಶ್ರೀಲಂಕಾ ತಂಡವು ಕಿವೀಸ್ ವಿರುದ್ಧದ ಎರಡೂ ಪಂದ್ಯ ಗೆಲ್ಲಬೇಕಿತ್ತು. ಹೀಗಾಗಿ ಈ ಸೋಲಿನೊಂದಿಗೆ ಲಂಕಾದ ಅಭಿಯಾನ ಅಂತ್ಯಗೊಂಡಿತು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ತಲುಪಿದವು.
ಸಂಕ್ಷಿಪ್ತ ಸ್ಕೋರ್
ಶ್ರೀಲಂಕಾ: 355 ಮತ್ತು 302
ನ್ಯೂಜಿಲ್ಯಾಂಡ್: 373 ಮತ್ತು 285/8
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.