![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-415x253.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
Team Udayavani, Jul 3, 2024, 8:00 AM IST
![Barbados](https://www.udayavani.com/wp-content/uploads/2024/07/huricanbe-620x342.jpg)
ಬ್ರಿಜ್ಟೌನ್ (ಬಾರ್ಬಡಾಸ್): ಭಾರತ ತಂಡ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಕೆರಿಬಿಯನ್ ದ್ವೀಪದಾದ್ಯಂತ ಚಂಡಮಾರುತವೇ ಬೀಸಿದೆ. ಪರಿಣಾಮ, ತವರಿಗೆ ಆಗಮಿಸಬೇಕಿದ್ದ ಟೀಮ್ ಇಂಡಿಯಾ ಬ್ರಿಜ್ಟೌನ್ನಲ್ಲೇ ಸಿಕ್ಕಿಹಾಕಿಕೊಂಡಿದೆ. ಬುಧವಾರ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ನಡುವೆ ಬಾರ್ಬಡಾಸ್ ಪ್ರಧಾನಿ ಮಿಯಾ ಮೋಟಿ ಹೇಳಿಕೆಯೊಂದನ್ನು ನೀಡಿದ್ದು, ಮುಂದಿನ 6ರಿಂದ 12 ಗಂಟೆಗಳಲ್ಲಿ ಬ್ರಿಜ್ಟೌನ್ ವಿಮಾನ ನಿಲ್ದಾಣವನ್ನು ಸಂಚಾರಕ್ಕೆ ತೆರವುಗೊಳಿಸಲಾಗುವುದು ಎಂದಿದ್ದಾರೆ.
ಅದರಂತೆ ರೋಹಿತ್ ಪಡೆ ಭಾರತದ ಕಾಲಮಾನದಂತೆ ಬುಧವಾರ ಬೆಳಗಿನ ಜಾವ 3.30ಕ್ಕೆ ಬ್ರಿಜ್ಟೌನ್ ತೊರೆಯುವ ಸಾಧ್ಯತೆ ಇದೆ. ಆಗ ಬುಧವಾರ ರಾತ್ರಿ 7.45ರ ವೇಳೆ ಕ್ರಿಕೆಟ್ ತಂಡ ಹೊಸದಿಲ್ಲಿಗೆ ಬಂದಿಳಿಯಲಿದೆ. ಅನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕಪ್ ವಿಜೇತ ಭಾರತ ತಂಡವನ್ನು ಸಮ್ಮಾನಿಸುವ ಕಾರ್ಯಕ್ರಮವಿದೆ. ಇದರ ವೇಳೆಯಿನ್ನೂ ನಿಗದಿ ಆಗಿಲ್ಲ.
“ಈಗಲೇ ಯಾವುದನ್ನೂ ನಿಖರವಾಗಿ ಹೇಳಲಾಗದು. ಆದರೆ ನಾನು ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದ ಲ್ಲಿದ್ದೇನೆ. ಅವರು ಕೊನೆಯ ಹಂತದ ಪರೀಕ್ಷೆ ನಡೆಸುತ್ತಿದ್ದಾರೆ. ಮುಂದಿನ 12 ಗಂಟೆಯೊಳಗೆ ವಿಮಾನ ನಿಲ್ದಾಣ ಸಂಚಾರಕ್ಕೆ ತೆರವುಗೊಳ್ಳುವುದು ಬಹುತೇಕ ಖಚಿತ. ಸದ್ಯ ಚಂಡಮಾರುತ ಬಾರ್ಬಡಾಸ್ನ ದಕ್ಷಿಣ ಭಾಗದಲ್ಲಿ, 80 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿದೆ. ಆದರೂ ನಮ್ಮ ದ್ವೀಪದಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಬುಧವಾರ ಮತ್ತೂಂದು ಚಂಡಮಾರುತ ಬೀಸುವ ಮುನ್ಸೂಚನೆ ಇದೆ’ ಎಂದು ಮಿಯಾ ಮೋಟಿÉ ಹೇಳಿದ್ದಾರೆ.
ಟಾಪ್ ನ್ಯೂಸ್
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-415x253.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
![Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು](https://www.udayavani.com/wp-content/uploads/2024/07/bison-150x98.jpg)
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
![8-bng](https://www.udayavani.com/wp-content/uploads/2024/07/8-bng-150x90.jpg)
Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-150x103.jpg)
Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.