Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

ಒಲಿಂಪಿಕ್ಸ್‌ ಗೆ ಹೊರಟ ಆ್ಯತ್ಲೀಟ್‌ಗಳ ಜತೆ ಸಂವಾದ

Team Udayavani, Jul 6, 2024, 12:10 AM IST

1-ewqwewqewq

ಹೊಸದಿಲ್ಲಿ: “ಒತ್ತಡಕ್ಕೆ ಒಳಗಾಗಬೇಡಿ, ಚೆನ್ನಾಗಿ ನಿದ್ರೆ ಮಾಡಿ…’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಳುಗಳಿಗೆ ಕಿವಿಮಾತು ಹೇಳಿದ್ದಾರೆ. ಇದರಿಂದ ಉತ್ತಮ ಫ‌ಲಿತಾಂಶವನ್ನು ಪಡೆದುಕೊಳ್ಳಬಹುದು ಎಂದಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ಆಯೋಜಿಸ ಲಾಗಿದ್ದ ಕಾರ್ಯಕ್ರಮದಲ್ಲಿ ಆ್ಯತ್ಲೀಟ್‌ಗಳ ಜತೆಗೆ ಪ್ರಧಾನಿ ಸಂವಾದ ನಡೆಸಿದರು. ಈ ಸಂವಾದದಲ್ಲಿ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್‌ ಚೋಪ್ರಾ, ಪಿ.ವಿ. ಸಿಂಧು, ನಿಖತ್‌ ಜರೀನ್‌ ಆನ್‌ಲೈನ್‌ನಲ್ಲಿ ಭಾಗಿಯಾಗಿದ್ದರು. ಉಳಿದಂತೆ ಭಾರತದ ಹಾಕಿ ತಂಡ, 21 ಮಂದಿ ಶೂಟರ್‌ಗಳು ಹಾಗೂ ಇತರ ಕೆಲವು ಕ್ರೀಡಾಳುಗಳು ನೇರವಾಗಿ ಪಾಲ್ಗೊಂಡರು.

ಗುರಿಯ ಕಡೆ ಮನಸ್ಸು…
ಗೆಲುವು ಮತ್ತು ಸೋಲು ಎಲ್ಲ ಆಟಗಳ ಭಾಗವಾಗಿವೆ. ಹೀಗಾಗಿ ಒತ್ತಡಕ್ಕೆ ಒಳಗಾಗದೆ ಆಟೋಟಗಳಲ್ಲಿ ಭಾಗಿಯಾಗಬೇಕು. ಯಾವುದೇ ಕಾರಣಕ್ಕೂ ನಿದ್ದೆಯನ್ನು ತ್ಯಾಗ ಮಾಡಬಾರದು. ಉತ್ತಮವಾಗಿ ನಿದ್ರೆ ಮಾಡಿದರೆ ಅದು ನಿಮ್ಮ ಫ‌ಲಿತಾಂಶವನ್ನು ಉತ್ತಮಪಡಿಸುತ್ತದೆ. ನೀವು ಪಂದ್ಯ ಗೆಲ್ಲುತ್ತೀರೋ ಇಲ್ಲವೋ ಎಂಬುದು ಮುಖ್ಯವಲ್ಲ. ನಿಮ್ಮ ಪ್ರತಿಶತ 100ರಷ್ಟು ಸಾಮರ್ಥ್ಯ ನೀಡುವುದು ಮುಖ್ಯ ಎಂದು ಮೋದಿ ಹೇಳಿದರು.

ಜರ್ಮನಿಯಿಂದ ನೀರಜ್‌…
ಸಂವಾದದ ವೇಳೆ ಮಾತನಾಡಿದ ಚೋಪ್ರಾ, “ನಾವು ಈಗ ಜರ್ಮನಿಯಲ್ಲಿ ಅಭ್ಯಾಸ ನಡೆಸು ತ್ತಿದ್ದೇವೆ. ಗಾಯಾಳಾದ ಕಾರಣ ನಾನು ಹೆಚ್ಚು ಟೂರ್ನಿಗಳಲ್ಲಿ ಆಡಲಿಲ್ಲ. ಕೆಲವು ದಿನಗಳ ಹಿಂದೆ ಫಿನ್ಲಂಡ್‌ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ’ ಎಂದರು. ಆ್ಯತ್ಲೀಟ್‌ಗಳು ಭಯಬಿಟ್ಟು ಭಾಗವಹಿಸಬೇಕು ಎಂಬ ಸಲಹೆಯನ್ನೂ ನೀಡಿದರು.

“2036ರ ಒಲಿಂಪಿಕ್ಸ್‌ಗೆ ನಿಮ್ಮ ಅಭಿಪ್ರಾಯ ಮುಖ್ಯ’
ಭಾರತ 2036ರ ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಮುಂದಾಗಿದೆ. ಇದನ್ನು ಪರಿಪೂರ್ಣವಾಗಿ ಆಯೋಜನೆ ಮಾಡಲು ಆ್ಯತ್ಲೀಟ್‌ಗಳು ನೀಡುವ ಮಾಹಿತಿ ಬಹಳ ಮುಖ್ಯವಾಗುತ್ತದೆ. ಹೀಗಾಗಿ ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಮರಳಿದ ಬಳಿಕ ಎಲ್ಲ ಆಟಗಾರರೂ ತಪ್ಪದೇ ಅಭಿಪ್ರಾಯ ನೀಡಿ. ಇದರಿಂದಾಗಿ ದೇಶದಲ್ಲಿ ಒಲಿಂಪಿಕ್ಸ್‌ ಸಿದ್ಧತೆಗೆ ಸಂಬಂಧಿಸಿದಂತೆ ಕ್ರೀಡಾ ಪರಿಸರವನ್ನು ನಾವು ನಿರ್ಮಾಣ ಮಾಡಬಹುದು ಎಂದು ಮೋದಿ ಹೇಳಿದರು.
ಬಿಡುವಾಗಿದ್ದಾಗ, ಅಲ್ಲಿನ ಏರ್ಪಾಟುಗಳನ್ನು ಗಮನಿಸಿ. ನೀವು ನೀಡುವ ಮಾಹಿತಿ 2036ರ ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಭಾರತಕ್ಕೆ ನೆರವಾಗಲಿದೆ ಎಂದರು.

ನೀರಜ್‌ ಚೋಪ್ರಾ ಧ್ವಜಧಾರಿ
ಪ್ಯಾರಿಸ್‌ ಒಲಿಂಪಿಕ್ಸ್‌ ಉದ್ಘಾಟನೆಯ ವೇಳೆ 28 ಕ್ರೀಡಾಪಟುಗಳನ್ನೊಳಗೊಂಡ ಭಾರತೀಯ ತಂಡವನ್ನು ಟೋಕಿಯೊ ಒಲಿಂಪಿಕ್ಸ್‌ ಬಂಗಾರ ವಿಜೇತ ಜಾವೆಲಿನ್‌ ತ್ರೋವರ್‌ ನೀರಜ್‌ ಚೋಪ್ರಾ ತ್ರಿವರ್ಣ ಧ್ವಜದೊಂದಿಗೆ ಮುನ್ನಡೆಸಲಿದ್ದಾರೆ. ಒಲಿಂಪಿಕ್ಸ್‌ಗೆ ಆಯ್ಕೆಯಾಗಿರುವ ಕ್ರೀಡಾಪಟುಗಳಲ್ಲಿ 17 ಮಂದಿ ಪುರುಷರು ಮತ್ತು 11 ಮಂದಿ ಮಹಿಳೆಯರ ತಂಡ ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿದೆ.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lulu

Wimbledon-2024; ರಿಬಾಕಿನಾ, ಸ್ವಿಟೋಲಿನಾ ಕ್ವಾರ್ಟರ್‌ ಫೈನಲ್‌ ಯಾನ

1-yuvi

Abhishek Sharma ಸೆಂಚುರಿ ಹೊಡೆದ್ದು ಗಿಲ್‌ ಬ್ಯಾಟ್‌ನಲ್ಲಿ!: ಸಂತಸಪಟ್ಟ ಯುವಿ

1-jayasuriya

Sri Lanka Team; ಭಾರತ ಕ್ರಿಕೆಟ್‌ ಸರಣಿಗೆ ಜಯಸೂರ್ಯ ಕೋಚ್‌

Maldievs

T20 ವಿಶ್ವಕಪ್‌ ವಿಜೇತರಿಗೆ ಮಾಲ್ಡೀವ್ಸ್‌ ಆಹ್ವಾನ

1-soorya

Tulu Nadu ನಂಟು; ಮಂಗಳೂರಿನಲ್ಲಿ ಸೂರ್ಯಕುಮಾರ್‌ ದಂಪತಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.