![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 17, 2019, 12:30 AM IST
ಹೈದರಾಬಾದ್: “ಸಾಯ್ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿ’ಯಿಂದ 9 ತಿಂಗಳು ದೂರವಿದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಮನಸ್ಸು ಬದಲಾಯಿಸಿದ್ದಾರೆ. ತಮ್ಮ ವೃತ್ತಿಜೀವನದ ಭವಿಷ್ಯವನ್ನು ಗಮನಿಸಿ ಮತ್ತೆ ಅಕಾಡೆಮಿಗೆ ಮರಳಿದ್ದಾರೆ. ದೂರಾಗಿದ್ದ ಆ 9 ತಿಂಗಳಲ್ಲಿ ಸಿಂಧು ಬಿಡಬ್ಲ್ಯುಎಫ್ ವಿಶ್ವ ಸರಣಿ ಫೈನಲ್ನಲ್ಲಿ ಚಿನ್ನ ಜಯಿಸಿದ್ದನ್ನು ಹೊರತುಪಡಿಸಿದರೆ, ಬಹುತೇಕ ಕೂಟಗಳಲ್ಲಿ ಸೋತಿದ್ದರು.
ಕಳೆದ ಜೂನ್ನಲ್ಲಿ ಗೋಪಿಚಂದ್ ಅವರಲ್ಲಿ ಮನವಿ ಮಾಡಿದ ಸಿಂಧು, ತನಗೆ ಪ್ರತ್ಯೇಕವಾಗಿ ತರಬೇತಿ ನೀಡುವಂತೆ ಕೇಳಿಕೊಂಡಿದ್ದರು. ಅದನ್ನು ಒಪ್ಪಿಕೊಂಡಿದ್ದ ಗೋಪಿ, ಸಾಯ್ ಗೋಪಿಚಂದ್ ಅಕಾಡೆಮಿಯಿಂದ ಕೇವಲ ಒಂದು ಕಿ.ಮೀ. ದೂರವಿರುವ ತಮ್ಮದೇ “ಗೋಪಿಚಂದ್ ಅಕಾಡೆಮಿ’ಯಲ್ಲಿ ತರಬೇತಿ ನೀಡಿದರು. ಇದರಿಂದ ನಿರೀಕ್ಷಿತ ಫಲಿತಾಂಶ ಸಾಧಿಸಲು ಸಿಂಧುಗೆ ಸಾಧ್ಯವಾಗಲಿಲ್ಲ.
ಸಿಂಧು ಪ್ರತ್ಯೇಕ ತರಬೇತಿಗೆ ಆಗ್ರಹಿಸಿದ್ದಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಇದಕ್ಕೆ ಕಾರಣ ಸೈನಾ ನೆಹ್ವಾಲ್ ಇರಬಹುದೇ ಎಂಬ ಅನುಮಾನವಿದೆ. ಹಿಂದೆ ಗೋಪಿಚಂದ್ ಅವರಿಂದಲೇ ತರಬೇತಿ ಪಡೆಯುತ್ತಿದ್ದ ಸೈನಾ, ಗೋಪಿಚಂದ್ ತನಗೆ ಆದ್ಯತೆ ನೀಡಿ ತರಬೇತಿ ನೀಡುತ್ತಿಲ್ಲ ಎಂದು ಮುನಿಸಿಕೊಂಡು ಖಾಸಗಿ ತರಬೇತಿ ಶುರು ಮಾಡಿದ್ದರು.
ಆದರೆ ಕಳೆದ ವರ್ಷ ಅವರು ಮತ್ತೆ ಗೋಪಿಚಂದ್ ಕೇಂದ್ರಕ್ಕೆ ಮರಳಿದ್ದರು. ಗೋಪಿ ತನಗಿಂತ ಸಿಂಧುಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಸೈನಾಗೆ ಸಿಟ್ಟು ತರಿಸಿತ್ತು ಎಂಬ ಊಹಾಪೋಹಗಳೂ ಹರಡಿದ್ದವು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.