Asia Cup ಬಾಂಗ್ಲಾ ಎದುರು ಪಾಕಿಸ್ಥಾನಕ್ಕೆ ಭರ್ಜರಿ ಗೆಲುವು


Team Udayavani, Sep 6, 2023, 11:18 PM IST

1-asdsa

ಲಾಹೋರ್‌: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಪಾಕಿಸ್ಥಾನ ತಂಡವು ಏಷ್ಯಾ ಕಪ್‌ ಕ್ರಿಕೆಟ್‌ ಕೂಟದ ಬುಧವಾರದ ಮೊದಲ ಸೂಪರ್‌ ಫೋರ್‌ ಹಂತದ ಪಂದ್ಯದಲ್ಲಿ ಬಾಂಗ್ಲಾ ದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ.

ಗೆಲ್ಲಲು ಸುಲಭ ಸವಾಲು ಪಡೆದ ಪಾಕಿಸ್ಥಾನ ತಂಡವು ಇಮಾಮ್‌ ಉಲ್‌ ಹಕ್‌ ಮತ್ತು ಮೊಹಮ್ಮದ್‌ ರಿಜ್ವಾನ್‌ ಅವರ ಭರ್ಜರಿ ಆಟದಿಂದಾಗಿ 39.3 ಓವರ್‌ಗಳಲ್ಲಿ 3 ವಿಕೆಟಿಗೆ 194 ರನ್‌ ಪೇರಿಸಿ ಜಯಭೇರಿ ಬಾರಿಸಿತು. ಪಾಕಿಸ್ಥಾನವು ಇನ್ನು ಸೆ. 10ರಂದು ನಡೆಯುವ ಸೂಪರ್‌ ಫೋರ್‌ ಹಂತದ ಪಂದ್ಯದಲ್ಲಿ ಭಾರತವನ್ನು ಎದುರಿಸಲಿದೆ.

ಪಾಕಿಸ್ಥಾನದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ಫ‌ಕಾರ್‌ ಜಮಾನ್‌ ಮತ್ತು ಇಮಾಮ್‌ ಉಲ್‌ ಹಕ್‌ ತಾಳ್ಮೆಯ ಆಟವಾಡಿ ತಂಡವನ್ನು ಆಧರಿಸುವ ಪ್ರಯತ್ನ ಮಾಡಿದರು. ಅವರಿಬ್ಬರು ಮೊದಲ ವಿಕೆಟಿಗೆ 35 ರನ್‌ ಪೇರಿಸಿ ಬೇರ್ಪಟ್ಟರು. ಆಬಳಿಕ ಇಮಾಮ್‌ ಅವರನ್ನು ಸೇರಿಕೊಂಡ ನಾಯಕ ಬಾಬರ್‌ ಆಜಂ ತಂಡವನ್ನು ರಕ್ಷಿಸುವ ಭಾರ ಹೊತ್ತರು.

ಇಮಾಮ್‌ ಮತ್ತು ಮೊಹಮ್ಮದ್‌ ರಿಜ್ವಾನ್‌ ಭರ್ಜರಿ ಆಟದ ಪ್ರದರ್ಶನ ನೀಡಿ ತಂಡಕ್ಕೆ ಗೆಲುವನ್ನು ಖಚಿತಪಡಿಸಿದರು. ಮೂರನೇ ವಿಕೆಟಿಗೆ 84 ರನ್ನುಗಳ ಜತೆಯಾಟದಲ್ಲಿ ಭಾಗಿಯಾದರು. ಶತಕದತ್ತ ದಾಪುಗಾಲು ಹಾಕುತ್ತಿದ್ದ ಇಮಾಮ್‌ ಅವರು ಭರ್ಜರಿ ಹೊಡೆತಕ್ಕೆ ಯತ್ನಿಸಿ ಮೆಹಿದಿಗೆ ಕ್ಲೀನ್‌ಬೌಲ್ಡ್‌ ಆದರು. 84 ಎಸೆತ ಎದುರಿಸಿದ ಅವರು 5 ಬೌಂಡರಿ ಮತ್ತು 4 ಸಿಕ್ಸರ್‌ ನೆರವಿನಿಂದ 78 ರನ್‌ ಹೊಡೆದರು.

ಇಮಾಮ್‌ ಅವರಿಗೆ ಉತ್ತಮ ಬೆಂಬಲ ನೀಡಿದ ರಿಜ್ವಾನ್‌ ಇನ್ನಷ್ಟು ಕುಸಿತ ಆಗದಂತೆ ನೋಡಿಕೊಂಡರು. ಪಂದ್ಯ ಗೆದ್ದಾಗ 63 ರನ್‌ ಗಳಿಸಿ ಆಡುತ್ತಿದ್ದರು. 79 ಎಸೆತ ಎದುರಿಸಿದ ಅವರು 7 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ್ದರು.

ನಾಟಕೀಯ ಕುಸಿತ
ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶವು ಪಾಕಿಸ್ಥಾನದ ಬಿಗು ದಾಳಿಗೆ ರನ್‌ ಗಳಿಸಲು ಒದ್ದಾಡಿತು. ಆದರೂ ನಾಯಕ ಶಕಿಬ್‌ ಅಲ್‌ ಹಸನ್‌ ಮತ್ತ ಮುಶ್ಫಿಕರ್‌ ರಹೀಂ ಅವರ ತಾಳ್ಮೆಯ ಅರ್ಧಶತಕದಿಂದಾಗಿ ತಂಡದ ಮೊತ್ತ 193ರ ಗಳಿಸಿತು. ಎರಡು ಬಾರಿ ನಾಟಕೀಯ ಕುಸಿತ ತಂಡ ಬಾಂಗ್ಲಾದೇಶವು 38.4 ಓವರ್‌ಗಳಲ್ಲಿ 193 ರನ್ನಿಗೆ ಆಲೌಟಾಯಿತು. ಎರಡು ಬಾರಿ ನಾಟಕೀಯ ಕುಸಿತ ಕಂಡ ಬಾಂಗ್ಲಾದೇಶವು ಬೇಗನೇ ಆಲೌಟಾಯಿತು. ಶಕಿಬ್‌ ಮತ್ತು ರಹೀಂ ಅವರ ಅರ್ಧಶತಕ ಮತ್ತು ಅವರಿಬ್ಬರ ನಡುವೆ 100 ರನ್ನುಗಳ ಜತೆಯಾಟದ ಹೊರತಾಗಿಯೂ ಬಾಂಗ್ಲಾ ದೊಡ್ಡ ಮೊತ್ತ ಪೇರಿಸಲು ವಿಫ‌ಲವಾಯಿತು.

ಆರಂಭದಲ್ಲಿಯೇ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾದ ಬಾಂಗ್ಲಾದೇಶವು 47 ರನ್‌ ಗಳಿಸುವಷ್ಟರಲ್ಲಿ 4 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಆಬಳಿಕ ಶಕಿಬ್‌ ಮತ್ತು ರಹೀಂ ತಂಡವನ್ನು ಆಧರಿಸಿದರು. ಕೊನೆ ಹಂತದಲ್ಲಿ ಮತ್ತೆ ಕುಸಿತ ಕಂಡ ಬಾಂಗ್ಲಾದೇಶ 30ರಿಂದ 39 ಓವರ್‌ ನಡುವೆ 47 ರನ್‌ ಅಂತರದಲ್ಲಿ ಕೊನೆಯ ಆರು ವಿಕೆಟ್‌ ಕಳೆದುಕೊಂಡು ಆಲೌಟಾಯಿತು.

ಸಂಕ್ಷಿಪ್ತ ಸ್ಕೋರು
ಬಾಂಗ್ಲಾದೇಶ 38.4 ಓವರ್‌ಗಳಲ್ಲಿ 193 (ಮೊಹಮ್ಮದ್‌ ನೈಮ್‌ 20, ಶಕಿಬ್‌ ಅಲ್‌ ಹಸನ್‌ 53, ಮುಶ್ಫಿಕರ್‌ ರಹೀಂ 64, ಹ್ಯಾರಿಸ್‌ ರವೂಫ್ 19ಕ್ಕೆ 4, ನಸೀಮ್‌ ಶಾ 34ಕ್ಕೆ 3); ಪಾಕಿಸ್ಥಾನ 39.3 ಓವರ್‌ಗಳಲ್ಲಿ 3 ವಿಕೆಟಿಗೆ 194 (ಫ‌ಕಾರ್‌ ಜಮಾನ್‌ 20, ಇಮಾಮ್‌ ಉಲ್‌ ಹಕ್‌ 78, ಮೊಹಮ್ಮದ್‌ ರಿಜ್ವಾನ್‌ 63 ಔಟಾಗದೆ).

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.