ಪ್ಯಾರಾ ಆ್ಯತ್ಲೀಟ್‌ಗಳಿಗೆ ಸಕಾಲಕ್ಕೆ ಆರ್ಥಿಕ ನೆರವು ಸಿಗಬೇಕು: ಕೆ.ವೈ. ವೆಂಕಟೇಶ್‌


Team Udayavani, Aug 22, 2024, 10:16 AM IST

ಪ್ಯಾರಾ ಆ್ಯತ್ಲೀಟ್‌ಗಳಿಗೆ ಸಕಾಲಕ್ಕೆ ಆರ್ಥಿಕ ನೆರವು ಸಿಗಬೇಕು: ಕೆ.ವೈ. ವೆಂಕಟೇಶ್‌

ಬೆಂಗಳೂರು: ಪ್ಯಾರಾಲಿಂಪಿಕ್ಸ್‌ಗೆ ಆಯ್ಕೆಯಾಗಲು ನಡೆಯುವ ಅರ್ಹತಾ ಸುತ್ತುಗಳು ವಿದೇಶಗಳಲ್ಲಿ ನಡೆಯುವುದರಿಂದ ಹೆಚ್ಚಿನ ಕ್ರೀಡಾಪಟುಗಳಿಗೆ ಭಾಗಿಯಾಗಲು ಆಗುತ್ತಿಲ್ಲ. ಹಾಗೆಯೇ ಪ್ಯಾರಾ ಆ್ಯತ್ಲೀಟ್‌ಗಳಿಗೆ ದೊರೆಯುವ ಆರ್ಥಿಕ ನೆರವು ಸಕಾಲದಲ್ಲಿ ಸಿಗು ವಂತಾಗಬೇಕು. ಇವರಿಗೆ ರಾಜ್ಯ ಸರಕಾರ ನೀಡುತ್ತಿರುವ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂದು ರಾಜ್ಯ ಪ್ಯಾರಾಲಿಂಪಿಕ್ಸ್‌ ಸಮಿತಿ ಅಧ್ಯಕ್ಷ ಕೆ.ವೈ. ವೆಂಕಟೇಶ್‌ ಹೇಳಿದ್ದಾರೆ.

“ಉದಯವಾಣಿ’ ಜತೆ ಮಾತನಾಡಿದ ಅವರು, ಒಲಿಂಪಿಕ್ಸ್‌ ಬಳಿಕ ಪ್ಯಾರಾ ಆ್ಯತ್ಲೀಟ್‌ಗಳು ದೇಶದ ಕೀರ್ತಿ ಪತಾಕೆ ಹಾರಿಸಲು ಪ್ಯಾರಿಸ್‌ಗೆ ಪ್ರಯಾಣ ಆರಂಭಿಸಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ನೆರವು ಮತ್ತು ತರಬೇತಿ ಸಿಕ್ಕಿದೆ. ಹೀಗಾಗಿ ಭಾರತ ಹಿಂದಿಗಿಂತಲೂ ಹೆಚ್ಚು ಪದಕಗಳನ್ನು ಜಯಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೆಚ್ಚಾದ ಪ್ರೋತ್ಸಾಹ, ತರಬೇತಿ
ಒಲಿಂಪಿಕ್ಸ್‌ನಲ್ಲಿ ಭಾಗಿಯಾಗುವ ಆ್ಯತ್ಲೀಟ್‌ಗಳಿಗೆ ಪ್ರೋತ್ಸಾಹ ನೀಡುವ ರೀತಿಯಲ್ಲೇ ಪ್ಯಾರಾ ಆ್ಯತ್ಲೀಟ್‌ಗಳಿಗೂ ಪ್ರೋತ್ಸಾಹ ಮತ್ತು ತರಬೇತಿ ನೀಡಲಾಗಿದೆ. ಈ ಬಾರಿ 40ಕ್ಕೂ ಹೆಚ್ಚು ಪದಕಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಕೇಂದ್ರ ಸರಕಾರ ಕ್ರೀಡಾ ನೀತಿಯನ್ನು ಬದಲಾವಣೆ ಮಾಡಿದ್ದು, ತರಬೇತಿ, ಸಹಕಾರವನ್ನು ಹೆಚ್ಚಳ ಮಾಡಿದೆ. ಅಂಗವಿಕಲರಿಗಾಗಿಯೇ ಗ್ವಾಲಿಯರ್‌ನಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಒಲಿಂಪಿಕ್ಸ್‌ ಗೋಲ್ಡ್‌ ಕ್ವೆಸ್ಟ್‌, ಅಮೃತಬಿಂದು ಎಂಬಂತಹ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಹಣ ಬಿಡುಗಡೆ ಮಾಡಬೇಕು
ಪ್ಯಾರಾಲಿಂಪಿಕ್ಸ್‌ಲ್ಲಿ 84 ಮಂದಿ ಭಾಗಿಯಾಗುತ್ತಿದ್ದರೂ ರಾಜ್ಯದಿಂದ 3 ಜನ ಮಾತ್ರ ಇದ್ದಾರೆ. ಇದಕ್ಕೆ ಕಾರಣ ವಾಗಿ ರುವುದು ಅರ್ಹತಾ ಸುತ್ತುಗಳು ವಿದೇಶಗಳಲ್ಲಿ ನಡೆ ಯುವುದು. ಇದರಿಂದ ಸಮಸ್ಯೆಯಾಗುತ್ತದೆ. ಇದಕ್ಕಾಗಿ ರಾಜ್ಯ ಸರಕಾರ ಹಣ ಬಿಡುಗಡೆ ಮಾಡಬೇಕು ಎಂದರು.

ರಾಜ್ಯದ ಇಬ್ಬರಿಗೆ ಪದಕ ಖಚಿತ
ರಾಜ್ಯದಿಂದ ಈ ಬಾರಿ ಮೂವರು ಸ್ಪರ್ಧಿಗಳು ಭಾಗಿಯಾಗುತ್ತಿದ್ದು, ಇದರಲ್ಲಿ ಇಬ್ಬರಿಗೆ ಪದಕ ಖಚಿತ ಎನ್ನಬಹುದು. ಪವರ್‌ ಲಿಫ್ಟರ್‌ ಸಕೀತಾ ಖಾತುನ್‌ ಮತ್ತು ಶೂಟರ್‌ ಶ್ರೀಹರ್ಷ ದೇವರೆಡ್ಡಿ ಖಂಡಿತ ಪದಕ ಗೆಲ್ಲಲಿದ್ದಾರೆ. ಮೂವರೂ ಪದಕ ಗೆಲ್ಲಲಿ ಎಂದು ವೆಂಕಟೇಶ್‌ ಹಾರೈಸಿದರು.

ಭಾರತೀಯ ಖಾದ್ಯಕ್ಕೆ ವ್ಯವಸ್ಥೆ
ಪ್ಯಾರಿಸ್‌ನಲ್ಲಿನ ಹವಾಮಾನ ಮತ್ತು ಆಹಾರ ಕ್ರೀಟಾಪಟುಗಳಿಗೆ ಸವಾಲು ಒಡ್ಡಬಹುದು. ಹೀಗಾಗಿ ಭಾರತೀಯ ಶೈಲಿಯ ಊಟ ಒದಗಿ ಸಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಗೆ ಮನವಿ ಮಾಡಲಾಗಿದೆ. ಅಧಿಕಾರಿಗಳು ಸಕಾರಾತ್ಮಕ ವಾಗಿ ಸ್ಪಂದಿಸಿದ್ದಾರೆ. ಅಲ್ಲಿನ ವಾತಾವರಣಕ್ಕೆ ಹೊಂದಿ ಕೊಳ್ಳಲು ಬೇಕಾದ ನೆರವನ್ನು ಒದಗಿಸಲಾಗುತ್ತಿದೆ. ಕೆಲದಿನ ಮೊದಲೇ ಅಲ್ಲಿಗೆ ತಲುಪುವ ಕ್ರೀಡಾಳುಗಳಿಗೆ ಈ ಅವಕಾಶವಿದೆ ಎಂದರು.

–  ಗಣೇಶ್‌ ಪ್ರಸಾದ್‌

ಟಾಪ್ ನ್ಯೂಸ್

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

CM–Nagamangala

Riots: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತಂದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

siddanna-2

BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದಲ್ಲಿ ಬರೀ ಮೂವರು ನೈಸರ್ಗಿಕ ದೇಹದಾರ್ಡ್ಯ ಪಟುಗಳು: ರಘು ರಾಮಪ್ಪ

Raghu Ramappa; ದೇಶದಲ್ಲಿ ಬರೀ ಮೂವರು ನೈಸರ್ಗಿಕ ದೇಹದಾರ್ಢ್ಯ ಪಟುಗಳು: ರಘು ರಾಮಪ್ಪ

INDvsBAN: Bangladesh announce squad for Test series against India

INDvsBAN: ಭಾರತ ವಿರುದ್ದದ ಟೆಸ್ಟ್‌ ಸರಣಿಗೆ ತಂಡ ಪ್ರಕಟಿಸಿದ ಬಾಂಗ್ಲಾದೇಶ

World Cup 2023: ಭಾರತಕ್ಕೆ 11,367 ಕೋಟಿ ರೂ. ಲಾಭ

World Cup 2023: ಭಾರತಕ್ಕೆ 11,367 ಕೋಟಿ ರೂ. ಲಾಭ

Women’s T20 World Cup 2024: ನ್ಯೂಜಿಲ್ಯಾಂಡ್‌ ತಂಡ ಪ್ರಕಟ

Women’s T20 World Cup 2024: ನ್ಯೂಜಿಲ್ಯಾಂಡ್‌ ತಂಡ ಪ್ರಕಟ

Diamond League Final: ನೀರಜ್‌ ಚೋಪ್ರಾ, ಅವಿನಾಶ್‌ ಸಾಬ್ಲೆ ಭರವಸೆ

Diamond League Final: ನೀರಜ್‌ ಚೋಪ್ರಾ, ಅವಿನಾಶ್‌ ಸಾಬ್ಲೆ ಭರವಸೆ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.