Paris Games: ಇಂದು ಟೋಕಿಯೋ ಬೆಳ್ಳಿ ವಿಜೇತೆ ಚಾನು ಸ್ಪರ್ಧೆ;  ಫಿಟ್ನೆಸ್ ಕೊರತೆಯೇ ಅಡ್ಡಿ


Team Udayavani, Aug 7, 2024, 7:19 AM IST

Paris Games: ಇಂದು ಟೋಕಿಯೋ ಬೆಳ್ಳಿ ವಿಜೇತೆ ಚಾನು ಸ್ಪರ್ಧೆ;  ಫಿಟ್ನೆಸ್ ಕೊರತೆಯೇ ಅಡ್ಡಿ

ಪ್ಯಾರಿಸ್‌: ಕಳೆದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕದ ಖಾತೆಯನ್ನು ತೆರೆದಿದ್ದ ಮಹಿಳಾ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು; ಪ್ಯಾರಿಸ್‌ನಲ್ಲಿ ಬುಧವಾರ 49 ಕೆಜಿ ವಿಭಾಗದಲ್ಲಿ ಸ್ಪರ್ಧಾಕಣಕ್ಕೆ ಇಳಿಯಲಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಮೊದಲ ಭಾರತೀಯ ಕುಸ್ತಿಪಟು ಎಂಬ ಅಪೂರ್ವ ದಾಖಲೆ ನಿರ್ಮಿಸುವ ಅವಕಾಶವೊಂದು ಈ ತಾರೆಯ ಮೇಲಿದೆ. ಆದರೆ ಇದಕ್ಕೆ ಫಿಟ್‌ನೆಸ್‌ ಅಡ್ಡಿಯಾದೀತೇ ಎಂಬ ಆತಂಕ ಕೂಡ ಇದೆ.

ಕಳೆದ ಏಷ್ಯಾಡ್‌ನಿಂದೀಚೆ ಗಾಯದ ಸಮಸ್ಯೆಯನ್ನು ಎದುರಿಸುತ್ತಲೇ ಇದ್ದ ಮೀರಾಬಾಯಿ, ಪ್ಯಾರಿಸ್‌ ಒಲಿಂಪಿಕ್ಸ್‌ ತಪ್ಪಿಹೋದೀತೆಂಬ ಆತಂಕದಲ್ಲಿದ್ದರು. ತಾನು ಇಲ್ಲಿಗೆ ಬಂದುದೇ ಒಂದು ಪವಾಡ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ. ರಾಷ್ಟ್ರೀಯ ಕೋಚ್‌ ವಿಜಯ್‌ ಶರ್ಮಾ ಕೂಡ ಚಾನು ಅವರ ಸಂಪೂರ್ಣ ಫಿಟ್‌ನೆಸ್‌ ಬಗ್ಗೆ ಸರ್ಟಿಫಿಕೆಟ್‌ ಕೊಟ್ಟಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಒಟ್ಟು 202 ಕೆಜಿ ಭಾರವನ್ನೆತ್ತಿ (87 ಕೆಜಿ, 115 ಕೆಜಿ) ಬೆಳ್ಳಿ ಪದಕದಿಂದ ಸಿಂಗಾರಗೊಂಡಿದ್ದರು. ಅನಂತರ ಇವರ ಅತ್ಯುತ್ತಮ ಸಾಧನೆ ದಾಖಲಾದದ್ದು 2022ರ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ. ಇಲ್ಲಿ 201 ಕೆಜಿ ಭಾರವೆತ್ತಿದ್ದರು (88 ಕೆಜಿ, 113 ಕೆಜಿ).

ಸುಧಾರಣೆ ಅಗತ್ಯ: ಪ್ಯಾರಿಸ್‌ ವಿಷಯಕ್ಕೆ ಬರುವುದಾದರೆ, ಮೀರಾಬಾಯಿ ಚಾನು ಕ್ಲೀನ್‌ ಆ್ಯಂಡ್‌ ಜೆರ್ಕ್‌-ಎರಡೂ ವಿಭಾಗಗಳಲ್ಲಿ ತಮ್ಮ ವೈಯಕ್ತಿಕ ದಾಖಲೆಯನ್ನು ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಂಡರೆ ಬೆಳ್ಳಿ ಅಥವಾ ಕಂಚಿನ ಪದಕ ಗೆಲ್ಲಬಹುದೆಂದು ವಿಶ್ಲೇಷಿಸಲಾಗುತ್ತಿದೆ.

ಗುರುವಾರ 30ನೇ ವರ್ಷಕ್ಕೆ ಕಾಲಿಡಲಿರುವ ಮೀರಾಬಾಯಿ ಚಾನು ಸ್ನ್ಯಾಚ್‌ನಲ್ಲಿ 88 ಕೆಜಿ ದಾಖಲೆ ಹೊಂದಿದ್ದಾರೆ. 2020ರ ರಾಷ್ಟ್ರೀಯ ಗೇಮ್ಸ್‌ನಲ್ಲಿ ಇದನ್ನು ಸಾಧಿಸಿದ್ದರು. ಹಾಗೆಯೇ ಜೆರ್ಕ್‌ನಲ್ಲಿ 119 ಕೆಜಿ ಎತ್ತಿರುವುದು ವೈಯಕ್ತಿಕ ದಾಖಲೆಯಾಗಿದೆ. ಇದನ್ನು ಸಾಧಿಸಿದ್ದು 2021ರ ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ. ಮೀರಾಬಾಯಿ 200 ಕೆಜಿ ಗಡಿ ದಾಟುವುದರಲ್ಲಿ ಅನುಮಾನವಿಲ್ಲ. ಆದರೆ ಈ ಬಾರಿ 202 ಕೆಜಿ ಸಾಧನೆ ಸಾಲದು. ಇದನ್ನು 205-206 ಕೆಜಿಗಾದರೂ ಹೆಚ್ಚಿಸಿಕೊಳ್ಳಬೇಕಾಗುತ್ತದೆ. ನಾವು ಸವಾಲಿಗೆ ಸಿದ್ಧರಾಗಿದ್ದೇವೆ’ ಎಂದಿದ್ದಾರೆ ಕೋಚ್‌ ವಿಜಯ್‌ ಶರ್ಮ.

ಬಲಾಡ್ಯರ ಸ್ಪರ್ಧೆ

ಸ್ಪರ್ಧೆಯಲ್ಲಿರುವ ಇತರ ನಾಲ್ವರು ಸ್ನ್ಯಾಚ್‌ನಲ್ಲಿ 90 ಕೆಜಿ ಗಡಿ ದಾಟಿದ್ದಾರೆ. ಉತ್ತರ ಕೊರಿಯಾದ ಏಷ್ಯನ್‌ ಗೇಮ್ಸ್‌ ಚಾಂಪಿಯನ್‌ ಹಾಗೂ ವಿಶ್ವದಾಖಲೆಯ ಲಿಫ್ಟರ್‌ ರೀ ಸಾಂಗ್‌ ಗಮ್‌ ಅವರ ಅನುಪಸ್ಥಿತಿಯಲ್ಲೂ 49 ಕೆಜಿ ವಿಭಾಗದ ಸ್ಪರ್ಧೆ ತೀವ್ರ ಪೈಪೋಟಿಯಿಂದ ಕೂಡಿದೆ.

ಮೀರಾಬಾಯಿ ಚಾನು ಕಳೆದ ಒಂದು ತಿಂಗಳಿಂದ ಪ್ಯಾರಿಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಮಾಜಿ ವೇಟ್‌ಲಿಫ್ಟರ್‌, ಅನಂತರ ಫಿಸಿಕಲ್‌ ಥೆರಪಿಸ್ಟ್‌ ಹಾಗೂ ಕಂಡೀಶನಿಂಗ್‌ ಕೋಚ್‌ ಆಗಿರುವ ಅಮೆರಿಕದ ಡಾ| ಏರಾನ್‌ ಹಾರ್ಶಿಗ್‌ ಅವರು 2020ರಿಂದ ಮೀರಾಬಾಯಿ ಅವರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.