Paris Olympics; ನೇರ ಸೆಟ್ ಗಳಿಂದ ಗೆದ್ದರೂ ಲಕ್ಷ್ಯ ಸೇನ್ ಫಲಿತಾಂಶವೇ ರದ್ದು! ಆಗಿದ್ದೇನು?


Team Udayavani, Jul 29, 2024, 12:55 PM IST

Paris Olympics; Despite winning in straight sets, Lakshya Sen’s result was canceled! Explained

ಪ್ಯಾರಿಸ್: ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್‌ (Paris Olympics) ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಗ್ರೂಪ್ ಎಲ್ ಪಂದ್ಯದಲ್ಲಿ ಗ್ವಾಟೆಮಾಲಾದ ಕೆವಿನ್ ಕಾರ್ಡನ್ ವಿರುದ್ಧ ಭಾರತದ ಷಟ್ಲರ್ ಲಕ್ಷ್ಯ ಸೇನ್ (Lakshya Sen) ಅವರು ಗೆಲುವು ಸಾಧಿಸಿದರೂ, ಆ ಫಲಿತಾಂಶವನ್ನು ಒಲಿಂಪಿಕ್ಸ್ ಸಂಸ್ಥೆ ಅಳಿಸಿ ಹಾಕಿದೆ.

ಎಡ ಮೊಣಕೈ ಗಾಯದ ಕಾರಣ ಗ್ವಾಟೆಮಾಲಾದ ಕೆವಿನ್ ಕಾರ್ಡನ್ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣದಿಂದ ಅವರ ವಿರುದ್ದದ ಲಕ್ಷ್ಯ ಸೇನ್ ಗೆಲುವನ್ನು ಅಳಿಸಲಾಗಿದೆ.

ಒಲಂಪಿಕ್ಸ್ ಡಾಟ್ ಕಾಮ್ ಪ್ರಕಾರ, ಕಾರ್ಡನ್ ತನ್ನ ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ ನಿಂದ ಹಿಂದೆ ಸರಿದಿದ್ದು, ಇದಕ್ಕಾಗಿ ಇಂಡೋನೇಷ್ಯಾದ ಜೊನಾಟನ್ ಕ್ರಿಸ್ಟಿ ಮತ್ತು ಬೆಲ್ಜಿಯಂನ ಜೂಲಿಯನ್ ಕರಾಗ್ಗಿ ವಿರುದ್ಧ ಮುಂಬರುವ ಎಲ್ ಗುಂಪಿನ ಪಂದ್ಯಗಳನ್ನು ಆಡಲಾಗುವುದಿಲ್ಲ. ಗುಂಪು ಹಂತದ ಆಟಕ್ಕಾಗಿ ಬಿಡಬ್ಲ್ಯೂಎಫ್ ಸಾಮಾನ್ಯ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ, ಲಕ್ಷ್ಯ ಸೇನ್ ಮತ್ತು ಕೆವಿನ್ ಕಾರ್ಡನ್ ನಡುವಿನ ಪಂದ್ಯದ ಫಲಿತಾಂಶವನ್ನು ಅಳಿಸಲಾಗಿದೆ.

ಎಲ್ ಗುಂಪಿನಲ್ಲಿ ಉಳಿದಿರುವ ಎರಡು ಪಂದ್ಯಗಳ ಫಲಿತಾಂಶಗಳ ಆಧಾರದ ಮೇಲೆ ಭಾರತೀಯ ಷಟ್ಲರ್ ಶ್ರೇಯಾಂಕವನ್ನು ಪಡೆಯುತ್ತಾರೆ. ಈತನ್ಮಧ್ಯೆ, ಲಕ್ಷ್ಯ ಸೇನ್ ಈಗ ಸೋಮವಾರ ಸಂಜೆ (ಜುಲೈ 29) ರಂದು ಜೂಲಿಯನ್ ಕರಾಗ್ಗಿ ಅವರನ್ನು ಎದುರಿಸಲಿದ್ದಾರೆ.

ಚಿರಾಗ್- ರಾಂಕಿರೆಡ್ಡಿ ಪಂದ್ಯ ರದ್ದು

ಭಾರತದ ಬ್ಯಾಡ್ಮಿಂಟನ್ ಡಬಲ್ಸ್ ತಾರೆಯರಾದ ಚಿರಾಗ್ ಶೆಟ್ಟಿ – ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಅವರ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್‌ಫಸ್ ವಿರುದ್ಧದ ಅವರು ಎರಡನೇ ಗುಂಪಿನ ಸಿ ಪಂದ್ಯವನ್ನು ಆಡಬೇಕಿತ್ತು.

ಆದರೆ ಮಾರ್ಕ್ ಮೊಣಕಾಲಿನ ಗಾಯದ ಕಾರಣದಿಂದ ಈ ಪಂದ್ಯ ರದ್ದುಗೊಳಿಸಲಾಗಿದೆ. ಹೀಗಾಗಿ ಭಾರತೀಯ ಜೋಡಿ ಮೂರನೇ ಪಂದ್ಯವನ್ನು ಗೆಲ್ಲಲೇಬೇಕಿದೆ. ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (BWF) ಹೇಳಿಕೆಯ ಪ್ರಕಾರ, ಮಾರ್ಕ್ ಲ್ಯಾಮ್ಸ್‌ಫಸ್ ಅವರು ಮೊಣಕಾಲಿನ ಗಾಯದಿಂದಾಗಿ ಒಲಿಂಪಿಕ್ ಗೇಮ್ಸ್ ಪ್ಯಾರಿಸ್ 2024 ಬ್ಯಾಡ್ಮಿಂಟನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.