Paralympics: ಇಂಗ್ಲಿಷ್‌ ಕಾಲುವೆಯಲ್ಲಿ ಸಾಗಲಿದೆ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌  ಜ್ಯೋತಿ


Team Udayavani, Aug 24, 2024, 10:32 PM IST

26

ಪ್ಯಾರಿಸ್‌: ಫ್ರಾನ್ಸ್‌ನ  ಖ್ಯಾತ ಈಜುಪಟು ಲಿಯಾನ್‌ ಮಾರ್ಚಂಡ್‌ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಜ್ಯೋತಿಯನ್ನು ನಂದಿಸಿದ ಎರಡೇ ವಾರಗಳಲ್ಲಿ ಪ್ಯಾರಿಸ್‌ನಲ್ಲಿ ಮತ್ತೂಂದು ಜ್ಯೋತಿ ಪ್ರಜ್ವಲಿಸಲಿದೆ. ಇದು ಪ್ಯಾರಾಲಿಂಪಿಕ್ಸ್‌ ಜ್ಯೋತಿ!

ಈ ಕ್ರೀಡಾಕೂಟ ಪ್ಯಾರಿಸ್‌ ಆತಿಥ್ಯ ದಲ್ಲೇ ಆ. 28ರಿಂದ ಸೆ. 8ರ ತನಕ ನಡೆಯಲಿದೆ. ಇದರ ಜ್ಯೋತಿಯನ್ನು ಶನಿವಾರ ಲಂಡನ್‌ ಸಮೀಪದ ಬಕಿಂಗ್‌ಹ್ಯಾಮ್‌ಶೈರ್‌ನ ಸ್ಟೋಕ್‌ ಮ್ಯಾಂಡೆವಿಲ್ಲೆಯಲ್ಲಿ ಬೆಳಗಿಸಲಾಯಿತು. ಇದು ಪ್ಯಾರಾಲಿಂಪಿಕ್ಸ್‌ ಜನ್ಮಸ್ಥಳ. ಇಲ್ಲಿಂದ ಈ ಜ್ಯೋತಿ 4 ದಿನಗಳ ಕಾಲ ಇಂಗ್ಲಿಷ್‌ ಕಾಲುವೆ ಮೂಲಕ ಪ್ಯಾರಿಸ್‌ಗೆ ಆಗಮಿಸಲಿದೆ. ಅಟ್ಲಾಂಟಿಕ್‌ ಮಹಾ ಸಾಗರದಿಂದ ಮೆಡಿಟರೇನಿಯನ್‌ ಕಿನಾರೆ, ಪೈರಿನೀಸ್‌-ಆಲ್ಫ್ ಪರ್ವತ ಶ್ರೇಣಿಯನ್ನು ಹಾದು ಬರಲಿದೆ. ಕ್ರೀಡಾಕೂಟದ ಆರಂಭದ ದಿನವಾದ ಬುಧವಾರ ಪ್ಯಾರಾಲಿಂಪಿಕ್ಸ್‌ ಜ್ಯೋತಿ ಪ್ಯಾರಿಸ್‌ ತಲುಪಲಿದೆ.

50 ಕಿ.ಮೀ. ದೂರದ ಇಂಗ್ಲಿಷ್‌ ಕಾಲುವೆಯಲ್ಲಿ, 24 ಮಂದಿ ಬ್ರಿಟಿಷ್‌ ಆ್ಯತ್ಲೀಟ್‌ಗಳ ತಂಡವೊಂದು ಈ ರಿಲೇ ಯಲ್ಲಿ ಪಾಲ್ಗೊಳ್ಳಲಿದೆ. ಅನಂತರ ಇದನ್ನು 24 ಸದಸ್ಯರ ಫ್ರಾನ್ಸ್‌ ಕ್ರೀಡಾಪಟುಗ ಳಿಗೆ ಹಸ್ತಾಂತರಿಸಲಾಗುವುದು. ಫ್ರಾನ್ಸ್‌ ತಲುಪಿದ ಬಳಿಕ ಸಾವಿರದಷ್ಟು ಟಾರ್ಚ್‌ ರಿಲೇ ಸದಸ್ಯರು ಇದನ್ನು ಕೊಂಡೊಯ್ಯಲಿದ್ದಾರೆ.

ಸೈನಿಕರ ಕ್ರೀಡಾಕೂಟ:

ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿ “ಸ್ಟೋಕ್‌ ಮ್ಯಾಂಡೆವಿಲ್ಲೆ ಗೇಮ್ಸ್‌’ ಹೆಸರಿನ ಕ್ರೀಡಾಕೂಟ 1948ರಲ್ಲಿ ಮೊದಲ ಸಲ ನಡೆದಿತ್ತು. ದ್ವಿತೀಯ ವಿಶ್ವಯುದ್ಧದಲ್ಲಿ ಅಂಗವೈಕಲ್ಯಕ್ಕೊಳಗಾದ ಕೆಲವು ಮಂದಿ ಸೈನಿಕರು ವೀಲ್‌ಚೇರ್‌ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

ಈ ಕ್ರೀಡಾಕೂಟದ ಕಲ್ಪನೆಯ ಹಿಂದಿ ರುವ ವ್ಯಕ್ತಿ ಲುಡ್ವಿಂಗ್‌ ಗಟ್‌ಮ್ಯಾನ್‌. ಯಹೂದಿ ಶಸ್ತ್ರಚಿಕಿತ್ಸಕರಾಗಿದ್ದ ಇವರು ಜರ್ಮನಿಯ ನಾಝಿ ಶಿಬಿರದಿಂದ ಪಲಾಯನಗೈದು, ಸ್ಟೋಕ್‌ ಮ್ಯಾಂಡೆವಿಲ್ಲೆ ಆಸ್ಪತ್ರೆಯಲ್ಲಿ ಕೆಲಸ ಮಾಡಿದರು.

ಬಳಿಕ ಈ ಕ್ರೀಡಾಕೂಟ ಪ್ಯಾರಾಲಿಂಪಿಕ್ಸ್‌ ಗೇಮ್ಸ್‌ ಎಂದು ಕರೆಯಲ್ಪಟ್ಟಿತು. 1960ರಲ್ಲಿ ಮೊದಲ ಸಲ ರೋಮ್‌ನಲ್ಲಿ ನಡೆಯಿತು. 2012ರ ಲಂಡನ್‌ ಪ್ಯಾರಾಲಿಂಪಿಕ್ಸ್‌ ವೇಳೆ ಸ್ಟೋಕ್‌ ಮ್ಯಾಂಡೆವಿಲ್ಲೆಯಲ್ಲಿ ಮೊದಲ ಸಲ ಕ್ರೀಡಾಜ್ಯೋತಿಯನ್ನು ಬೆಳಗಿಸಲಾಯಿತು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.