![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 20, 2020, 4:06 PM IST
ಹೊಸದಿಲ್ಲಿ: “ ಪ್ರಿಯ ಮಹೇಂದ್ರ, ಆಗಸ್ಟ್ 15ರಂದು ಎಂದಿನ ನಿರ್ಭೀತ ಶೈಲಿಯಲ್ಲಿ ನೀವು ಪೋಸ್ಟ್ ಮಾಡಿದ ಸಣ್ಣ ವಿಡಿಯೋ ಇಡೀ ರಾಷ್ಟ್ರವನ್ನೇ ಚರ್ಚೆಯ ಕೇಂದ್ರವನ್ನಾಗಿಸಲು ಕಾರಣವಾಯಿತು. ದೇಶದ 130 ಕೋಟಿ ಜನರು ನಿರಾಶರಾದರು ಆದರೆ ಒಂದುವರೆ ದಶಕದಿಂದ ಭಾರತೀಯ ಕ್ರಿಕೆಟ್ ಗೆ ನೀವು ಸಲ್ಲಿಸಿರುವ ಸೇವೆಗೆ ಖಂಡಿತ ಕೃತಜ್ಞರಾಗಿರುತ್ತಾರೆ” ಹೀಗೆಂದು ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಬರೆದಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಅವರು ಆಗಸ್ಟ್ 15ರಂದು ಸಂಜೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಭಾರತೀಯ ಕ್ರಿಕೆಟ್ ಗೆ ಧೋನಿ ನೀಡಿರುವ ಕೊಡುಗೆಗಾಗಿ ಪ್ರಧಾನಿ ಮೋದಿ ಎರಡು ಪುಟಗಳ ಸುದೀರ್ಘ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.
ಕಠಿಣ ಪರಿಸ್ಥಿತಿಯಲ್ಲಿ ದಿಟ್ಟವಾಗಿ ಆಡಿ ಪಂದ್ಯವನ್ನು ಮುಗಿಸುತ್ತಿದ್ದರು. ಅದರಲ್ಲೂ ವಿಶೇಷವಾಗಿ 2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೀವು ಬಾರಿಸಿದ ಸಿಕ್ಸರ್ ಜನಮಾನಸದಲ್ಲಿ ಸದಾ ಇರುತ್ತದೆ ಎಂದು ಪ್ರಧಾನಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಧೋನಿ, ಒಬ್ಬ ಕ್ರೀಡಾಪಟು, ಕಲಾವಿದ, ಸೈನಿಕರು ಮೆಚ್ಚುಗೆಗಾಗಿ ಹಂಬಲಿಸುತ್ತಾರೆ. ತಮ್ಮ ಪರಿಶ್ರಮ, ತ್ಯಾಗ ಮನ್ನಣೆಗೆ ಪಾತ್ರವಾಗಬೇಕು ಎಂದು ಅಪೇಕ್ಷಿಸುತ್ತಾರೆ. ತಮ್ಮ ಮೆಚ್ಚುಗೆ ಮತ್ತು ಶುಭಾಶಯಗಳಿಗೆ ಧನ್ಯವಾಗಳು ಎಂದು ಟ್ವೀಟ್ ಮಾಡಿದ್ದಾರೆ.
An Artist,Soldier and Sportsperson what they crave for is appreciation, that their hard work and sacrifice is getting noticed and appreciated by everyone.thanks PM @narendramodi for your appreciation and good wishes. pic.twitter.com/T0naCT7mO7
— Mahendra Singh Dhoni (@msdhoni) August 20, 2020
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.