![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 13, 2020, 10:13 AM IST
ದುಬಾೖ: ಮುಂದಿನ ವರ್ಷದ ವನಿತಾ ವಿಶ್ವಕಪ್ ಪಂದ್ಯಾವಳಿಯ ಹಾಗೂ 2022ರ ಪುರುಷರ ಅಂಡರ್-19 ವಿಶ್ವಕಪ್ ಕೂಟದ ಅರ್ಹತಾ ಸುತ್ತಿನ ಸ್ಪರ್ಧೆಗಳನ್ನು ಕೋವಿಡ್ ಕಾರಣದಿಂದ ಐಸಿಸಿ ಮಂಗಳವಾರ ಮುಂದೂಡಿತು. ವನಿತಾ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳಲಿವೆ. 7 ತಂಡಗಳು ನೇರ ಅರ್ಹತೆ ಪಡೆದಿವೆ. ಅರ್ಹತಾ ಸುತ್ತಿನಲ್ಲಿ ಮೊದಲ 3 ಸ್ಥಾನ ಪಡೆದ ತಂಡಗಳು ಪ್ರಧಾನ ಸುತ್ತು ಪ್ರವೇಶಿಸಲಿವೆ.
ಶ್ರೀಲಂಕಾ, ಬಾಂಗ್ಲಾದೇಶ, ಅಯರ್ಲ್ಯಾಂಡ್, ನೆದರ್ಲೆಂಡ್ಸ್, ಪಾಕಿಸ್ಥಾನ, ಪಪುವಾ ನ್ಯೂ ಗಿನಿ, ಥಾಯ್ಲೆಂಡ್, ಯುನೈಟೆಡ್ ಸ್ಟೇಟ್ಸ್, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸುವ ತಂಡಗಳಾಗಿವೆ. ಈ ಪಂದ್ಯಗಳು 2021ರ ಜುಲೈ 3ರಿಂದ 19ರ ತನಕ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ನ್ಯೂಜಿಲ್ಯಾಂಡ್ ವನಿತಾ ವಿಶ್ವಕಪ್ ಪಂದ್ಯಾವಳಿಯ ಆತಿಥ್ಯ ವಹಿಸಲಿದೆ.
“ಎಲ್ಲ ದೇಶಗಳ ಕ್ರಿಕೆಟ್ ಮಂಡಳಿಗಳ ಜತೆಗೆ, ಸ್ಥಳೀಯ ಆರೋಗ್ಯ ಸಂಸ್ಥೆಗಳೊಂದಿಗೆ ಚರ್ಚಿಸಿ ಅರ್ಹತಾ ಪಂದ್ಯಾವಳಿಯನ್ನು ಮುಂದೂಡಲು ನಿರ್ಧರಿಸಲಾಯಿತು. ನೂತನ ದಿನಾಂಕವನ್ನು ಅತಿ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಅಂಡರ್-19 ವಿಶ್ವಕಪ್
ಪುರುಷರ 2022ರ ಅಂಡರ್-19 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ 2022ರಂದು ನಡೆಯಲಿದೆ. ಇದಕ್ಕಾಗಿ ಯುರೋಪ್ ವಲಯದ ಅರ್ಹತಾ ಸುತ್ತಿನ ಸ್ಪರ್ಧೆ ಇದೇ ಜುಲೈ 24ರಿಂದ 30ರ ತನಕ ಡೆನ್ಮಾರ್ಕ್ನಲ್ಲಿ ನಡೆಯಬೇಕಿತ್ತು. ಇದನ್ನೂ ಈಗ ಮುಂದೂಡಲಾಗಿದೆ. ನೂತನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಐಸಿಸಿ ಸಂಘಟನಾ ಮುಖ್ಯಸ್ಥ ಕ್ರಿಸ್ ಟೆಟಿÉ ಹೇಳಿದ್ದಾರೆ. ಹಾಗೆಯೇ ಟಾಂಜಾನಿಯಾದಲ್ಲಿ ನಡೆಯಬೇಕಿದ್ದ ಆಫ್ರಿಕಾ ವಲಯದ (ಆ. 7-14) ಹಾಗೂ ಥಾಯ್ಲೆಂಡ್ನಲ್ಲಿ ಆಡಬೇಕಿದ್ದ ಏಶ್ಯ ವಲಯದ (ಡಿ. 1-19) ಡಿವಿಷನ್-2 ಅರ್ಹತಾ ಸುತ್ತಿನ ಪಂದ್ಯಗಳಿಗೂ ನೂತನ ದಿನಾಂಕವನ್ನು ಪ್ರಕಟಿಸಲಾಗುವುದು. ಡಿವಿಷನ್-1ರ ಎಲ್ಲ 5 ವಿಭಾಗಗಳ ಅರ್ಹತಾ ಪಂದ್ಯಗಳು 2021ರಲ್ಲಿ ನಡೆಯಲಿವೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.