![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 20, 2021, 5:06 AM IST
ಕುಂದಾಪುರ: ವಿಶ್ವಶ್ರೇಷ್ಠ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಶುಕ್ರವಾರ ಹುಟ್ಟೂರಾದ ಪಡುಕೋಣೆಗೆ ಆಗಮಿಸಿ ಕೆಲಕಾಲ ಕಳೆದರು.
ಗುರುವಾರವಷ್ಟೇ ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್ನ ಪ್ರತಿಷ್ಠಿತ ಜೀವಮಾನ ಸಾಧನೆಗೆ ನೀಡುವ ಪ್ರಶಸ್ತಿ ಪುರಸ್ಕೃತರಾಗಿದ್ದ ಪ್ರಕಾಶ್ ಪಡುಕೋಣೆ, ಈ ಸಂದರ್ಭವೇ ಹುಟ್ಟೂರಿಗೆ ಆಗಮಿಸಿರುವುದು ವಿಶೇಷ.
ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಪ್ರಕಾಶ್ ಪಡುಕೋಣೆ ಅವರಿಗೆ ಶಾಲೆಯ ವತಿಯಿಂದ ಆತ್ಮೀಯ ಸ್ವಾಗತ ನೀಡಲಾಯಿತು. ಕೆಲಹೊತ್ತು ವಿದ್ಯಾರ್ಥಿಗಳೊಂದಿಗೆ ಕಾಲ ಕಳೆದು ಪ್ರೋತ್ಸಾಹದ ಮಾತುಗಳನ್ನಾಡಿದರು. ವಿದ್ಯಾರ್ಥಿಗಳು ಕ್ರೀಡೆ ಸಹಿತ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆಯೋ ಅದರತ್ತ ಹೆಚ್ಚಿನ ಗಮನಕೊಡಬೇಕು ಎಂದು ಹುರಿದುಂಬಿಸಿದರು.
ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಕಾಶ್ ಪಡುಕೋಣೆ, ಪತ್ನಿ ಉಜ್ವಲಾ ಪ್ರಕಾಶ್ ಪಡುಕೋಣೆ ಅವರನ್ನು ಅಭಿನಂದಿಸಲಾಯಿತು. ನಾಗರಾಜ ಬಿ. ಪಡುಕೋಣೆ ಮತ್ತು ಪ್ರವೀಣ ಪಡುಕೋಣೆ ಪ್ರಕಾಶ್ ಪಡುಕೋಣೆಯವರನ್ನು ಬರಮಾಡಿಕೊಂಡರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಅಭಿನಂದನಾ ಮಾತುಗಳನ್ನಾಡಿದರು.
ಇದನ್ನೂ ಓದಿ:ಟೀಮ್ ಇಂಡಿಯಾ ಸರಣಿ ಜಯಭೇರಿ
ಮಕ್ಕಳಿಗೆ ಸಂಭ್ರಮ
ವಿಶ್ವ ಶ್ರೇಷ್ಠ ಬ್ಯಾಡ್ಮಿಂಟನ್ ತಾರೆ ಪ್ರಕಾಶ್ ಪಡುಕೋಣೆ ಅವರು ತಮ್ಮ ಶಾಲೆಗೆ ಭೇಟಿ ನೀಡಿರುವುದನ್ನು ಕಂಡು ಮಕ್ಕಳು ಅತೀವ ಸಂಭ್ರಮಪಟ್ಟರು. ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು.
ಬಳಿಕ ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಅವರ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಪ್ರಕಾಶ್ ಪಡುಕೋಣೆಯವರಿಗೆ “ಜನಾಧಿಕಾರ’ ಪುಸ್ತಕವನ್ನು ಹಸ್ತಾಂತರಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಸರೀಟಾ ಪಾಯಸ್, ಶಿಕ್ಷಕ ವೃಂದ, ಊರಿನ ಪ್ರಮುಖರು ಉಪಸ್ಥಿತರಿದ್ದರು. ಪ್ರಕಾಶ್ ಪಡುಕೋಣೆ ಅವರೊಂದಿಗೆ ಸ್ನೇಹಿತರಾದ ಶಿರಿಸ್ ಗುಜ್ಜಾರ್ ದಂಪತಿ ಸಹ ಆಗಮಿಸಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.