![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 16, 2024, 6:00 AM IST
ಪಂಚಕುಲ: ಪ್ರೊ ಕಬಡ್ಡಿ ಹತ್ತನೇ ಆವೃತ್ತಿ ಕೊನೆ ಹಂತಕ್ಕೆ ತಲುಪಿದೆ. ಸ್ಪರ್ಧೆಯಲ್ಲಿರುವ 12 ತಂಡಗಳಲ್ಲಿ ಈಗಾಗಲೇ 5 ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಗಳಿಸಿವೆ. ಇನ್ನೊಂದು ತಂಡ ಯಾವುದೆಂದು ಈ ವಾರ ಖಚಿತವಾಗಲಿದೆ.
ಹರಿಯಾಣ ಸ್ಟೀಲರ್ ತಂಡ ತವರು ನೆಲವಾದ ಪಂಚಕುಲದಲ್ಲಿ ನಾಲ್ಕು ಪಂದ್ಯ ಆಡಲಿದೆ. ಹೀಗಾಗಿ ಹರಿಯಾಣಕ್ಕೆ ಮುನ್ನಡೆಯಲು ಹೆಚ್ಚಿನ ಅವಕಾಶವಿದೆ. ಹರಿಯಾಣವು ಶುಕ್ರವಾರ ನಡೆಯುವ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡವನ್ನು ಎದುರಿಸಲಿದೆ. ಇನ್ನೊಂದು ಪಂದ್ಯವು ಜೈಪುರ ಪಿಂಕ್ ಪ್ಯಾಂಥರ್ ಮತ್ತು ತೆಲುಗು ಟೈಟಾನ್ಸ್ ನಡುವೆ ಜರಗಲಿದೆ.
ಪುನೇರಿಗೆ ಅಗ್ರಸ್ಥಾನ
86 ಅಂಕ ಗಳಿಸಿರುವ ಪುನೇರಿ ಪಲ್ಟಾನ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 82 ಅಂಕ ಹೊಂದಿರುವ ಜೈಪುರ ಪಿಂಕ್ ಪ್ಯಾಂಥರ್ ದ್ವಿತೀಯ ಸ್ಥಾನದಲ್ಲಿದೆ. ದಬಾಂಗ್ ಡೆಲ್ಲಿ, ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ಕೂಡ ಮುಂದಿನ ಸುತ್ತಿಗೆ ಅರ್ಹತೆ ಗಳಿಸಿದೆ. ಆರನೇ ಸ್ಥಾನದಲ್ಲಿರುವ ಹರಿಯಾಣ 20 ಅಂಕ ಹೊಂದಿದ್ದರೆ 7ನೇ ಸ್ಥಾನದಲ್ಲಿರುವ ಬೆಂಗಾಲ್ ವಾರಿಯರ್ 55 ಅಂಕ ಹೊಂದಿದ್ದು ಮುನ್ನಡೆಯುವ ಅವಕಾಶಕ್ಕಾಗಿ ಹೋರಾಡಲಿದೆ.
ಅಂಕಪಟ್ಟಿಯ ಅಗ್ರ ಎರಡು ತಂಡಗಳು ನೇರವಾಗಿ ಸೆಮಿಫೈನಲಿಗೇರಲಿವೆ. ಅಂಕಪಟ್ಟಿಯ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಮೊದಲ ಎಲಿಮಿನೇಟರ್ ಹಾಗೂ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಆಡಲಿವೆ. ಆಬಳಿಕ ಸೆಮಿಫೈನಲ್ ಪಂದ್ಯಗಳು ನಡೆಯಲಿವೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.