“ತ್ರಿವಳಿಗಳಿಂದ ಶ್ರೇಷ್ಠ ನಿರ್ವಹಣೆ ನಿರೀಕ್ಷೆ’: ರಾಹುಲ್‌ ದ್ರಾವಿಡ್‌


Team Udayavani, Jun 8, 2022, 6:40 AM IST

thumb 2

ಹೊಸದಿಲ್ಲಿ: ತ್ರಿವಳಿ ಆಟಗಾರರಾದ ರೋಹಿತ್‌ ಶರ್ಮ, ಕೆಎಲ್‌ ರಾಹುಲ್‌ ಮತ್ತು ವಿರಾಟ್‌ ಕೊಹ್ಲಿ ಅವರು ಐಪಿಎಲ್‌ನಲ್ಲಿ ನೀಡಿದ ನಿರ್ವಹಣೆಗೆ ತೀವ್ರತರದ ಟೀಕೆಗೆ ಒಳಗಾಗಿದ್ದರೂ ಮುಂಬರುವ ದಿನಗ ಳಲ್ಲಿ ಅವರಿಂದ ಶ್ರೇಷ್ಠ ನಿರ್ವಹಣೆಯನ್ನು ನಿರೀಕ್ಷಿಸುವೆ ಎಂದು ಭಾರತೀಯ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಹೇಳಿದ್ದಾರೆ.

ಕಳೆದ ಟಿ20 ವಿಶ್ವಕಪ್‌ನ ಪವರ್‌ಪ್ಲೇ ಆಟದ ವೇಳೆ ರೋಹಿತ್‌, ರಾಹುಲ್‌ ಮತ್ತು ಕೊಹ್ಲಿ ಅವರ ಆಟವನ್ನು ಗಮನಿ ಸಲಾಗಿದೆ. ಮುಂಬರುವ ವಿಶ್ವಕಪ್‌ಗೆ ಮುಂಚಿತವಾಗಿ ಅವರೆಲ್ಲ ತಮ್ಮ ಗುಣ ಮಟ್ಟ ಮತ್ತು ಸಾಮರ್ಥ್ಯಕ್ಕೆ ಅನುಗುಣ ವಾಗಿ ಉತ್ತಮ ನಿರ್ವಹಣೆ ನೀಡುವ ವಿಶ್ವಾಸವಿದೆ ಎಂದವರು ಹೇಳಿದರು.

ನಮ್ಮ ಅಗ್ರ ಮೂವರು ಆಟಗರಾರ ಸಾಮರ್ಥ್ಯ, ಗುಣಮಟ್ಟ ನಮಗೆ ತಿಳಿದಿದೆ. ಅವರು ಶ್ರೇಷ್ಠ ಮಟ್ಟದ ಆಟಗಾರರು. ಪರಿಸ್ಥಿತಿಗೆ ತಕ್ಕಂತೆ ಅವರು ಆಡುವ ನಿರೀಕ್ಷೆ ನಮ್ಮದು ಎಂದವರು ಹೇಳಿದರು. ಭಾರತೀಯ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರ ಣಿಯ ಮೊದಲ ಪಂದ್ಯಕ್ಕಾಗಿ ಅಭ್ಯಾಸ ನಿರತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಈ ಸರಣಿಗೆ ರೋಹಿತ್‌ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಟಿಕೆಟ್‌ ಖಾಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿರುವ ಮೊದಲ ಟಿ20 ಪಂದ್ಯದ ಶೇಕಡಾ 94ರಷ್ಟು ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ. 35 ಸಾವಿರ ಆಸನ ಸಾಮರ್ಥ್ಯದ ಈ ಮೈದಾನದಲ್ಲಿ ಇನ್ನು 400ರಿಂದ 500 ಟಿಕೆಟ್‌ಗಳು ಬಾಕಿ ಉಳಿದಿವೆ ಎಂದು ಡಿಡಿಸಿಎ ಜಂಟಿ ಕಾರ್ಯದರ್ಶಿ ರಾಜನ್‌ ಮಂಚಂದ ಹೇಳಿದ್ದಾರೆ.

2019ರ ನವೆಂಬರ್‌ ಬಳಿಕ ಇದೇ ಮೊದಲ ಬಾರಿ ಅಂತಾರಾಷ್ಟ್ರೀಯ ಪಂದ್ಯ ವೊಂದು ದಿಲ್ಲಿಯಲ್ಲಿ ನಡೆಯುತ್ತಿದೆ. ಸುಮಾರು 27 ಸಾವಿರ ಟಿಕೆಟ್‌ಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಪ್ರೇಕ್ಷಕರನ್ನು ಆಕರ್ಷಿಸುವ ಸಲುವಾಗಿ ಹಿರಿಯ ನಾಗರಿಕರು ಕ್ರೀಡಾಂಗಣಕ್ಕೆ ಪ್ರವೇಶಿಸಲು ಗಾಲ್ಫ್ ಕಾರ್ಟ್‌ ಬಳಸಲು ಅವಕಾಶ ಕಲ್ಪಿಸಲಾಗಿದೆ.

ಯಶಸ್ವಿ ನಾಯಕರು
ಐಪಿಎಲ್‌ ಕೂಟದಲ್ಲಿ ಭಾರತೀಯ ಆಟಗಾರರು ನಾಯಕರಾಗಿಯೂ ಯಶಸ್ಸು ಸಾಧಿಸಿರುವುದು ಭಾರತೀಯ ತಂಡಕ್ಕೆ ಹೆಚ್ಚಿನ ಲಾಭ ತರಲಿದೆ. ನಾಯಕತ್ವದ ಗುಣವು ಕ್ರಿಕೆಟಿಗರ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ದ್ರಾವಿಡ್‌ ಅಭಿಪ್ರಾಯಪಟ್ಟಿದ್ದಾರೆ.

ಹಾರ್ದಿಕ್‌ ಪಾಂಡ್ಯ ನೇತೃತ್ವದ ಗುಜರಾತ್‌ ಟೈಟಾನ್ಸ್‌ ಚೊಚ್ಚಲ ಪ್ರವೇಶದಲ್ಲಿಯೇ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಕೆಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌ ಮತ್ತು ಸಂಜು ಸ್ಯಾಮ್ಸನ್‌ ಕೂಡ ತಮ್ಮ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಹಲವು ಭಾರತೀಯ ನಾಯಕರು ಶ್ರೇಷ್ಠ ನಿರ್ವಹಣೆ ನೀಡುತ್ತಿರುವುದು ಒಳ್ಳೆಯ ವಿಷಯವಾಗಿದೆ. ಹಾರ್ದಿಕ್‌ ಅವರಲ್ಲಿ ಒಬ್ಬರಾಗಿದ್ದಾರೆ. ಲಕ್ನೋ ತಂಡದ ಪರ ಕೆಎಲ್‌ ಶ್ರೇಷ್ಠ ನಿರ್ವಹಣೆ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೆ ಐಪಿಎಲ್‌ನಲ್ಲಿ ಉತ್ತಮ ನಿರ್ವಹಣೆ ನೀಡಿದ ಯುವ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ತಂಡದಲ್ಲಿರುವುದು ಒಳ್ಳೆಯ ಸೂಚನೆ ಮತ್ತು ಅವರಿಂದ ಉತ್ತಮ ನಿರ್ವಹಣೆಯನ್ನು ನಿರೀಕ್ಷಿಸಲಾಗಿದೆ ಎಂದು ರಾಹುಲ್‌ ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.