Dharamsala Test ; ಕೆ.ಎಲ್.ರಾಹುಲ್ ಆಡುವ ಸಾಧ್ಯತೆ ವಿರಳ: ಬುಮ್ರಾ ತಂಡಕ್ಕೆ

ಅಭಿಪ್ರಾಯವನ್ನು ಪಡೆಯಲು ಲಂಡನ್‌ಗೆ ಪ್ರಯಾಣ...

Team Udayavani, Feb 28, 2024, 4:57 PM IST

K L RAhul

ಧರ್ಮಶಾಲಾ: ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ ಮ್ಯಾನ್ ಕೆ.ಎಲ್. ರಾಹುಲ್ ಅವರು ಆಡುವ ಸಾಧ್ಯತೆ ವಿರಳ ಎಂದು ಹೇಳಲಾಗಿದೆ.

ಜನವರಿಯಲ್ಲಿ ಹೈದರಾಬಾದ್‌ನಲ್ಲಿ ನಡೆದ ಸರಣಿ ಆರಂಭ ಪಂದ್ಯದ ನಂತರ ರಾಹುಲ್ ಅವರು ಬಲ ತೊಡೆಯ ನೋವಿನಿಂದ ಅಲಭ್ಯರಾಗಿದ್ದರು. ಆದರೆ ಬಿಸಿಸಿಐ ಪ್ರಕಾರ, ಈ ತಿಂಗಳ ಆರಂಭದಲ್ಲಿ ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್‌ಗೆ ಮೊದಲು ಅವರು 90 ಪ್ರತಿಶತದಷ್ಟು ಫಿಟ್ ಆಗಿದ್ದರು.

ಸದ್ಯ ಗಾಯದ ಬಗ್ಗೆ ತಜ್ಞರ ಅಭಿಪ್ರಾಯವನ್ನು ಪಡೆಯಲು ಲಂಡನ್‌ಗೆ ಪ್ರಯಾಣಿಸಿದ್ದು, ಸರಣಿಯ ಮಾರ್ಚ್ 7 ರಿಂದ ಪ್ರಾರಂಭವಾಗುವ ಧರ್ಮಶಾಲಾ ಟೆಸ್ಟ್‌ನಲ್ಲಿ ಅವರನ್ನು ಆಡಲಿಳಿಸುವ  ಅಪಾಯವನ್ನು ಭಾರತ ತಂಡದ ಮ್ಯಾನೇಜ್ಮೆಂಟ್ ತೆಗೆದುಕೊಳ್ಳುವುದಿಲ್ಲ.

ಲಕ್ನೋ ಸೂಪರ್ ಜೈಂಟ್ಸ್ ಅನ್ನು ಮುನ್ನಡೆಸಲಿರುವ ರಾಹುಲ್ ಐಪಿಎಲ್‌ಗೆ ಮೊದಲು ಸಂಪೂರ್ಣವಾಗಿ ಫಿಟ್ ಆಗಿರಬೇಕಾಗಿದ್ದು, ಆಬಳಿಕ ಮತ್ತು ಯು ಎಸ್ ಮತ್ತು ಕೆರಿಬಿಯನ್‌ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗಿದೆ.

”ತಜ್ಞರ ಅಭಿಪ್ರಾಯವನ್ನು ಪಡೆಯಲು ಲಂಡನ್‌ಗೆ ಪ್ರಯಾನಿಸಿದ್ದು, ಬ್ಯಾಟಿಂಗ್ ಮಾಡುವಾಗ ಬಲ ತೊಡೆಯಲ್ಲಿ ಸ್ವಲ್ಪ ನೋವು ಅನುಭವಿಸುತ್ತಾರೆ. ತಂಡಕ್ಕೆ ದೀರ್ಘಾವಧಿಯ ಅಗತ್ಯವಿರುವ ಆಟಗಾರನಾಗಿರುವುದರಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಅವರ ದಾರಿಯಲ್ಲಿ ತುಂಬಾ ಸ್ಪರ್ಧೆ ಇದ್ದು, ಐಪಿಎಲ್, ಟಿ 20 ವಿಶ್ವಕಪ್ ನಲ್ಲಿಯೂ ಇರಬಹುದು. ನಂತರ ನಾವು ನ್ಯೂಜಿ ಲ್ಯಾಂಡ್ ವಿರುದ್ಧ ಕೆಲವು ಪ್ರಮುಖ ಟೆಸ್ಟ್ ಸರಣಿಗಳನ್ನು ಆಡಲಿದ್ದೇವೆ. ಅವರು ಆಡುವುದಕ್ಕಿಂತ ಸರಿಯಾಗಿ ಚೇತರಿಸಿಕೊಳ್ಳಲು ಸಮಯ ನೀಡುವುದು ಉತ್ತಮ ಎಂದು ಮ್ಯಾನೇಜ್ಮೆಂಟ್ ಅಭಿಪ್ರಾಯ ಹೊಂದಿರುವುದಾಗಿ ಐಪಿಎಲ್ ಮೂಲಗಳು ಪಿಟಿಐಗೆ ತಿಳಿಸಿವೆ.

ಟೆಸ್ಟ್‌ ಸರಣಯಲ್ಲಿ ರಾಹುಲ್ ಜಾಗದಲ್ಲಿ ರಜತ್ ಪಾಟಿದಾರ್ ತಂಡದಲ್ಲಿದ್ದರು. ಆದರೆ ಆರು ಇನ್ನಿಂಗ್ಸ್‌ಗಳಲ್ಲಿ ಕೇವಲ 63 ರನ್ ಗಳಿಸಿರುವ ಕಾರಣ ಆಡುವ ಹನ್ನೊಂದರ ಬಳಗದಲ್ಲಿ ಅವರ ಸ್ಥಾನವನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲವಾಗಿದೆ. ಧರ್ಮಶಾಲಾದಲ್ಲಿ ದೇವದತ್ ಪಡಿಕ್ಕಲ್‌ಗೆ ಅವಕಾಶ ಸಿಗುವ ಸಾಧ್ಯತೆಯಿದೆ.

ಬುಮ್ರಾ ವಾಪಸ್

ರಾಂಚಿ ಟೆಸ್ಟ್‌ ಪಂದ್ಯಕ್ಕೆ ವಿಶ್ರಾಂತಿ ಪಡೆದಿದ್ದ ಭಾರತದ ಪ್ರೀಮಿಯರ್ ವೇಗಿ ಜಸ್ಪ್ರೀತ್ ಬುಮ್ರಾ ಅವರು ಬೌಲಿಂಗ್ ದಾಳಿಯನ್ನು ಮುನ್ನಡೆಸುವ ನಿರೀಕ್ಷೆಯಿದೆ. ಸರಣಿಯನ್ನು ಗೆದ್ದಾಗಿದೆಯಾದರೂ ರೆ ಪ್ರತಿ ಟೆಸ್ಟ್ ಪಂದ್ಯವು ನಿರ್ಣಾಯಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಗಳನ್ನು ನೀಡುತ್ತದೆ ಮತ್ತು ಧರ್ಮಶಾಲಾದ ತಂಪಾದ ವಾತಾವರಣದಲ್ಲಿ ಬುಮ್ರಾ ದೊಡ್ಡ ಪಾತ್ರವನ್ನು ವಹಿಸುವ ನಿರೀಕ್ಷೆ ಇರಿಸಲಾಗಿದೆ.

ಭಾರತ ಐದು ಗೆಲುವು, ಎರಡು ಸೋಲು ಹಾಗೂ ಒಂದು ಡ್ರಾದೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ನ್ಯೂಜಿ ಲ್ಯಾಂಡ್ 75 ಗೆಲುವಿನ ಶೇಕಡಾವಾರು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಅವರು ಕೇವಲ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.