IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ


Team Udayavani, Apr 22, 2024, 11:48 PM IST

1-eewqewqe

ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 9 ವಿಕೆಟ್ ಗಳ ಅತ್ಯಮೋಘ ಜಯ ಸಾಧಿಸಿ ಯಶಸ್ವಿ ಗೆಲುವಿನ ಅಭಿಯಾನ ಮುಂದುವರಿಸಿದೆ.

ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 9 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

ಗುರಿ ಬೆನ್ನಟ್ಟಿದ ರಾಜಸ್ಥಾನ್ ಪರ ಯಶಸ್ವಿ ಜೈಸ್ವಾಲ್ ಅಮೋಘ ಶತಕ ಸಿಡಿಸಿ ಅಜೇಯರಾಗಿ ಉಳಿದರು.60 ಎಸೆತಗಳಲ್ಲಿ 104 ರನ್ ಗಳಿಸಿದರು. 9ಬೌಂಡರಿ ಮತ್ತು 7 ಭರ್ಜರಿ ಸಿಕ್ಸರ್ ಸಿಡಿಸಿದರು. ಸಾಥ್ ನೀಡಿದ ಜೋಸ್ ಬಟ್ಲರ್ 35 ರನ್ ಗಳಿಸಿ ಔಟಾದರು. ಸಂಜು ಸ್ಯಾಮ್ಸನ್ ಔಟಾಗದೆ 38 ರನ್ ಗಳಿಸಿದರು. 18.4 ಓವರ್ ಗಳಲ್ಲಿ ಒಂದು ವಿಕೆಟ್ ಮಾತ್ರ ಕಳೆದುಕೊಂಡು 183 ರನ್ ಗಳಿಸಿ ಜಯ ಸಂಭ್ರಮಿಸಿತು.

ರಾಜಸ್ಥಾನ್ ಆಡಿದ 8 ಪಂದ್ಯಗಳಲ್ಲಿ 7 ಗೆಲುವು ಪಡೆದು ಅಂಕಪಟ್ಟಿಯಲ್ಲಿ ಆಗ್ರ ಸ್ಥಾನಿಯಾಗಿದೆ. ಮುಂಬೈ ಆಡಿದ 8 ನೇ ಪಂದ್ಯದಲ್ಲಿ 5 ನೇ ಸೋಲು ಅನುಭವಿಸಿತು.

ತಿಲಕ್‌ ವರ್ಮ ಮತ್ತು ಸಂದೀಪ್‌ ಶರ್ಮ ಕ್ರಮವಾಗಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಮಿಂಚಿದ್ದಾರೆ. ತಿಲಕ್‌ ಅರ್ಧ ಶತಕ ಬಾರಿಸಿ ಮುಂಬೈಯನ್ನು ಆಧರಿಸಿದರೆ, ಸಂದೀಪ್‌ ಶರ್ಮ 5 ವಿಕೆಟ್‌ ಉಡಾಯಿಸಿ ಘಾತಕವಾಗಿ ಪರಿಣಮಿಸಿದರು.

ತಿಲಕ್‌ ಗಳಿಕೆ 65 ರನ್‌ (45 ಎಸೆತ, 5 ಬೌಂಡರಿ, 3 ಸಿಕ್ಸರ್‌). ನೇಹಲ್‌ ವಧೇಲ 49 ರನ್‌ ಕೊಡುಗೆ ಸಲ್ಲಿಸಿದರು (24 ಎಸೆತ, 3 ಫೋರ್‌, 4 ಸಿಕ್ಸರ್‌). ಸಂದೀಪ್‌ ಶರ್ಮ ಸಾಧನೆ 18ಕ್ಕೆ 5 ವಿಕೆಟ್‌.

ಟ್ರೆಂಟ್‌ ಬೌಲ್ಟ್ 5ನೇ ಎಸೆತದಲ್ಲೇ ರೋಹಿತ್‌ ಶರ್ಮ (6) ವಿಕೆಟ್‌ ಉರುಳಿಸಿ ರಾಜಸ್ಥಾನಕ್ಕೆ ಮೇಲುಗೈ ಒದಗಿಸಿದರು. ಇದರೊಂದಿಗೆ ಬೌಲ್ಟ್ ಮೊದಲ ಓವರ್‌ನಲ್ಲೇ 26 ವಿಕೆಟ್‌ ಕೆಡವಿ ಐಪಿಎಲ್‌ ದಾಖಲೆ ಬರೆದರು. ಭುವನೇಶ್ವರ್‌ ಕುಮಾರ್‌ ದ್ವಿತೀಯ ಸ್ಥಾನಕ್ಕೆ ಇಳಿದರು.

ಸಂದೀಪ್‌ ಶರ್ಮ ಕೂಡ ಮೊದಲ ಓವರ್‌ನಲ್ಲೇ ಯಶಸ್ಸು ಸಾಧಿಸಿದರು. ಖಾತೆ ತೆರೆಯದ ಇಶಾನ್‌ ಕಿಶನ್‌ ಪೆವಿಲಿಯನ್‌ ಸೇರಿಕೊಂಡರು. ಇವರ ಕ್ಯಾಚ್‌ ಕೂಡ ಸ್ಯಾಮ್ಸನ್‌ ಪಾಲಾಯಿತು.

ಬೌಲ್ಟ್ಗೆ ಬೌಂಡರಿ ರುಚಿ ತೋರಿಸಿದ ಸೂರ್ಯಕುಮಾರ್‌ ಆಟ ಸಂದೀಪ್‌ ಶರ್ಮ ಮುಂದೆ ನಡೆಯಲಿಲ್ಲ. ತಮ್ಮ 2ನೇ ಓವರ್‌ನ ಮೊದಲ ಎಸೆತದಲ್ಲೇ ಅವರು ಈ ಬಿಗ್‌ ಹಿಟ್ಟಿಂಗ್‌ ಬ್ಯಾಟರ್‌ನ ವಿಕೆಟ್‌ ಉಡಾಯಿಸಿದರು.

ಸೂರ್ಯ ಗಳಿಕೆ 10 ರನ್‌ ಮಾತ್ರ. 20ಕ್ಕೆ 3 ವಿಕೆಟ್‌ ಕಳೆದುಕೊಂಡ ಮುಂಬೈ ತೀವ್ರ ಸಂಕಟಕ್ಕೆ ಸಿಲುಕಿತು. ಸ್ಕೋರ್‌ 50ರ ಗಡಿ ದಾಟಿದೊಡನೆ ನಬಿ (23) ಚಹಲ್‌ಗೆ ರಿಟರ್ನ್ ಕ್ಯಾಚ್‌ ನೀಡಿದರು.

ಈ ಸಂದಿಗ್ಧ ಸ್ಥಿತಿಯಲ್ಲಿ ಜತೆಗೂಡಿದ ತಿಲಕ್‌ ವರ್ಮ-ನೇಹಲ್‌ ವಧೇರ 99 ರನ್‌ ಜತೆಯಾಟದ ಮೂಲಕ ತಂಡವನ್ನು ಹೋರಾಟಕ್ಕೆ ಅಣಿಗೊಳಿಸಿದರು.

ಹಾರ್ದಿಕ್‌ ಪಾಂಡ್ಯ 100 ಪಂದ್ಯ

ಈ ಪಂದ್ಯದೊಂದಿಗೆ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ಪರ 100 ಐಪಿಎಲ್‌ ಪಂದ್ಯಗಳನ್ನಾಡಿದ ಹಿರಿಮೆಗೆ ಪಾತ್ರರಾದರು. ಅವರು ಎಂದೋ ಈ ಸಾಧನೆ ಮಾಡಬೇಕಿತ್ತು. ಆದರೆ 2 ವರ್ಷಗಳ ಕಾಲ ಗುಜರಾತ್‌ ಟೈಟಾನ್ಸ್‌ ತಂಡವನ್ನು ಪ್ರತಿನಿಧಿಸಿದ ಕಾರಣ ವಿಳಂಬಗೊಂಡಿತು.

ಪಾಂಡ್ಯ 100 ಪಂದ್ಯಗಳಲ್ಲಿ ಮುಂಬೈಯನ್ನು ಪ್ರತಿನಿಧಿಸಿದ 7ನೇ ಆಟಗಾರ. ಉಳಿದವರೆಂದರೆ ರೋಹಿತ್‌ ಶರ್ಮ (215), ಕೈರನ್‌ ಪೊಲಾರ್ಡ್‌ (211), ಹರ್ಭಜನ್‌ ಸಿಂಗ್‌ (158), ಲಸಿತ ಮಾಲಿಂಗ (139), ಅಂಬಾಟಿ ರಾಯುಡು (136) ಮತ್ತು ಜಸ್‌ಪ್ರೀತ್‌ ಬುಮ್ರಾ (131).

ಮುಂಬೈ ಪರ ಆಡಿದ ಈವರೆಗಿನ 99 ಪಂದ್ಯ ಗಳಲ್ಲಿ ಹಾರ್ದಿಕ್‌ ಪಾಂಡ್ಯ 37.86ರ ಸರಾಸರಿಯಲ್ಲಿ
1,617 ರನ್‌ ಪೇರಿಸಿದ್ದಾರೆ. ಸ್ಟ್ರೈಕ್‌ರೇಟ್‌ 133.49. ಉರುಳಿಸಿದ ವಿಕೆಟ್‌ಗಳ ಸಂಖ್ಯೆ 36. ಪ್ರಸಕ್ತ ಋತುವಿನಲ್ಲಿ ಮುಂಬೈ ಪರ 7 ಪಂದ್ಯಗಳನ್ನಾಡಿದ್ದು, 141 ರನ್‌ ಮತ್ತು 4 ವಿಕೆಟ್‌ ಗಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.