![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 26, 2022, 2:22 PM IST
ಲಾಹೋರ್: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾ ಕಪ್ ನಲ್ಲಿ ಭಾರತ ತಂಡ ಭಾಗವಹಿಸದಿದ್ದರೆ, ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ತಮ್ಮ ತಂಡವೂ ಆಡುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ರಮೀಜ್ ರಾಜಾ ಹೇಳಿದ್ದಾರೆ.
ಮುಂದಿನ ವರ್ಷ ಈ ಎರಡೂ ಕೂಟಗಳು ನಡೆಯಲಿದ್ದು, ವಿಶ್ವಕಪ್ ಗಿಂತ ಮೊದಲು ಏಷ್ಯಾಕಪ್ ನಡೆಯಲಿದೆ ಎನ್ನುವುದು ಗಮನಿಸಬೇಕಾದ ವಿಚಾರ.
ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನವು ಗುಣಮಟ್ಟದ ಕ್ರಿಕೆಟ್ ಆಡುತ್ತಿದೆ. ಅಲ್ಲದೆ ಭಾರತವನ್ನು ಎರಡು ಬಾರಿ (ಟಿ20 ವಿಶ್ವಕಪ್ 2021 ಮತ್ತು ಏಷ್ಯಾ ಕಪ್ 2022) ಸೋಲಿಸಿದೆ. ಒಂದು ವೇಳೆ ಏಷ್ಯಾ ಕಪ್ ಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ನಿರ್ಧರಿಸಿದರೆ, ಈ ವಿಷಯದಲ್ಲಿ ಪಿಸಿಬಿಯ ನಿಲುವು ದೃಢವಾಗಿರುತ್ತದೆ ಎಂದು ರಮಿಜ್ ಹೇಳಿದರು.
ಇದನ್ನೂ ಓದಿ:ಟ್ರೆಂಡಿ ಹುಡ್ಗನ ಪ್ರೀತಿ ಗೀತಿ ಇತ್ಯಾದಿ….: ‘ರೇಮೊ’ ಚಿತ್ರ ವಿಮರ್ಶೆ
“ಒಂದು ವೇಳೆ ಅವರು ಪಾಕಿಸ್ಥಾನಕ್ಕೆ ಬಂದರೆ ನಾವು ವಿಶ್ವಕಪ್ ಗೆ ಭಾರತಕ್ಕೆ ಹೋಗುತ್ತೇವೆ. ಅವರು ಬರದಿದ್ದರೆ ನಾವು ಹೋಗುವುದಿಲ್ಲ. ಅವರು ಪಾಕಿಸ್ಥಾನ ಇಲ್ಲದೆ ಆಡಲಿ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ನಲ್ಲಿ ಪಾಕಿಸ್ತಾನ ಭಾಗವಹಿಸದಿದ್ದರೆ, ಅದನ್ನು ಯಾರು ನೋಡುತ್ತಾರೆ? ನಾವು ಆಕ್ರಮಣಕಾರಿ ವಿಧಾನವನ್ನು ಅನುಸರಿಸುತ್ತೇವೆ, ನಮ್ಮ ತಂಡವು ಉತ್ತಮ ಪ್ರದರ್ಶನವನ್ನು ತೋರಿಸುತ್ತಿದೆ. ನಾವು ವಿಶ್ವದ ಅತಿದೊಡ್ಡ ವ್ಯಾಪಾರ ಮಾಡುವ ಕ್ರಿಕೆಟ್ ತಂಡವನ್ನು ಸೋಲಿಸಿದ್ದೇವೆ, ನಾವು ಟಿ20 ವಿಶ್ವಕಪ್ನ ಫೈನಲ್ನಲ್ಲಿ ಆಡಿದ್ದೇವೆ. ಪಾಕಿಸ್ತಾನ ಕ್ರಿಕೆಟ್ ತಂಡವು ಒಂದು ವರ್ಷದಲ್ಲಿ ಬಿಲಿಯನ್ ಡಾಲರ್ ಆರ್ಥಿಕತೆಯ ಮಂಡಳಿಯನ್ನು ಎರಡು ಬಾರಿ ಸೋಲಿಸಿದೆ” ಎಂದು ರಮೀಜ್ ರಾಜಾ ಹೇಳಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.