ರಣಜಿ: ಕೊನೆಯ ಅವಧಿಯಲ್ಲಿ ಕುಸಿದ ಸೌರಾಷ್ಟ್ರ


Team Udayavani, Mar 10, 2020, 7:20 AM IST

ರಣಜಿ: ಕೊನೆಯ ಅವಧಿಯಲ್ಲಿ ಕುಸಿದ ಸೌರಾಷ್ಟ್ರ

ರಾಜ್‌ಕೋಟ್‌: ಇದೇ ಮೊದಲ ಸಲ ತವರಿನ ಅಂಗಳದಲ್ಲಿ ರಣಜಿ ಟ್ರೋಫಿ ಫೈನಲ್‌ ಪಂದ್ಯ ಆಡಲಿಳಿದಿರುವ ಸೌರಾಷ್ಟ್ರಕ್ಕೆ ಬಂಗಾಲ ಕಡಿವಾಣ ಹಾಕಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ಉನಾದ್ಕತ್‌ ಬಳಗ 80.5 ಓವರ್‌ಗಳಲ್ಲಿ 5 ವಿಕೆಟಿಗೆ 206 ರನ್‌ ಗಳಿಸಿ ಮೊದಲ ದಿನದಾಟ ಮುಗಿಸಿದೆ.

ಪ್ರಮುಖ ಬ್ಯಾಟ್ಸ್‌ಮನ್‌, ಟೆಸ್ಟ್‌ ಸ್ಪೆಷಲಿಸ್ಟ್‌ ಖ್ಯಾತಿಯ ಚೇತೇಶ್ವರ್‌ ಪೂಜಾರ ಜ್ವರದಿಂದ ಕ್ರೀಸ್‌ ತೊರೆದದ್ದು ಸೌರಾಷ್ಟ್ರಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. 6ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದ ಪೂಜಾರ 24 ಎಸೆತಗಳಿಂದ 5 ರನ್‌ ಮಾಡಿ ಡ್ರೆಸ್ಸಿಂಗ್‌ ರೂಮಿಗೆ ವಾಪಸಾದರು. ಗಂಟಲು ನೋವಿನಿಂದಾಗಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ದ್ವಿತೀಯ ದಿನ ಬ್ಯಾಟಿಂಗ್‌ ನಡೆಸುವ ನಿರೀಕ್ಷೆ ಇದೆ ಎಂದು ಸೌರಾಷ್ಟ್ರ ತಂಡದ ನಾಯಕ ಉನಾದ್ಕತ್‌ ಹೇಳಿದ್ದಾರೆ.

ಭರವಸೆಯ ಆರಂಭ
ಸೌರಾಷ್ಟ್ರದ ಅಗ್ರ ಕ್ರಮಾಂಕದ ಬ್ಯಾಟಿಂಗ್‌ ಉತ್ತಮ ಮಟ್ಟದಲ್ಲೇ ಇತ್ತು. ಒಂದು ಹಂತದಲ್ಲಿ ಎರಡೇ ವಿಕೆಟಿಗೆ 163 ರನ್‌ ಬಾರಿಸಿ ಮುನ್ನುಗ್ಗುತ್ತಿತ್ತು. ಆದರೆ ದಿನದ ಕೊನೆಯ 15 ಓವರ್‌ಗಳಲ್ಲಿ ಬಂಗಾಲ ಬೌಲರ್‌ಗಳು ಭರ್ಜರಿ ಮೇಲುಗೈ ಸಾಧಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. 43 ರನ್‌ ಅಂತರದಲ್ಲಿ ಸೌರಾಷ್ಟ್ರದ ಕೊನೆಯ 3 ವಿಕೆಟ್‌ ಉರುಳಿದೆ.

ಮಧ್ಯಮ ವೇಗಿ ಆಕಾಶ್‌ ದೀಪ್‌ 41ಕ್ಕೆ 3 ವಿಕೆಟ್‌ ಹಾರಿಸಿ ಹೆಚ್ಚಿನ ಯಶಸ್ಸು ಸಾಧಿಸಿದರು. ಇಶಾನ್‌ ಪೊರೆಲ್‌ ಮತ್ತು ಎಡಗೈ ಸ್ಪಿನ್ನರ್‌ ಶಾಬಾಜ್‌ ನದೀಂ ಒಂದೊಂದು ವಿಕೆಟ್‌ ಉರುಳಿಸಿದರು. 81ನೇ ಓವರಿನಲ್ಲಿ ಚೇತನ್‌ ಸಕಾರಿಯಾ (4) ವಿಕೆಟ್‌ ಬಿದ್ದೊಡನೆ ದಿನದಾಟವನ್ನು ಕೊನೆಗೊಳಿಸಲಾಯಿತು.

ಶೆಲ್ಡನ್‌ ಜಾಕ್ಸನ್‌ ವಿಫ‌ಲ
ಸೌರಾಷ್ಟ್ರ ಆರಂಭಿಕರಾದ ಹಾರ್ವಿಕ್‌ ದೇಸಾಯಿ (38) ಮತ್ತು ಅವಿ ಬರೋಟ್‌ (54) 37.5 ಓವರ್‌ ನಿಭಾಯಿಸಿ 82 ರನ್‌ ಒಟ್ಟುಗೂಡಿಸಿ ಉತ್ತಮ ಅಡಿಪಾಯ ನಿರ್ಮಿಸಿದರು. ಬಳಿಕ ವಿಶ್ವರಾಜ್‌ ಜಡೇಜ (54) ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಆದರೆ ಸೆಮಿಫೈನಲ್‌ನಲ್ಲಿ ಶತಕ ಬಾರಿಸಿ ಮಿಂಚಿದ ಶೆಲ್ಡನ್‌ ಜಾಕ್ಸನ್‌ (14) ಅವರನ್ನು ಪೊರೆಲ್‌ ಬೇಗನೇ ಔಟ್‌ ಮಾಡಿ ಬಂಗಾಲಕ್ಕೆ ಮೇಲುಗೈ ಒದಗಿಸಿದರು.

94 ಎಸೆತಗಳಿಂದ 29 ರನ್‌ ಮಾಡಿರುವ ಅರ್ಪಿತ್‌ ವಸವಾಡ ಕ್ರೀಸ್‌ನಲ್ಲಿದ್ದಾರೆ.
ಸಂಕ್ಷಿಪ್ತ ಸ್ಕೋರ್‌: ಸೌರಾಷ್ಟ್ರ-5 ವಿಕೆಟಿಗೆ 206 (ಬರೋಟ್‌ 54, ವಿ. ಜಡೇಜ 54, ಹಾರ್ವಿಕ್‌ 38, ವಸವಾಡ ಬ್ಯಾಟಿಂಗ್‌ 29, ಜಾಕ್ಸನ್‌ 14, ಆಕಾಶ್‌ ದೀಪ್‌ 41ಕ್ಕೆ 3).

ಟಾಪ್ ನ್ಯೂಸ್

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.