Ranji Trophy ಕ್ರಿಕೆಟ್ ಇಂದಿನಿಂದ : ಕರ್ನಾಟಕಕ್ಕೆ ಮಧ್ಯಪ್ರದೇಶ ಎದುರಾಳಿ
Team Udayavani, Oct 11, 2024, 6:02 AM IST
ಬೆಂಗಳೂರು: ರಣಜಿ ಕ್ರಿಕೆಟ್ ಪಂದ್ಯಾವಳಿಯ 2024-25ರ ಆವೃತ್ತಿ ಶುಕ್ರವಾರದಿಂದ ಆರಂಭಗೊಳ್ಳಲಿದೆ. 4 ತಿಂಗಳ ಕಾಲ ಪಂದ್ಯಾವಳಿ ಮುಂದುವರಿಯಲಿದ್ದು, ಮುಂದಿನ ವರ್ಷ ಮಾ. 2ಕ್ಕೆ ಫೈನಲ್ ಪಂದ್ಯದೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಪಂದ್ಯಗಳು ಬೆಳಗ್ಗೆ 9.30ಕ್ಕೆ ಆರಂಭಗೊಳ್ಳಲಿವೆ.
ನಾಲ್ಕು ದಿನಗಳ ಈ ರಣಜಿ ಟ್ರೊಫಿಯ ಮೊದಲ ಹಂತದ ಪಂದ್ಯಗಳು ಅ.11ರಿಂದ ಅ.14ರ ವರೆಗೆ ವಡೋದರ, ಕೊಯಮತ್ತೂರು, ರಾಯಪುರ, ಮಧ್ಯಪ್ರದೇಶದ ಹೋಲ್ಕರ್ ಮೈದಾನ ಸೇರಿದಂತೆ ವಿವಿಧ ತಾಣಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಒಟ್ಟು 16 ಪಂದ್ಯಗಳು ನಡೆಯಲಿವೆ. ಎರಡನೇ ಹಂತದ ಪಂದ್ಯಗಳು ಅ.18ರಿಂದ 21ರ ವರೆಗೆ ನಡೆಯಲಿದೆ.
2 ಹಂತಗಳಾಗಿ ವಿಂಗಡಣೆ
ಈ ರಣಜಿ ಟ್ರೋಫಿ ಋತುವಿನಲ್ಲಿ ಟಿ20 ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು 50 ಓವರ್ಗಳ ವಿಜಯ್ ಹಜಾರೆ ಟ್ರೋಫಿಯನ್ನು ಪ್ರತ್ಯೇಕಿಸಲಾಗಿದೆ. ಆಟಗಾರರ ಕೆಲಸದ ಒತ್ತಡ ಕಡಿಮೆಗೊಳಿಸಲು ಬಿಸಿಸಿಐ ಈ ಕ್ರವ ುಕೈಗೊಂಡಿದೆ ಎನ್ನಲಾಗಿದೆ.
ಎಲೈಟ್ ಡಿವಿಶನ್
ಎಲೈಟ್ ಡಿವಿಶನ್ನಲ್ಲಿ 32 ತಂಡಗಳಿರಲಿವೆ. ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದ್ದು, ಪ್ರತೀ ಗುಂಪಿನಲ್ಲಿ ತಲಾ 8 ತಂಡಗಳಿವೆ. ಗ್ರೂಪ್ ಹಂತದಲ್ಲಿ ಪ್ರತೀ ತಂಡವೂ ತಲಾ 7 ಪಂದ್ಯಗಳನ್ನಾಡಲಿದೆ. ಗ್ರೂಪ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಅಗ್ರ 2ರಲ್ಲಿ ಉಳಿಯುವ ತಂಡಗಳು ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಲಿವೆ. ಪ್ರತೀ ಗುಂಪಿನಲ್ಲಿ ತಳದಲ್ಲಿ ಉಳಿಯುವ ಎರಡು ತಂಡಗಳು ಮುಂದಿನ ಸೀಸನ್ನಲ್ಲಿ ಪ್ಲೇಟ್ ಡಿವಿಶನ್ಗೆ ಹೋಗುತ್ತವೆ.
ಕರ್ನಾಟಕಕ್ಕೆ ಮ.ಪ್ರದೇಶ ಎದುರಾಳಿ
ರಣಜಿ ಟ್ರೋಫಿ ಎಲೈಟ್ ಡಿವಿಶನ್ನಲ್ಲಿ ಕರ್ನಾಟಕ ತಂಡ ಗ್ರೂಪ್ “ಸಿ’ಯಲ್ಲಿದ್ದು, ಶುಕ್ರವಾರ ಮಧ್ಯಪ್ರದೇಶ ವಿರುದ್ಧ ಕಣಕ್ಕಿಳಿಯಲಿದೆ. ಇಂದೋರ್ನ ಹೋಲ್ಕರ್ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ.
ಪಂದ್ಯ ಆರಂಭ: ಬೆ. 9.30,
ನೇರಪ್ರಸಾರ: ಸ್ಪೋರ್ಟ್ಸ್18
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ
‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!
Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ
State Govt: ವಿನಯ್ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ
Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.