Ranji ಟ್ರೋಫಿ ಕ್ರಿಕೆಟ್‌: ಕರ್ನಾಟಕ ಗೆಲುವಿಗೆ ಮನೀಷ್‌ ಪಾಂಡೆ ನೆರವು


Team Udayavani, Feb 4, 2024, 11:00 PM IST

1–asdasdas

ಸೂರತ್‌: ಅನುಭವಿ ಬ್ಯಾಟ್ಸ್‌ಮನ್‌ ಮನೀಷ್‌ ಪಾಂಡೆ ಅವರ ಸಮಯೋಚಿತ ಬ್ಯಾಟಿಂಗ್‌ ಬಲದಿಂದಾಗಿ ಕರ್ನಾಟಕ ತಂಡವು ರಣಜಿ ಟ್ರೋಫಿಯ “ಸಿ’ ಬಣದ ಪಂದ್ಯದಲ್ಲಿ ರೈಲ್ವೇಸ್‌ ವಿರುದ್ಧ ಒಂದು ವಿಕೆಟ್‌ ಅಂತರದ ರೋಚಕ ಗೆಲುವು ದಾಖಲಿಸಿದೆ.

ಗೆಲ್ಲಲು 226 ರನ್‌ ತೆಗೆಯುವ ಸವಾಲು ಪಡೆದ ಕರ್ನಾಟಕ ತಂಡವು ಮೂರನೇ ದಿನ ಪಾಂಡೆ ಅವರ ತಾಳ್ಮೆಯ ಆಟದಿಂದಾಗಿ 9 ವಿಕೆಟಿಗೆ 229 ರನ್‌ ಪೇರಿಸಿ ಜಯಭೇರಿ ಬಾರಿಸಿತು. 121 ಎಸೆತ ಎದುರಿಸಿದ ಪಾಂಡೆ ಆರು ಬೌಂಡರಿ ಮತ್ತು ಒಂದು ಸಿಕ್ಸರ್‌ ನೆರವಿನಿಂದ 67 ರನ್‌ ಗಳಿಸಿ ಅಜೇಯರಾಗಿ ಉಳಿದರು. ಈ ಮೊದಲು ರೈಲ್ವೇಸ್‌ ತಂಡವು 8 ವಿಕೆಟಿಗೆ 209 ರನ್ನುಗಳಿಂದ ದಿನದಾಟ ಆರಂಭಿಸಿ 244 ರನ್ನಿಗೆ ಆಲೌಟಾಯಿತು. ರೈಲ್ವೇಸ್‌ ಕುಸಿತಕ್ಕೆ ಕಾರಣರಾದ ವೈಶಾಖ್‌ ವಿಜಯಕುಮಾರ್‌ 67 ರನ್ನಿಗೆ 5 ವಿಕೆಟ್‌ ಕಿತ್ತರು.

ಈ ಗೆಲುವಿನಿಂದ ಕರ್ನಾಟಕ ತಂಡವು “ಸಿ’ ಬಣದಲ್ಲಿ 21 ಅಂಕಗ ಳೊಂದಿಗೆ ಅಗ್ರಸ್ಥಾನದಲ್ಲಿದ್ದು ನಾಕೌಟ್‌ ಹಂತಕ್ಕೇರುವ ಸಾಧ್ಯತೆಯನ್ನು ಹೆಚ್ಚಿ ಕೊಂಡಿದೆ. ಲೀಗ್‌ ಹಂತದಲ್ಲಿ ಇನ್ನೆರಡು ಪಂದ್ಯಗಳು ಬಾಕಿ ಉಳಿದಿದೆ. ಕರ್ನಾಟಕ ಮುಂದಿನೆರಡು ಪಂದ್ಯಗಳಲ್ಲಿ ತಮಿಳು ನಾಡು ಮತ್ತು ಚಂಡೀಗಢ ವಿರುದ್ಧœ ಆಡಬೇಕಾಗಿದೆ.
ಒಂದು ವಿಕೆಟಿಗೆ 70 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಕರ್ನಾಟಕ ತಂಡವು ಆಬಳಿಕ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾಗಿ 99 ರನ್‌ ತಲಪುವಷ್ಟರಲ್ಲಿ 6 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಆಬಳಿಕ ಪಾಂಡೆ ಸಹಿತ ಶರತ್‌ ಶ್ರೀನಿವಾಸ್‌ (23), ವೈಶಾಖ್‌ (38) ಅವರ ಉತ್ತಮ ಆಟದಿಂದಾಗಿ ಕರ್ನಾಟಕ ತಂಡ ರೋಚಕ ಗೆಲುವು ಕಾಣುವಂತಾಯಿತು.

ತ್ರಿಪುರಕ್ಕೆ ಜಯ
ಅಹ್ಮದಾಬಾದ್‌ನಲ್ಲಿ ನಡೆದ ಇನ್ನೊಂದು ಪಂದ್ಯದ್ಲಿ ತ್ರಿಪುರ ತಂಡವು ಗುಜರಾತ್‌ ತಂಡವನ್ನು 156 ರನ್ನು ಗಳಿಂದ ಸೋಲಿಸಿ ಅಚ್ಚರಿಗೊಳಿಸಿತು.
ಸಂಕ್ಷಿಪ್ತ ಸ್ಕೋರು: ರೈಲ್ವೇಸ್‌ 155 ಮತ್ತು 244; ಕರ್ನಾಟಕ 174 ಮತ್ತು 9 ವಿಕೆಟಿಗೆ 229 (ಮನೀಷ್‌ ಪಾಂಡೆ 67 ಔಟಾಗದೆ, ವೈಶಾಖ್‌ ವಿಜಯಕುಮಾರ್‌ 38, ಆರ್‌. ಸಮರ್ಥ್ 35, ಕೆವಿ ಅನೀಶ್‌ 35, ಆಕಾಶ್‌ ಪಾಂಡೆ 94ಕ್ಕೆ 5).

ಸೌರಾಷ್ಟ್ರಕ್ಕೆ ಗೆಲುವು
ಸೋಲಾಪುರ: ಎಡಗೈ ಸ್ಪಿನ್ನರ್‌ ಪರ್ತ್‌ ಭುತ್‌ ಅವರ ಅಮೋಘ ಬೌಲಿಂಗ್‌ನಿಂದಾಗಿ ಸೌರಾಷ್ಟ್ರ ತಂಡವು ರಣಜಿ “ಎ’ ಬಣದ ಪಂದ್ಯದಲ್ಲಿ ಮಹಾರಾಷ್ಟ್ರವನ್ನು 48 ರನ್ನುಗಳಿಂದ ಸೋಲಿಸಿದೆ.
ಗೆಲ್ಲಲು 208 ರನ್‌ ಗಳಿಸುವ ಗುರಿ ಪಡೆದ ಮಹಾರಾಷ್ಟ್ರ ತಂಡವು ಪರ್ತ್‌ ಭುತ್‌ ಅವರ ದಾಳಿಗೆ ಕುಸಿದು 164 ರನ್ನಿಗೆ ಆಲೌಟಾಗಿ ಶರಣಾಯಿತು. 44 ರನ್ನಿಗೆ 7 ವಿಕೆಟ್‌ ಕಿತ್ತ ಭುತ್‌ ಅವರು ಮಹಾರಾಷ್ಟ್ರದ ಕುಸಿತಕ್ಕೆ ಕಾರಣರಾದರು. ಭುತ್‌ ಅವರಿಗೆ ನೆರವು ನೀಡಿದ ಯುವರಾಜ್‌ಸಿನ್‌Ø ದೊಡಿಯ ಎರಡು ವಿಕೆಟ್‌ ಕಿತ್ತರು.
ಸಂಕ್ಷಿಪ್ತ ಸ್ಕೋರು: ಸೌರಾಷ್ಟ್ರ 202 ಮತ್ತು 164; ಮಹಾರಾಷ್ಟ್ರ 159 ಮತ್ತು 164 (ತರಣ್‌ಜಿತ್‌ ಸಿಂಗ್‌ ದಿಲ್ಲೋನ್‌ 28, ಪರ್ತ್‌ ಭುತ್‌ 44ಕ್ಕೆ 7).

ಮುಂಬಯಿಗೆ ಇನ್ನಿಂಗ್ಸ್‌  ಗೆಲುವು
ಕೋಲ್ಕತಾ: ಮೋಹಿತ್‌ ಅವಸ್ಥಿ ಅವರ ಅಮೋಘ ದಾಳಿಯ ನೆರವಿನಿಂದ ಮುಂಬಯಿ ತಂಡವು ರಣಜಿ ಟ್ರೋಫಿಯ “ಬಿ’ ಬಣದ ಪಂದ್ಯದಲ್ಲಿ ಬೆಂಗಾಲ್‌ ವಿರುದ್ಧ ಇನ್ನಿಂಗ್ಸ್‌ ಮತ್ತು ನಾಲ್ಕು ರನ್ನುಗಳಿಂದ ಜಯ ಸಾಧಿಸಿದೆ.
ಫಾಲೋ ಆನ್‌ ಪಡೆದಿದ್ದ ಬೆಂಗಾಲ್‌ ತಂಡವು ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅವಸ್ಥಿ ಅವರ ದಾಳಿಗೆ ಕುಸಿದು 209 ರನ್ನಿಗೆ ಆಲೌಟಾಯಿತು. ಅವಸ್ಥಿ 52 ರನ್ನಿಗೆ 7 ವಿಕೆಟ್‌ ಕಿತ್ತು ಬೆಂಗಾಲ್‌ ತಂಡದ ಕುಸಿತಕ್ಕೆ ಕಾರಣರಾದರು. ಅವಸ್ಥಿ ಈ ಪಂದ್ಯದಲ್ಲಿ 10 ವಿಕೆಟ್‌ ಕಿತ್ತು ಸಂಭ್ರಮಿಸಿದ್ದಾರೆ. ಈ ಸಾಧನೆಗಾಗಿ ಅವಸ್ಥಿ ರಣಜಿಯಲ್ಲಿ ಮೂರನೇ ಬಾರಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆದರು.

ಬೆಂಗಾಲ್‌ ಮೊದಲ ಇನ್ನಿಂಗ್ಸ್‌ನಲ್ಲಿ 199 ರನ್ನಿಗೆ ಆಲೌಟಾಗಿತ್ತು. ಅನುಸ್ತುಪ್‌ ಮಜುಂದಾರ್‌ 109 ರನ್‌ ಹೊಡೆದಿದ್ದರು. ಇದರಿಂದಾಗಿ ಮುಂಬಯಿ ಮೊದಲ ಇನ್ನಿಂಗ್ಸ್‌ನಲ್ಲಿ 213 ರನ್‌ ಮುನ್ನಡೆ ಗಳಿಸುವಂತಾಯಿತು. ಈ ಮೊದಲು ಮುಂಬಯಿ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 412 ರನ್‌ ಗಳಿಸಿತ್ತು.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.