ಇಂದಿನಿಂದ ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್ಸ್‌ :ಕರ್ನಾಟಕಕ್ಕೆ ವಿದರ್ಭ ಸವಾಲು


Team Udayavani, Feb 23, 2024, 7:15 AM IST

ಇಂದಿನಿಂದ ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್ಸ್‌ :ಕರ್ನಾಟಕಕ್ಕೆ ವಿದರ್ಭ ಸವಾಲು

ನಾಗ್ಪುರ: ಒಂದು ತಿಂಗಳ ಲೀಗ್‌ ಹಣಾಹಣಿಯ ಬಳಿಕ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಸ್ಪರ್ಧೆಗೆ ಸಮಯ ಕೂಡಿಬಂದಿದೆ. ಬಹುತೇಕ ಬಲಿಷ್ಠ ತಂಡಗಳೇ ನಾಕೌಟ್‌ಗೆ ಪ್ರವೇಶ ಪಡೆದಿವೆ. ಇವುಗಳಲ್ಲಿ ಕರ್ನಾಟಕವೂ ಒಂದು. ನಾಗ್ಪುರದಲ್ಲಿ ನಡೆಯುವ ಮುಖಾಮುಖೀಯಲ್ಲಿ ಮಾಯಾಂಕ್‌ ಅಗರ್ವಾಲ್‌ ಪಡೆ ವಿದರ್ಭವನ್ನು ಎದುರಿಸಲಿದೆ.

41 ಬಾರಿಯ ಚಾಂಪಿಯನ್‌ ಮುಂಬಯಿ, ತಮಿಳುನಾಡು, ಬರೋಡ, ಸೌರಾಷ್ಟ್ರ, ಆಂಧ್ರ ಪ್ರದೇಶ ಮತ್ತು ಮಧ್ಯ ಪ್ರದೇಶ ಉಳಿದ ತಂಡಗಳು.

ವಿದರ್ಭ ಅಜೇಯ ತಂಡ:

ಕರ್ನಾಟಕದ ಎದುರಾಳಿಯಾಗಿರುವ ವಿದರ್ಭಕ್ಕೆ ಇದು ತವರಿನ ಪಂದ್ಯ. ಗ್ರೂಪ್‌ ವಿಭಾಗದಲ್ಲಿ ಅತ್ಯಧಿಕ 5 ಪಂದ್ಯ ಗೆದ್ದ ಕೇವಲ 2ನೇ ತಂಡವೆಂಬುದು ವಿದರ್ಭದ ಹಿರಿಮೆ. ಇನ್ನೊಂದು ತಂಡ ಮುಂಬಯಿ. ವಿದರ್ಭ “ಎ’ ವಿಭಾಗದ ಟಾಪ್‌ ಟೀಮ್‌. ಒಂದು ಪಂದ್ಯ ಸೋತ ಕರ್ನಾಟಕ “ಸಿ’ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿತ್ತು.

ಫ‌ಯಾಜ್‌ ಫ‌ಜಲ್‌ ಕೊನೆಯ ಲೀಗ್‌ ಪಂದ್ಯದ ಬಳಿಕ ನಿವೃತ್ತಿ ಘೋಷಿಸಿದ್ದು ವಿದರ್ಭಕ್ಕೆ ಎದುರಾದ ದೊಡ್ಡ ಹಿನ್ನಡೆ. ನಾಯಕ ಅಕ್ಷಯ್‌ ವಾಡ್ಕರ್‌ (431 ರನ್‌), ಧ್ರುವ ಶೋರಿ (427 ರನ್‌) ಹಾಗೂ ಕರ್ನಾಟಕದ ಮಾಜಿ ಆಟಗಾರ ಕರುಣ್‌ ನಾಯರ್‌ (391 ರನ್‌) ವಿದರ್ಭದ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಆದಿತ್ಯ ಸರ್ವಟೆ, ಆದಿತ್ಯ ಠಾಕರೆ ತಲಾ 30 ವಿಕೆಟ್‌ ಉಡಾಯಿಸಿ ಅಪಾಯಕಾರಿಗಳಾಗಿ ಗೋಚರಿಸಿದ್ದಾರೆ.

ಕಾಡಲಿದೆ ಪಡಿಕ್ಕಲ್‌ ಗೈರು :

ಕರ್ನಾಟಕಕ್ಕೆ ದೇವದತ್ತ ಪಡಿಕ್ಕಲ್‌ ಗೈರು ಖಂಡಿತ ಕಾಡಲಿದೆ. ಅವರು ಭಾರತದ ಟೆಸ್ಟ್‌ ತಂಡದಲ್ಲಿದ್ದಾರೆ. ನಾಲ್ಕೇ ಪಂದ್ಯಗಳಲ್ಲಿ 556 ರನ್‌ ಪೇರಿಸಿದ ಹೆಗ್ಗಳಿಕೆ ಪಡಿಕ್ಕಲ್‌ ಅವರದ್ದಾಗಿದೆ. ಸರಾಸರಿ 92.66. ಹಿರಿಯ ಬ್ಯಾಟರ್‌ ಮನೀಷ್‌ ಪಾಂಡೆ (464 ರನ್‌), ಶರತ್‌ ಶ್ರೀನಿವಾಸ್‌ (429 ರನ್‌) ಕರ್ನಾಟಕದ ಟಾಪ್‌-2 ಬ್ಯಾಟರ್‌ಗಳಾಗಿದ್ದಾರೆ.

ನಾಯಕ ಮಾಯಾಂಕ್‌ ಅಗರ್ವಾಲ್‌, ಇವರ ಆರಂಭಿಕ ಜತೆಗಾರ ಆರ್‌. ಸಮರ್ಥ್, ನಿಕಿನ್‌ ಜೋಸ್‌ ಸ್ಥಿರವಾದ ಬ್ಯಾಟಿಂಗ್‌ ಪ್ರದರ್ಶಿಸಬೇಕಾದ ಅಗತ್ಯವಿದೆ.

ಕ್ವಾರ್ಟರ್‌ ಫೈನಲ್ಸ್‌ :

  1. ವಿದರ್ಭ-ಕರ್ನಾಟಕ (ನಾಗ್ಪುರ)
  2. ಮುಂಬಯಿ-ಬರೋಡ (ಮುಂಬಯಿ)
  3. ತಮಿಳುನಾಡು-ಸೌರಾಷ್ಟ್ರ (ಕೊಯಮತ್ತೂರು)
  4. ಮಧ್ಯ ಪ್ರದೇಶ-ಆಂಧ್ರ ಪ್ರದೇಶ (ಇಂದೋರ್‌)

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.