ಧೋನಿ ಒನ್‌ಡೇ ನಿವೃತ್ತಿ ವದಂತಿ ತಳ್ಳಿ ಹಾಕಿದ ಕೋಚ್‌ ರವಿ ಶಾಸ್ತ್ರೀ


Team Udayavani, Jul 19, 2018, 11:47 AM IST

dhoni-700.jpg

ಲಂಡನ್‌ : ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಕ್ರಿಕೆಟಿಗೆ ವಿದಾಯ ಹೇಳುವ ಪ್ರಶ್ನೆಯೇ ಇಲ್ಲ; ಅವರು ಈಗಲೂ ತಂಡದ ಪ್ರಮುಖ ಹಾಗೂ ಭರವಸೆಯ ಭಾಗವಾಗಿದ್ದಾರೆ ಎಂದು ಕೋಚ್‌ ರವಿ ಶಾಸ್ತ್ರೀ ಹೇಳಿದ್ದಾರೆ. ಅಂತೆಯೇ ಧೋನಿ ಒನ್‌ ಡೇ ಕ್ರಿಕೆಟ್‌ ನಿವೃತ್ತಿಯ ವದಂತಿ, ಊಹಾಪೋಹಗಳನ್ನು ಅವರು ತಳ್ಳಿ ಹಾಕಿದ್ದಾರೆ. 

ಧೋನಿ ಅವರು ಪ್ರಕೃತ ಒನ್‌ ಡೇ ಪಂದ್ಯಗಳಲ್ಲಿ ಸಲೀಸಾಗಿ ರನ್‌ ಮಾಡುತ್ತಿಲ್ಲ; ರನ್‌ಗಾಗಿ ತಿಣುಕಾಡುತ್ತಿದ್ದಾರೆ ಎಂಬ ಆರೋಪ ಇದೆ. ಲೀಡ್ಸ್‌ ನ ಹೆಡಿಂಗ್‌ಲೇ ಯಲ್ಲಿ ಇಂಗ್ಲಂಡ್‌ ಎದುರಿನ ಮೂರನೇ ಏಕದಿನ ಪಂದ್ಯವನ್ನು ಭಾರತ ಸೋತಾಗ, ಅಂಗಣದಲ್ಲಿದ್ದ ಧೋನಿ ಅವರು ಅಂಪಾಯರ್‌ ರಿಂದ ಆಟದ ಚೆಂಡನ್ನು ಪಡೆದುಕೊಂಡದ್ದು  “ಕ್ರಿಕೆಟಿಗೆ ಧೋನಿ ವಿದಾಯ ಹೇಳಲಿದ್ದಾರೆ’ ಎನ್ನುವುದರ ಸೂಚನೆ ಎಂದು ಹಲವರು ಭಾವಿಸಿದ್ದರು. 

ಈ ಹಿನ್ನೆಲೆಯಲ್ಲಿ ರವಿ ಶಾಸ್ತ್ರೀ ಅವರು “ಧೋನಿ  ಕ್ರಿಕೆಟ್‌ನಿಂದ ನಿವೃತ್ತರಾಗುವ ಪ್ರಶ್ನೆಯೇ ಇಲ್ಲ; ಅವರು ಭಾರತ ತಂಡಕ್ಕೆ ಬಹುವಾಗಿ ಬೇಕಾದವರಾಗಿದ್ದಾರೆ’ ಎಂದು ಸ್ಪಷ್ಟ ಪಡಿಸಿದರು. 

“ಧೋನಿ ಅವರು ಆಟದ ಚೆಂಡನ್ನು ಅಂಪಾಯರ್‌ ಅವರಿಂದ ಪಡೆದುಕೊಂಡದ್ದು ಅದನ್ನು ಭರತ್‌ ಅರುಣ್‌ ಅವರಿಗೆ ತೋರಿಸುವುದಕ್ಕಾಗಿ. ಧೋನಿ ಅವರಿಗೆ ಆಟದ ಚೆಂಡು ಹೇಗೆ ತನ್ನ ರೂಪ ಮತ್ತು ಗುಣವನ್ನು ಎಷ್ಟು ಬೇಗನೆ ಕಳೆದುಕೊಳ್ಳುತ್ತಿದೆ ಎಂಬುದನ್ನು ತಿಳಿಯುವ ಕುತೂಹಲವಿತ್ತು. ಇದಕ್ಕೆ ಹೊರತಾಗಿ ಬೇರೇನೂ ಕಾರಣವಿಲ್ಲ. ಹಾಗೆಯೇ ಅವರು ಕ್ರಿಕೆಟಿಗೆ ವಿದಾಯ ಹೇಳುವ ಪ್ರಶ್ನೆಯೇ ಇಲ್ಲ  ಎಂದು ಶಾಸ್ತ್ರೀ ಹೇಳಿದರು. 

ಇಂಗ್ಲಂಡ್‌ ಜಯಿಸಿದ್ದ 2ನೇ ಒನ್‌ ಡೇ ಪಂದ್ಯದಲ್ಲಿ ಧೋನಿ 59 ಎಸೆತಗಳನ್ನು ಎದುರಿಸಿ ಕಷ್ಟಪಟ್ಟು 37 ರನ್‌ ತೆಗೆದಿದ್ದರು. ಮೂರನೇ ಪಂದ್ಯದಲ್ಲಿ ಕೂಡ ಧೋನಿ 66 ಎಸೆತ ಎದುರಿಸಿ ಕಷ್ಟದಿಂದ 42 ರನ್‌ ತೆಗೆದಿದ್ದರು. 

ಧೋನಿ ಅವರ ನಿಧಾನಗತಿಯ ಬ್ಯಾಟಿಂಗ್‌ ಬಗ್ಗೆ ಬರೆದಿರುವ ಸುನೀಲ್‌ ಗಾವಸ್ಕರ್‌, ತಾನು 1975ರ‌ ಜೂನ್‌ 7ರಂದು ಲಾರ್ಡ್ಸ್‌ನಲ್ಲಿ ನಡೆದಿದ್ದ ಪ್ರುಡೆನ್‌ಶಿಯಲ್‌ ವಿಶ್ವ ಕಪ್‌ ಕೂಟದಲ್ಲಿ ಇಂಗ್ಲಂಡ್‌ ಎದುರಿನ ಮೊದಲ ಪಂದ್ಯದಲ್ಲಿ  174 ಎಸೆತ ಎದುರಿಸಿ ತೆಗೆದಿದ್ದ 36 ರನ್‌ ಗಳ ಆಟವನ್ನು ಸ್ಮರಿಸಿಕೊಂಡರು. 

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.