RCBvsLSG: ಮಯಾಂಕ್ ಯಾದವ್ ವೇಗಕ್ಕೆ ಬೆಚ್ಚಿದ ಆರ್ ಸಿಬಿ ಬ್ಯಾಟರ್ಸ್; 28 ರನ್ ಸೋಲು


Team Udayavani, Apr 2, 2024, 11:06 PM IST

ಮಯಾಂಕ್ ಯಾದವ್ ವೇಗಕ್ಕೆ ಬೆಚ್ಚಿದ ಆರ್ ಸಿಬಿ ಬ್ಯಾಟರ್ಸ್

ಬೆಂಗಳೂರು: ಕಳೆದ ಪಂದ್ಯದಲ್ಲಿ ಬೌಲಿಂಗ್ ಕಾರಣದಿಂದ ಸೋಲನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ವಿರುದ್ದ ಬ್ಯಾಟರ್ ಗಳ ನೀರಸ ಪ್ರದರ್ಶನಕ್ಕೆ ಮತ್ತೆ ಸೋಲು ಕಂಡಿದೆ. ರಾಹುಲ್ ಬಳಗದ ಶಿಸ್ತುಬದ್ದ ಬೌಲಿಂಗ್ ಎದುರು ಪರದಾಡಿದ ಆರ್ ಸಿಬಿ 28 ರನ್ ಅಂತರದ ಸೋಲು ಕಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಲಕ್ನೋ ಐದು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದರೆ, ಆರ್ ಸಿಬಿ ತಂಡವು 19.3 ಓವರ್ ಗಳಲ್ಲಿ 153 ರನ್ ಗೆ ಆಲೌಟಾಯಿತು.

ಡಿಕಾಕ್ ಅಬ್ಬರ: ಈ ಬಾರಿಯ ಕೂಟದಲ್ಲಿ ಇದುವರೆಗೆ ತಣ್ಣಗಿದ್ದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಇಂದು ಚಿನ್ನಸ್ವಾಮಿಯಲ್ಲಿ ಅಬ್ಬರಿಸಿದರು. 56 ಎಸೆತ ಎದುರಿಸಿದ ಕ್ವಿಂಟನ್ 81 ರನ್ ಗಳಿಸಿದರು. ಇದರಲ್ಲಿ ಅವರು ಎಂಟು ಫೋರ್ ಮತ್ತು ಐದು ಭರ್ಜರಿ ಸಿಕ್ಸರ್ ಬಾರಿಸಿದರು.

ನಾಯಕ ರಾಹುಲ್ ಆಟ 20 ರನ್ ಗಳಿಗೆ ಅಂತ್ಯವಾಯಿತು. ಮತ್ತೊಬ್ಬ ಕನ್ನಡಿಗ ಪಡಿಕ್ಕಲ್ ಆರು ರನ್ ಮಾತ್ರ ಮಾಡಿದರು. ಎರಡು ಸಿಕ್ಸರ್ ಸಿಡಿಸಿ ಸ್ಟೋಯಿನಸ್ 24 ರನ್ ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿ ನಿಕೋಲಸ್ ಪೂರನ್ ಭರ್ಜರಿ 40 ರನ್ ಮಾಡಿದರು. ಕೇವಲ 21 ಎಸೆತ ಎದುರಿಸಿದ ಪೂರನ್ ಭರ್ಜರಿ ಐದು ಸಿಕ್ಸರ್ ಬಾರಿಸಿದರು. ಅದರಲ್ಲಿಯೂ ಟೋಪ್ಲೆ ಕೊನೆಯ ಓವರ್ ನಲ್ಲಿ ಹ್ಯಾಟ್ರಿಕ್ ಎಸೆತಗಳನ್ನು ಮೈದಾನದಾಚೆ ಅಟ್ಟಿದರು.

ಆರ್ ಸಿಬಿ ಪರ ಮ್ಯಾಕ್ಸವೆಲ್ ಎರಡು ವಿಕೆಟ್ ಕಿತ್ತರೆ, ರೀಸ್ ಟೋಪ್ಲೆ, ಯಶ್ ದಯಾಳ್ ಮತ್ತು ಸಿರಾಜ್ ತಲಾ ಒಂದು ವಿಕೆಟ್ ಪಡೆದರು.

ಆರಂಭಿಕ ಕುಸಿತ

ಚಿನ್ನಸ್ವಾಮಿಯಲ್ಲಿ ದೊಡ್ಡದೇನು ಅಲ್ಲದ 182 ರನ್ ಚೇಸ್ ಮಾಡಲು ಹೊರಟ ಆರ್ ಸಿಬಿ ಸತತ ವಿಕೆಟ್ ಕಳೆದುಕೊಂಡಿತು. ವಿರಾಟ್ 22 ರನ್ ಗಳಿಸಿ ಕ್ಯಾಚ್ ನೀಡಿದರೆ, ಪಡಿಕ್ಕಲ್ ಅದ್ಭುತ ಥ್ರೋಗೆ ನಾಯಕ ಫಾಪ್ ರನೌಟಾದರು. ಗ್ಲೆನ್ ಮ್ಯಾಕ್ಸವೆಲ್ ಮತ್ತೆ ಶೂನ್ಯ ಸುತ್ತಿದರೆ, ಗ್ರೀನ್ ಗಳಿಕೆ 9 ರನ್ ಮಾತ್ರ. ಪಾಟಿದಾರ್ 29 ರನ್ ಮತ್ತು ಮಹಿಪಾಲ್ ಲುಮ್ರೋರ್ 33 ರನ್ ಗಳಿಸಿ ಅಲ್ಪ ಹೋರಾಟ ಪ್ರದರ್ಶಿಸಿದರು.

ಲಕ್ನೋ ಪರ ಯುವ ವೇಗಿ ಮಯಾಂಕ್ ಯಾದವ್ ಮತ್ತೆ ಮಿಂಚಿದರು. ನಾಲ್ಕು ಓವರ್ ಎಸೆದ ಮಯಾಂಕ್ ಕೇವಲ 14 ರನ್ ನೀಡಿ ಮೂರು ಪ್ರಮುಖ ವಿಕೆಟ್ ಕಿತ್ತರು. ನವೀನ್ ಹಕ್ ಎರಡು ವಿಕೆಟ್, ಎಂ.ಸಿದ್ದಾರ್ಥ್, ಸ್ಟೋಯಿನಸ್ ಮತ್ತು ಯಶ್ ಥಾಕೂರ್ ತಲಾ ಒಂದು ವಿಕೆಟ್ ಕಿತ್ತರು.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

bajrang punia

ನಾಡಾ ನನ್ನನ್ನು ಗುರಿಯಾಗಿಸಿ  ದಾಳಿ ಮಾಡುತ್ತಿದೆ: ಬಜರಂಗ್‌

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.