![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2021, 10:50 AM IST
ದುಬೈ: ಬಹುನಿರೀಕ್ಷಿತ ಐಪಿಎಲ್ ಕೂಟದ ಯುಎಇ ಚರಣ ಸನ್ನಿಹಿತವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ವರ್ಣರಂಜಿತ ಚುಟುಕು ಕ್ರಿಕೆಟ್ ಕೂಟ ಮತ್ತೆ ಆರಂಭವಾಗಲಿದೆ. ಈಗಾಗಲೇ ತಂಡಗಳು ಯುಎಇ ಗೆ ತೆರಳಿದ್ದು ತಾಲೀಮಿನಲ್ಲಿ ಭಾಗಿಯಾಗಿವೆ.
ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆ.20ರಂದು ಪುನರಾರಂಭದ ತನ್ನ ಮೊದಲ ಪಂದ್ಯವಾಡಲಿದೆ. ಅಬುಧಾಬಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡಲಿದೆ. ಈ ಪಂದ್ಯದ ಮತ್ತೊಂದು ವಿಶೇಷವೆಂದರೆ ಆರ್ ಸಿಬಿ ಹೊಸ ಜರ್ಸಿಯೊಂದಿಗೆ ಆಡಲಿದೆ.
ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿರುವ ಮುಂಚೂಣಿ ಯೋಧರಿಗೆ ಗೌರವ ಮತ್ತು ಬೆಂಬಲ ನೀಡುವ ಉದ್ದೇಶದಿಂದ ಆರ್ ಸಿಬಿ ತಂಡವು ತಿಳಿ ನೀಲಿ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ.
ಐಪಿಎಲ್ 2021 ರ ಮೊದಲ ಹಂತದಲ್ಲಿ, ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಕೋವಿಡ್ ಸಮಯದಲ್ಲಿ ಮುಂಚೂಣಿ ಕೆಲಸಗಾರರಿಗೆ ಫ್ರಾಂಚೈಸಿಯ ವತಿಯಿಂದ ತಮ್ಮ ಬೆಂಬಲ ಸೂಚಿಸಿದ್ದರು. ಕೋವಿಡ್ ಸಮಯದಲ್ಲಿ ಬೆಂಗಳೂರು ಮತ್ತು ದೇಶದ ಇತರ ನಗರಗಳಲ್ಲಿ ಆಮ್ಲಜನಕ ಬೆಂಬಲಕ್ಕೆ ಸಂಬಂಧಿಸಿದ ಆರೋಗ್ಯ ರಕ್ಷಣೆಯ ಮೂಲಸೌಕರ್ಯಕ್ಕೆ ಸಹಾಯ ಮಾಡಲು ತಮ್ಮ ಫ್ರ್ಯಾಂಚೈಸಿ ಆರ್ಥಿಕ ಕೊಡುಗೆ ನೀಡುವುದಾಗಿ ಕೊಹ್ಲಿ ಘೋಷಿಸಿದ್ದರು.
ಇದನ್ನೂ ಓದಿ:ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬ್ರೆಂಡನ್ ಟೇಲರ್
ಆರ್ಸಿಬಿ ಫ್ರಾಂಚೈಸಿಯು ಗಿವ್ ಇಂಡಿಯಾ ಫೌಂಡೇಶನ್ನೊಂದಿಗೆ ಕೈಜೋಡಿಸಿ, ಬೆಂಗಳೂರು ಮತ್ತು ಇತರ ನಗರಗಳಲ್ಲಿ ಸುಮಾರು 100 ಯೂನಿಟ್ಗಳಷ್ಟು ಆಮ್ಲಜನಕ ಕಾನ್ಸನ್ಟ್ರೇಟರ್ ಗಳನ್ನು ಒದಗಿಸಿತ್ತು. ಆರ್ಸಿಬಿಯ ಮಾತೃ ಸಂಸ್ಥೆ ಡಿಯಾಜಿಯೊ ಇಂಡಿಯಾ 3 ಲಕ್ಷ ಲೀಟರ್ ಸ್ಯಾನಿಟೈಜರ್ಗಳನ್ನು ತಯಾರಿಸಿ ವಿತರಿಸಿದೆ.
ಕಳೆದ ಏಪ್ರಿಲ್ ನಲ್ಲಿ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಕೂಟ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಸೆ.19ರಂದು ದುಬೈನಲ್ಲಿ ಮತ್ತೆ ಕೂಟ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.