![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 18, 2022, 3:01 PM IST
ಮೊಹಾಲಿ: ಏಷ್ಯಾ ಕಪ್ ನ ಅಫ್ಗಾನಿಸ್ಥಾನ ತಂಡದ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಶತಕ ಸಿಡಿಸಿದ ಬಳಿಕ ಟೀಂ ಇಂಡಿಯಾದ ಬ್ಯಾಟಿಂಗ್ ಕಾಂಬಿನೇಶನ್ ನ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಇನ್ನು ಮುಂದೆ ಟಿ20 ಕ್ರಿಕೆಟ್ ನಲ್ಲಿ ನಾಯಕ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಬೇಕು ಎಂದು ಹಲವು ಮಾಜಿ ಆಟಗಾರರು ಒತ್ತಾಯಿಸಿದ್ದಾರೆ.
ಇದೀಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ ಈ ಬಗ್ಗೆ ಮಾತನಾಡಿದ್ದಾರೆ. ಕೊಹ್ಲಿ ಇನ್ನಿಂಗ್ ಆರಂಭಿಸುವ ಬಗ್ಗೆ ಒಲವು ತೋರಿಸಿರುವ ರೋಹಿತ್, ವಿಶ್ವಕಪ್ ನಲ್ಲಿ ನಮಗೆ ಇದೊಂದು ಅವಕಾಶ ಸಿಗುತ್ತದೆ ಎಂದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಸೆ.20ರಂದು ಆರಂಭವಾಗಲಿರುವ ಟಿ20 ಸರಣಿಗೆ ಮುನ್ನಾ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಿಮಗೆ ಇಂತಹ ಆಯ್ಕೆಗಳು ಸಿಗುವುದು ಯಾವಾಗಲೂ ಒಳ್ಳೆಯದು. ನೀವು ಇಂತಹ ಅವಕಾಶಗಳೊಂದಿಗೆ ವಿಶ್ವಕಪ್ ಹೋಗುತ್ತಿರುವುದಾದರೆ ಅದು ಉತ್ತಮ ಲಕ್ಷಣ. ಯಾವುದೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ಆಟಗಾರರು ಉತ್ತಮ ಶೇಪ್ ನಲ್ಲಿರಬೇಕು. ನಾವು ಹೊಸದಾಗಿ ಏನೋ ಒಂದು ಮಾಡಿದರೆ, ಅಲ್ಲಿ ಏನೋ ಒಂದು ಸಮಸ್ಯೆಯಿದೆ ಎಂದರ್ಥವಲ್ಲ.” ಎಂದರು.
ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯಲ್ಲಿ ಕೊಹ್ಲಿಯ ಪ್ರದರ್ಶನದ ಬಗ್ಗೆಯೂ ರೋಹಿತ್ ಮಾತನಾಡಿದರು. ತಂಡದಲ್ಲಿ ಯಾವುದೇ ಮೀಸಲು ಆರಂಭಿಕರನ್ನು ಹೊಂದಿಲ್ಲದ ಕಾರಣ ಭಾರತವು ಈ ಆಯ್ಕೆಯನ್ನು (ವಿರಾಟ್ ಓಪನಿಂಗ್) ಮುಕ್ತವಾಗಿರಿಸಿಕೊಳ್ಳುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ದೇಶದ ವಿರೋಧಿ ಚಟುವಟಿಕೆ ಆರೋಪ: ಆಂಧ್ರಪ್ರದೇಶದ ಹಲವೆಡೆ ಎನ್ ಐಎ ದಾಳಿ
ರೋಹಿತ್ ಈ ಹೇಳಿಕೆಯಿಂದ ಉಪ ನಾಯಕ ಕೆಎಲ್ ರಾಹುಲ್ ಅವರ ಸ್ಥಾನಕ್ಕೆ ಕುತ್ತು ಬಂದಿದ್ದೆ. ಗಾಯದ ಸಮಸ್ಯೆಯ ಕಾರಣದಿಂದ ಹಲವು ಸಮಯದ ಬಳಿಕ ಇತ್ತೀಚೆಗಷ್ಟೇ ತಂಡ ಕೂಡಿಕೊಂಡಿರುವ ರಾಹುಲ್ ಏಷ್ಯಾಕಪ್ ನಲ್ಲಿ ಉತ್ತಮ ಪ್ರದರ್ಶನ ತೋರಲು ವಿಫಲರಾಗಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.