![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 11, 2022, 7:55 AM IST
ಮುಂಬಯಿ : ಮುಂದಿನ 24 ತಿಂಗಳಲ್ಲಿ ಭಾರತದ ಟಿ20 ತಂಡದಲ್ಲಿ ಮಹತ್ತರ ಬದಲಾವಣೆಗಳಾಗುವ ಸಾಧ್ಯತೆಯಿದೆ. ಯಾಕೆಂದರೆ ಹಿರಿಯ ಆಟಗಾರರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಕ್ರಮೇಣ ತಂಡದಿಂದ ಕೈಬಿಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ಗುರುವಾರ ತಿಳಿಸಿವೆ.
ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಕ್ರಿಕೆಟ್ನ ಚುಟುಕು ಮಾದರಿಯಲ್ಲಿ ತಮ್ಮ ಕೊನೆಯ ಪಂದ್ಯಗಳನ್ನು ಆಡಿದ್ದಾರೆ ಎನ್ನಬಹುದು. ಇದೀಗ ಟಿ20ಯಲ್ಲಿ ತಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಲು ಕೊಹ್ಲಿ ಮತ್ತು ರೋಹಿತ್ ಅವರಿಗೆ ಬಿಸಿಸಿಐ ಅವಕಾಶ ನೀಡಿದೆ.
ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ತಂಡದ ಹೀನಾಯ ಸೋಲಿನ ಅನಂತರ ಅಸಮಾಧಾನಗೊಂಡ ರೋಹಿತ್ ಅವರನ್ನು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಮಾಧಾನಪಡಿಸಿದರು. ಮುಂದಿನ ಟಿ20 ವಿಶ್ವಕಪ್ಗೆ ಇನ್ನೂ ಎರಡು ವರ್ಷ ಇದೆ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ದೀರ್ಘಾವಧಿಯ ನಾಯಕತ್ವಕ್ಕೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಳವಾಗಿದೆ ಎನ್ನಲಾಗಿದೆ.
ಬಿಸಿಸಿಐ ಯಾರಲ್ಲಿಯೂ ನಿವೃತ್ತಿಯಾಗಲು ಕೇಳುವುದಿಲ್ಲ. ಇದು ವೈಯಕ್ತಿಕ ನಿರ್ಧಾರ. ಆದರೆ 2023ರಲ್ಲಿ ಕೆಲವು ಟಿ20 ಪಂದ್ಯಗಳು ನಿಗದಿಯಾಗಿರುವುದರಿಂದ, ಹೆಚ್ಚಿನ ಹಿರಿಯರು ಏಕದಿನ ಮತ್ತು ಟೆಸ್ಟ್ ಪಂದ್ಯಗಳ ಮೇಲೆ ಗಮನ ಹರಿಸುವ ಸಾಧ್ಯತೆಯಿದೆ ಎಂದು ಹೆಸರು ಹೇಳಲು ಬಯಸದ ಬಿಸಿಸಿಐ ಮೂಲಗಳು ತಿಳಿಸಿವೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.