T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?


Team Udayavani, Jun 28, 2024, 11:18 AM IST

Rohit Sharma backs Virat kohli in T20 World Cup

ಗಯಾನಾ: ಐಸಿಸಿ ಟಿ20 ವಿಶ್ವಕಪ್ 2024ರ ಫೈನಲ್ ಗೆ ಭಾರತ ತಂಡ ಪ್ರವೇಶಿಸಿದೆ. ಗುರುವಾರ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿದ ರೋಹಿತ್ ಶರ್ಮಾ ಬಳಗ ಫೈನಲ್ ಗೆ ತಲುಪಿದೆ. ಕೂಟದಲ್ಲಿ ಸೋಲು ಕಾಣದ ಎರಡು ತಂಡಗಳಾದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ ನಲ್ಲಿ ಮುಖಾಮುಖಿಯಾಗಲಿದೆ.

ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಅಂತಿಮ ಸುತ್ತು ತಲುಪಿರುವ ಭಾರತ ಬಲಿಷ್ಠವಾಗಿದೆ. ಆದರೆ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಸದ್ಯದ ಫಾರ್ಮ್ ಟೀಂ ಮ್ಯಾನೇಜ್ ಮೆಂಟ್ ಚಿಂತೆಗೆ ಕಾರಣವಾಗಿದೆ. ಭರ್ಜರಿ ಐಪಿಎಲ್ ಫಾರ್ಮ್ ನೊಂದಿಗೆ ಟಿ20 ವಿಶ್ವಕಪ್ ಗೆ ಬಂದಿದ್ದ ವಿರಾಟ್ ಇಲ್ಲಿ ರನ್ ಕಲೆಹಾಕಲು ಪರದಾಡುತ್ತಿದ್ದಾರೆ. ಆಡಿದ ಏಳು ಪಂದ್ಯಗಳಲ್ಲಿ ವಿರಾಟ್ ಗಳಿಸಿದ್ದು ಕೇವಲ 75 ರನ್. ಇಂಗ್ಲೆಂಡ್ ವಿರುದ್ದವೂ 9 ರನ್ ಮಾಡಿದ ವಿರಾಟ್ ಬೌಲ್ಡ್ ಆಗಿದ್ದರು.

ಪಂದ್ಯದ ಬಳಿಕ ನೇರಪ್ರಸಾರಕರೊಂದಿಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ ಅವರಿಗೆ ವಿರಾಟ್ ಫಾರ್ಮ್ ಬಗ್ಗೆ ಪ್ರಶ್ನೆ ಕೇಳಲಾಯಿತು. ಅವರು ಕೊಹ್ಲಿಯನ್ನು ಬೆಂಬಲಿಸಿಯೇ ಮಾತನಾಡಿದ್ದು, ಬಹುಶಃ ಫೈನಲ್ ಪಂದ್ಯಕ್ಕೆ ವಿರಾಟ್ ತನ್ನ ರನ್ ಜೋಪಾನ ಮಾಡಿರಬಹುದು ಎಂದರು.

“ವಿರಾಟ್ ಒಬ್ಬ ಗುಣಮಟ್ಟದ ಆಟಗಾರ. ಯಾವುದೇ ಆಟಗಾರ ಫಾರ್ಮ್ ಸಮಸ್ಯೆಗೆ ಒಳಗಾಗುತ್ತಾನೆ. ಆತನ ಕ್ಲಾಸ್ ಮತ್ತು ಮಹತ್ವದ ಬಗ್ಗೆ ನಮಗೆ ಗೊತ್ತು. ಫಾರ್ಮ್ ನಮಗೆ ಸಮಸ್ಯೆಯಲ್ಲ. ಆದರೆ ರನ್ ಗಳಿಸುವ ಉದ್ದೇಶ ಯಾವಾಗಲೂ ಇದೆ. ಫೈನಲ್ ಗೆ ಅವರಿಗೆ ಬೆಂಬಲ ನೀಡುತ್ತೇವೆ” ಎಂದು ರೋಹಿತ್ ಹೇಳಿದರು.

“ನೀವು 15 ವರ್ಷಗಳ ಕಾಲ ಕ್ರಿಕೆಟ್ ಆಡಿದಾಗ, ಫಾರ್ಮ್ ಎಂದಿಗೂ ಸಮಸ್ಯೆಯಾಗಿರುವುದಿಲ್ಲ. ಅವರು ಉತ್ತಮವಾಗಿ ಕಾಣುತ್ತಿದ್ದಾರೆ, ವಿರಾಟ್ ಬಹುಶಃ ಫೈನಲ್‌ ಗಾಗಿ ರನ್ ಉಳಿಸುತ್ತಿದ್ದಾನೆ” ಎಂದರು.

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.