England ಟೆಸ್ಟ್‌ ತಂಡದಲ್ಲಿ ಆರ್.ಪಿ.ಸಿಂಗ್‌ ಪುತ್ರ ಹ್ಯಾರಿ; ಇದು ಆ ಆರ್‌.ಪಿ ಅಲ್ಲ!


Team Udayavani, Aug 23, 2024, 12:28 PM IST

England ಟೆಸ್ಟ್‌ ತಂಡದಲ್ಲಿ ಆರ್.ಪಿ.ಸಿಂಗ್‌ ಪುತ್ರ ಹ್ಯಾರಿ; ಇದು ಆ ಆರ್‌.ಪಿ ಅಲ್ಲ!

ಲಂಡನ್:‌ ಇಂಗ್ಲೆಂಡ್‌ ಮತ್ತು ಶ್ರೀಲಂಕಾ (ENGvsSL) ನಡುವಿನ ಟೆಸ್ಟ್‌ ಸರಣಿಯ ಮೊದಲ ಪಂದ್ಯದ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೂವರು ಬದಲಿ ಆಟಗಾರರು ಫೀಲ್ಡಿಂಗ್‌ ಗೆ ಬಂದರು. ಈ ಮೂವರಲ್ಲಿ ಒಬ್ಬರು ಲಂಕಾಶೈರ್ (Lancashire)  ಬ್ಯಾಟರ್‌ ಹ್ಯಾರಿ ಸಿಂಗ್‌ (Harry Singh) ಒಬ್ಬರು. ಆರಂಭದಲ್ಲಿಯೇ ಬದಲಿ ಆಟಗಾರನಾಗಿಯೇ ಫೀಲ್ಡಿಂಗ್‌ ಗೆ ಬಂದ 20 ವರ್ಷದ ಹ್ಯಾರಿ ಸಿಂಗ್‌ ಮತ್ತೆ 37ನೇ ಓವರ್‌ ನಲ್ಲಿ ಹ್ಯಾರಿ ಬ್ರೂಕ್‌ (Harry Brook) ಅವರ ಬದಲಿಯಾಗಿ ಕ್ಷೇತ್ರ ರಕ್ಷಣೆಗೆ ಬಂದರು.

ಯಾರು ಈ ಹ್ಯಾರಿ ಸಿಂಗ್‌

20 ವರ್ಷದ ಲಂಕಾ ಶೈರ್‌ ತಂಡದ ಆರಂಭಿಕ ಆಟಗಾರ ಹ್ಯಾರಿ ಸಿಂಗ್‌ ಅವರು ಭಾರತದ ಮಾಜಿ ಆಟಗಾರ ರುದ್ರ ಪ್ರತಾಪ್‌ ಸಿಂಗ್‌ ಸೀನಿಯರ್‌ (Rudra Pratap Singh Senior) ಅವರ ಪುತ್ರ. ಆರ್.ಪಿ ಸಿಂಗ್‌ ಎಂದರೆ ಮೊದಲು ನೆನಪಾಗುವುದು 2007ರ ಟಿ20 ವಿಶ್ವಕಪ್‌ ಗೆದ್ದ ತಂಡದ ಸದಸ್ಯ. ಆದರೆ 80ರ ದಶಕದಲ್ಲಿ ಭಾರತ ತಂಡದ ಪರವಾಗಿ ಎರಡು ಪಂದ್ಯವಾಡಿದ್ದ ಆಟಗಾರ ರುದ್ರ ಪ್ರತಾಪ್‌ ಸಿಂಗ್‌ ಸೀನಿಯರ್‌ ಅವರ ಪುತ್ರ ಈ ಹ್ಯಾರಿ ಸಿಂಗ್.‌

ರುದ್ರ ಪ್ರತಾಪ್‌ ಸಿಂಗ್‌ ಸೀನಿಯರ್‌ ಅವರು 1986ರಲ್ಲಿ ಆಸ್ಟ್ರೇಲಿಯಾ ವಿರುದ್ದ ಎರಡು ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಕ್ರಿಕೆಟ್‌ ವೃತ್ತಿಜೀವನದ ಬಳಿಕ ರುದ್ರ ಪ್ರತಾಪ್‌ ಸಿಂಗ್‌ ಅವರು ಇಂಗ್ಲೆಂಡ್‌ ಗೆ ಹೋಗಿ ಸೆಟಲ್‌ ಆಗಿದ್ದಾರೆ.

ಹ್ಯಾರಿ ಸಿಂಗ್ ಅವರು ಜೂನ್ 16, 2004 ರಂದು ಇಂಗ್ಲೆಂಡ್‌ ನ ಲಂಕಾಶೈರ್‌ ನ ಬ್ಲ್ಯಾಕ್‌ಬರ್ನ್‌ ನಲ್ಲಿ ಜನಿಸಿದರು. ರುದ್ರ ಪ್ರತಾಪ್‌ ಸಿಂಗ್‌ ಅವರು ಲಂಕಾಶೈರ್ ಕೌಂಟಿ ಕ್ಲಬ್ ಮತ್ತು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ECB) ನೊಂದಿಗೆ ಕೋಚಿಂಗ್ ಹುದ್ದೆಗಳಲ್ಲಿ ಕೆಲಸ ಮಾಡಿದ್ದರು.

ಹ್ಯಾರಿ ಸಿಂಗ್‌ ಅವರು ಯುಕೆಯಲ್ಲಿ ತಮ್ಮದೇ ಆದ ಕ್ರಿಕೆಟ್ ವೃತ್ತಿಜೀವನದಲ್ಲಿ ಸ್ಥಿರವಾದ ಪ್ರಗತಿ ಸಾಧಿಸುತ್ತಿದ್ದಾರೆ. ಅವರು ಈ ವರ್ಷದ ಆರಂಭದಲ್ಲಿ ಲಂಕಾಶೈರ್‌ ಗಾಗಿ ಏಕದಿನ ಕಪ್‌ ನಲ್ಲಿ ಪದಾರ್ಪಣೆ ಮಾಡಿದರು. ಈ ಕೂಟದ ಎಲ್ಲಾ ಏಳು ಪಂದ್ಯಗಳನ್ನು ಆಡಿದರು.

“ನಾನು ನಾಲ್ಕನೇ ವಯಸ್ಸಿನಲ್ಲಿ ಕ್ರಿಕೆಟ್ ಆಡಲು ಪ್ರಾರಂಭಿಸಿದೆ, ಎಂಟನೇ ವಯಸ್ಸಿನಲ್ಲಿ ಲಂಕಾಶೈರ್‌ ನ ಪಾಥ್‌ ವೇ ಸಿಸ್ಟಮ್‌ ಗೆ ಸೇರಿಕೊಂಡೆ. ನಾನು 15 ನೇ ವಯಸ್ಸಿನಿಂದ ಲ್ಯಾಂಕ್ಸ್ ಅಕಾಡೆಮಿಯಲ್ಲಿದ್ದೇನೆ. ಆದ್ದರಿಂದ ನಾನು ಈ ಹಂತವನ್ನು ತಲುಪುವ ಇದು ದೀರ್ಘ ಪ್ರಯಾಣವಾಗಿದೆ” ಎಂದು ಹ್ಯಾರಿ ಸಿಂಗ್ ಹೇಳಿದರು.

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.