SA vs Ind ಇಂದು ಸರಣಿ ನಿರ್ಣಾಯಕ ಪಂದ್ಯ: ಭಾರತಕ್ಕೆ ಅಗ್ರ ಕ್ರಮಾಂಕದ ಸಮಸ್ಯೆ
Team Udayavani, Dec 21, 2023, 6:15 AM IST
ಪಾರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಸಾಮಾನ್ಯ ಮಟ್ಟದ ಬ್ಯಾಟಿಂಗ್ ಪ್ರದರ್ಶಿಸಿ ಎಡವಿದ ಭಾರತ ತಂಡ, ಗುರುವಾರ ಪಾರ್ಲ್ನಲ್ಲಿ ಎದ್ದು ನಿಂತು ಸರಣಿ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಇದಕ್ಕೆ ಅಗ್ರ ಕ್ರಮಾಂಕದ ಬ್ಯಾಟಿಂಗ್ ಸಮಸ್ಯೆಯನ್ನು ಮೊದಲು ನಿವಾರಿಸಿಕೊಳ್ಳಬೇಕಿದೆ.
ಗಾಯಕ್ವಾಡ್ ಎರಡೂ ಪಂದ್ಯಗಳಲ್ಲಿ ಮುಗ್ಗರಿಸಿರುವುದು ಚಿಂತೆಯ ಸಂಗತಿಯಾಗಿದೆ. ಇವರ ಗಳಿಕೆ 5 ಮತ್ತು 4 ರನ್ ಮಾತ್ರ. ಹೀಗಾಗಿ ಮೊದಲ ವಿಕೆಟಿಗೆ ಭಾರತದಿಂದ ಗಳಿಸಲು ಸಾಧ್ಯವಾದದ್ದು ಕೇವಲ 23 ಮತ್ತು 4 ರನ್. ಇದರಿಂದ ಮಧ್ಯಮ ಕ್ರಮಾಂಕದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ಆದರೆ ಇದೇ ಸರಣಿಯಲ್ಲಿ ಪದಾರ್ಪಣೆ ಮಾಡಿದ ಸಾಯಿ ಸುದರ್ಶನ್ ಸತತ 2 ಅರ್ಧಶತಕಗಳೊಂದಿಗೆ ಮೆರೆದದ್ದು ಶುಭಸಮಾಚಾರ. ಕ್ರಮವಾಗಿ 55 ಹಾಗೂ 62 ರನ್ ಬಾರಿಸಿ ಲಭಿಸಿದ ಅವಕಾಶ ವನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ.
ಭಾರತಕ್ಕೆ ಹೋಲಿಸಿದರೆ ದಕ್ಷಿಣ ಆಫ್ರಿಕಾದ ಓಪನಿಂಗ್ ಬಹಳ ಮೇಲ್ಮಟ್ಟ ದಲ್ಲಿದೆ. ದ್ವಿತೀಯ ಪಂದ್ಯದ ಚೇಸಿಂಗ್ ವೇಳೆ ಟೋನಿ ಡಿ ಝೋರ್ಜಿ ಚೊಚ್ಚಲ ಶತಕ (ಅಜೇಯ 119) ಮತ್ತು ರೀಝ ಹೆಂಡ್ರಿಕ್ಸ್ ಅರ್ಧ ಶತಕ (52) ಬಾರಿಸುವಲ್ಲಿ ಯಶಸ್ವಿಯಾಗಿದ್ದರು. ಈ ಜೋಡಿಯಿಂದ ಮೊದಲ ವಿಕೆಟಿಗೆ 27.5 ಓವರ್ಗಳಿಂದ 130 ರನ್ ಒಟ್ಟುಗೂಡಿತ್ತು.
ಇದು ಭಾರತದ ಬೌಲಿಂಗ್ ವೈಫಲ್ಯ ದತ್ತಲೂ ಬೆಟ್ಟು ಮಾಡಿದೆ. ಮೊದಲ ಏಕದಿನದಲ್ಲಿ ದಕ್ಷಿಣ ಆಫ್ರಿಕಾವನ್ನು ಅಲ್ಪ ಮೊತ್ತಕ್ಕೆ ಕೆಡವಿದ ಭಾರತ, ಮಂಗಳವಾರ ಇದೇ ಲಯವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಅರ್ಷದೀಪ್ ಮತ್ತು ಆವೇಶ್ ಖಾನ್ ರನ್ ನಿಯಂತ್ರಿಸಿದರೂ ಹರಿಣಗಳನ್ನು ಪೆವಿಲಿಯನ್ನಿಗೆ ಅಟ್ಟುವ ಪ್ರಯತ್ನದಲ್ಲಿ ಯಶಸ್ಸು ಕಾಣಲಿಲ್ಲ. 42.3 ಓವರ್ಗಳಲ್ಲಿ ಎರಡೇ ವಿಕೆಟಿಗೆ 215 ರನ್ ಬಾರಿಸಿದ ದಕ್ಷಿಣ ಆಫ್ರಿಕಾ ಸರಣಿಗೆ ಮರಳಿದ್ದು ಯಂಗ್ ಇಂಡಿಯಾ ಪಾಲಿಗೊಂದು ಎಚ್ಚರಿಕೆಯ ಗಂಟೆ.
ಆರಂಭ: ಸಂಜೆ 4.30
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.