![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 26, 2022, 10:01 AM IST
ಮುಂಬೈ: 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ ಆರಂಭವಾಗುತ್ತಿದೆ. ಹತ್ತು ತಂಡಗಳ ಹೊಸ ಮಾದರಿಯ ಕೂಟ ಮುಂಬೈನಲ್ಲಿ ಇಂದು ಶುಭಾರಂಭಗೊಳ್ಳಲಿದೆ. ಎಲ್ಲಾ ತಂಡಗಳು ಹೊಸ ಆಟಗಾರರು ಮತ್ತು ಹೊಸ ಹುರುಪಿನೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.
ಆದರೆ ಇದಕ್ಕೂ ಮೊದಲೇ ರಾಜಸ್ಥಾನ ರಾಯಲ್ಸ್ ತಂಡ ಪೇಚಿಗೆ ಸಿಲುಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿರುವ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಸಾಮಾಜಿಕ ಜಾಲತಾಣ ತಂಡ ಶುಕ್ರವಾರ ನಾಯಕ ಸಂಜು ಸ್ಯಾಮ್ಸನ್ ಕೋಪಕ್ಕೆ ಗುರಿಯಾಗಿದೆ.
ಇದನ್ನೂ ಓದಿ:ಎದೆ ಹಾಲಿನಿಂದಲೇ ಆಭರಣ; 15 ಕೋಟಿ ರೂ. ನಿರೀಕ್ಷೆ!
ಸಂಜು ಸ್ಯಾಮ್ಸನ್ ಅವರ ಚಿತ್ರವೊಂದನ್ನು ತಮಾಷೆಯಾಗಿ ಎಡಿಟ್ ಮಾಡಿ ರಾಜಸ್ಥಾನ ರಾಯಲ್ಸ್ ಅಧಿಕೃತ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಆದರೆ ಈ ಕೀಟಲೆಯನ್ನು ಸಹಿಸದ ಸಂಜು ಸ್ಯಾಮ್ಸನ್ ಕೋಪಗೊಂಡು, ‘ಗೆಳೆತನದ ನಡುವೆ ಇದೆಲ್ಲಾ ಪರವಾಗಿಲ್ಲ, ಆದರೆ ತಂಡಗಳು ವೃತ್ತಿಪರವಾಗಿಬೇಕು” ಎಂದು ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದರು. ಇದಾದ ಬಳಿಕ ರಾಜಸ್ಥಾನ ರಾಯಲ್ಸ್ ಆ ಚಿತ್ರವನ್ನು ಡಿಲೀಟ್ ಮಾಡಿದೆ.
Its ok for friends to do all this but teams should be professional..@rajasthanroyals https://t.co/X2iPXl7oQu
— Sanju Samson (@IamSanjuSamson) March 25, 2022
ಸ್ಯಾಮ್ಸನ್ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ ನಂತರ, ಫ್ರ್ಯಾಂಚೈಸಿಯು ಟ್ವಿಟ್ಟರ್ ನಲ್ಲಿ ಅಧಿಕೃತ ಪ್ರಕಟಣೆಯನ್ನು ಪೋಸ್ಟ್ ಮಾಡಿದೆ. “ತನ್ನ ಡಿಜಿಟಲ್ ತಂತ್ರವನ್ನು ಮರುಪರಿಶೀಲಿಸುತ್ತದೆ ಮತ್ತು ಶೀಘ್ರದಲ್ಲೇ ಹೊಸ ಸಾಮಾಜಿಕ ಮಾಧ್ಯಮ ತಂಡವನ್ನು ನೇಮಿಸುತ್ತದೆ” ಎಂದು ಉಲ್ಲೇಖಿಸಿದೆ.
ರಾಜಸ್ಥಾನ ರಾಯಲ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಪಂದ್ಯ ಮಾ.29ರಂದು ನಡೆಯಲಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.