![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 16, 2021, 7:00 AM IST
ಜೈಪುರ: ಪಿಂಕ್ ಸಿಟಿಯ “ಸವಾಯ್ ಮಾನ್ಸಿಂಗ್ ಸ್ಟೇಡಿಯಂ’ 2013ರ ಬಳಿಕ ಮೊದಲ ಅಂತಾರಾಷ್ಟ್ರೀಯ ಪಂದ್ಯದ ಆತಿಥ್ಯ ವಹಿಸುವ ಸಡಗರದಲ್ಲಿದೆ.
ಬುಧವಾರ ಇಲ್ಲಿ ಭಾರತ-ನ್ಯೂಜಿಲ್ಯಾಂಡ್ ನಡುವಿನ ಮೊದಲ ಟಿ20 ಮುಖಾಮುಖಿ ಸಾಗಲಿದೆ. ಇದು ಜೈಪುರದಲ್ಲಿ ನಡೆಯಲಿರುವ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವೆಂಬುದು ಮತ್ತೊಂದು ಸಡಗರಕ್ಕೆ ಕಾರಣ.
ಆದರೆ ಕಳೆದೆರಡು ದಿನಗಳಿಂದ ಜೈಪುರ ದಟ್ಟ ಮಂಜಿನಿಂದ ಆವೃತ ವಾಗಿದೆ. ಪಂದ್ಯ 7 ಗಂಟೆಗೆ ಆರಂಭ ವಾಗುವುದಿದ್ದರೂ ಮೊದಲ ಇನ್ನಿಂಗ್ಸ್ ವೇಳೆಯೇ ಮಂಜಿನ ಪ್ರಭಾವ ತೀವ್ರಗೊಳ್ಳಲಿದೆ. ಹೀಗಾಗಿ “ಆಂಟಿ ಡ್ಯೂ ಸ್ಪ್ರೇ’ ಪ್ರಯೋಗಿಸಬೇಕಾಗುತ್ತದೆ ಎಂದು ಕ್ರೀಡಾಂಗಣದ ಅಧಿಕಾರಿ ಯೊಬ್ಬರು ಹೇಳಿದ್ದಾರೆ.
ಬ್ಯಾಟಿಂಗ್ ಟ್ರ್ಯಾಕ್?
ಆದರೂ ಇಲ್ಲಿನ ಟ್ರ್ಯಾಕ್ ಬ್ಯಾಟಿಂಗಿಗೆ ಹೆಚ್ಚಿನ ಸಹಕಾರ ನೀಡುವ ಸಾಧ್ಯತೆ ಇದೆ. 2013ರಲ್ಲಿ ಇಲ್ಲಿ ಆಸ್ಟ್ರೇಲಿಯ ವಿರುದ್ಧ ಕೊನೆಯ ಏಕದಿನ ಪಂದ್ಯ ನಡೆದಾಗ ರನ್ ಪ್ರವಾಹವೇ ಹರಿದು ಬಂದಿತ್ತು. ಆಸೀಸ್ನ 359 ರನ್ನುಗಳ ಕಠಿನ ಗುರಿಯನ್ನು ಭಾರತ 43.3 ಓವರ್ಗಳಲ್ಲೇ ಬೆನ್ನಟ್ಟಿತ್ತು. ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಶತಕ ಬಾರಿಸಿದ್ದರು.
ಇದನ್ನೂ ಓದಿ:ನಮ್ಮ ಕುಟುಂಬದ ತಂಟೆಗೆ ಬಂದರೆ ಹುಷಾರ್: ಬಿಜೆಪಿಗೆ ಎಚ್ಡಿಕೆ ಎಚ್ಚರಿಕೆ
25 ಸಾವಿರ ಸಾಮರ್ಥ್ಯ
ಸ್ಟೇಡಿಯಂ 25 ಸಾವಿರ ವೀಕ್ಷಕರ ಸಾಮರ್ಥ್ಯ ಹೊಂದಿದೆ. ಆನ್ಲೈನ್ನಲ್ಲಿ 8 ಸಾವಿರ ಟಿಕೆಟ್ ಮಾರಾಟ ವಾಗಿದೆ ಎಂದು ಆರ್ಸಿಎ ಕಾರ್ಯದರ್ಶಿ ಮಹೇಂದ್ರ ವರ್ಮ ಹೇಳಿದ್ದಾರೆ.
ರಾಜಸ್ಥಾನ್ ಕ್ರಿಕೆಟ್ ಮಂಡಳಿಯ ಅಧಿಕಾರಿಗಳ ಒಳಜಗಳದಿಂದಾಗಿ ಕಳೆದೊಂದು ದಶಕದಲ್ಲಿ ಜೈಪುರಕ್ಕೆ ಅಂತಾರಾಷ್ಟ್ರೀಯ ಪಂದ್ಯದ ಆತಿಥ್ಯ ತಪ್ಪಿತ್ತು. ಈಗ ಸಮಸ್ಯೆ ತಿಳಿಯಾಗಿದೆ. ಫೆಬ್ರವರಿಯಲ್ಲಿ ಇಲ್ಲಿ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಕೂಡ ನಡೆಯಲಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.