ಸೌರವ್ ಗಂಗೂಲಿ ಬಿಜೆಪಿ ಸೇರುತ್ತಾರೆಂಬ ವದಂತಿಗೆ ಜೀವ
Team Udayavani, Aug 25, 2020, 6:05 AM IST
ಕೋಲ್ಕತ: ಮುಂದಿನ ವರ್ಷ ಬಂಗಾಲ ವಿಧಾನಸಭೆ ಚುನಾವಣೆಯಿದೆ. ಈ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷದ ನೇತೃತ್ವವನ್ನು ಬಿಸಿಸಿಐ ಅಧ್ಯಕ್ಷ, ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ವಹಿಸುತ್ತಾರೆಂಬ ವರದಿಗಳು ಈಗಾಗಲೇ ಓಡಾಡುತ್ತಿವೆ. ಈ ಚರ್ಚೆ ಜೋರಾಗಿರುವಾಗಲೇ ಸೌರವ್ ಗಂಗೂಲಿ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಲ ಸರಕಾರ ತನಗೆ ನೀಡಿದ್ದ 2 ಎಕರೆ ಜಾಗವನ್ನು ಹಿಂತಿರುಗಿಸಿದ್ದಾರೆ. ಶನಿವಾರ ನಡೆದಿರುವ ಈ ಬೆಳವಣಿಗೆಯಿಂದ, ಈಗಾಗಲೇ ಹಬ್ಬಿರುವ ವರದಿಗಳು ಹೌದು ಎನ್ನಲು ಸಾಕ್ಷ್ಯ ನೀಡಿದಂತಾಗಿದೆ.
ಗಂಗೂಲಿ ಎಜುಕೇಶನಲ್ ಆ್ಯಂಡ್ ವೆಲ್ಫೇರ್ ಸೊಸೈಟಿಗೆ ಬಂಗಾಲದ ಗೃಹಮಂಡಳಿ 2 ಎಕರೆ ಜಾಗ ವನ್ನು ಕೋಲ್ಕತದ ಪೂರ್ವಭಾಗದಲ್ಲಿ ನೀಡಿತ್ತು. ಐಸಿ ಎಸ್ಇ ಆಧಾರಿತ 12ನೇ ತರಗತಿವರೆಗಿನ ಶಾಲೆಯನ್ನು ಇಲ್ಲಿ ತೆರೆಯಲು ಗಂಗೂಲಿ ಹೊರಟಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಸರಕಾರಕ್ಕೆ ಪತ್ರ ಬರೆದಿ ರುವ ಗಂಗೂಲಿ ಎಜುಕೇಶನಲ್ ಆ್ಯಂಡ್ ವೆಲ್ಫೇರ್ ಸೊಸೈಟಿ, ಜಮೀನನ್ನು ಹಿಂಪಡೆಯಲು ಮನವಿ ಮಾಡಿದೆ. ಅದನ್ನು ಅಲ್ಲಿನ ಸರಕಾರ ಅಂಗೀಕರಿಸಿದೆ. ಕಾನೂನು ತೊಂದರೆ ಯಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಕೆಲ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.