T20 World Cup: ರೋಚಕ ಪಂದ್ಯದಲ್ಲಿ ಸೋತ ವೆಸ್ಟ್ ಇಂಡೀಸ್ ಮನೆಗೆ; ದ.ಆಫ್ರಿಕಾ ಸೆಮಿಗೆ


Team Udayavani, Jun 24, 2024, 10:41 AM IST

T20 World Cup: ರೋಚಕ ಪಂದ್ಯದಲ್ಲಿ ಸೋತ ವೆಸ್ಟ್ ಇಂಡೀಸ್ ಮನೆಗೆ; ದ.ಆಫ್ರಿಕಾ ಸೆಮಿಗೆ

ಆ್ಯಂಟಿಗುವಾ: ಐಸಿಸಿ ಟಿ20 ವಿಶ್ವಕಪ್ 2024ರ ಕ್ವಾರ್ಟರ್ ಫೈನಲ್ ಎಂದೇ ಬಿಂಬಿತವಾಗಿದ್ದ ಆತಿಥೇಯ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಗೆಲುವು ಸಾಧಿಸಿದೆ. ಇದರೊಂದಿಗೆ ಹರಿಣಗಳು ಸೆಮಿ ಫೈನಲ್ ಗೆ ಟಿಕೆಟ್ ಪಡೆದಿದೆ.

ಆ್ಯಂಟಿಗುವಾದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 8 ವಿಕೆಟ್ ನಷ್ಟಕ್ಕೆ 135 ರನ್ ಕಲೆ ಹಾಕಿತು. ಎರಡನೇ ಇನ್ನಿಂಗ್ಸ್ ಮಳೆಯಿಂದ ಅಡಚಣೆಯಾದ ಕಾರಣ 17 ಓವರ್ ಗೆ ಇಳಿಸಲ್ಪಟ್ಟಿತು. 123 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ 16.1 ಓವರ್ ಗಳಲ್ಲಿ ಜಯ ಸಾಧಿಸಿತು.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ವೆಸ್ಟ್ ಇಂಡೀಸ್ ದೊಡ್ಡ ಮೊತ್ತ ಕಲೆ ಹಾಕಲು ವಿಫಲವಾಯಿತು. ಮೊದಲ ಬಾರಿ ಅವಕಾಶ ಪಡೆದ ಕೈಲ್ ಮೇಯರ್ಸ್ 35 ರನ್ ಮಾಡಿದರು. ರೋಸ್ಟನ್ ಚೇಸ್ 42 ಎಸೆತಗಳಲ್ಲಿ 52 ರನ್ ಮಾಡಿ ತಂಡಕ್ಕೆ ನೆರವಾದರು. ಕಳೆದ ಪಂದ್ಯದ ಹೀರೋ ಶಾಯ್ ಹೋಪ್ ಗೋಲ್ಡನ್ ಡಕ್ ಗೆ ಬಲಿಯಾದರು. ಪೂರನ್, ನಾಯಕ ಪೊವೆಲ್, ರುದರ್ ಫೋರ್ಡ್ ಕಳಪೆಯಾಟ ತಂಡಕ್ಕೆ ಹಿನ್ನಡೆಯಾಯಿತು.

ದ. ಆಫ್ರಿಕಾ ಪರ ತಬ್ರೈಜ್ ಶಮ್ಸಿ ಮೂರು ವಿಕೆಟ್ ಪಡೆದರೆ, ಮಾಕ್ರೊ ಎನ್ಸನ್, ಮಾರ್ಕ್ರಮ್, ಮಹಾರಾಜ್ ಮತ್ತು ರಬಾಡಾ ತಲಾ ಒಂದು ವಿಕೆಟ್ ಕಿತ್ತರು.

ಗುರಿ ಬೆನ್ನತ್ತಿದ ದ.ಆಫ್ರಿಕಾ 2 ಓವರ್ ಗಳಲ್ಲಿ 15 ರನ್ ಗೆ ಎರಡು ವಿಕೆಟ್ ಕಳೆದುಕೊಂಡಿದ್ದಾಗ ಮಳೆ ಅಡ್ಡಿಪಡಿಸಿತು. ಬಳಿಕ 17 ಓವರ್ ಗಳಲ್ಲಿ 123 ರನ್ ಗುರಿ ನೀಡಲಾಯಿತು. ರೀಜಾ ಹೆಂಡ್ರಿಕ್ಸ್ ಗೋಲ್ಡನ್ ಡಕ್ ಗೆ ಬಲಿಯಾದರೆ, ಡಿಕಾಕ್ 12 ರನ್ ಮಾಡಿ ಔಟಾದರು.

ಮಳೆ ನಿಂತ ಬಳಿಕ ಕ್ಲಾಸನ್ 10 ಎಸೆತದಲ್ಲಿ 22, ನಾಯಕ ಮಾರ್ಕ್ರಮ್ 18 ರನ್ ಗಳಿಸಿದರು. ಸ್ಟಬ್ಸ್ 29 ಮತ್ತು ಕೊನೆಯಲ್ಲಿ 21 ರನ್ ಹೊಡೆದ ಮಾರ್ಕೊ ಎನ್ಸನ್ ತಂಡಕ್ಕೆ ನೆರವಾದರು.

ಸಿನಿಮೀಯ ಅಂತ್ಯ: ಒಂದು ಹಂತದಲ್ಲಿ ಆಫ್ರಿಕಾ ಸುಲಭ ಗೆಲುವು ಸಾಧಿಸುವ ಸಾಧ್ಯತೆಯಿತ್ತು. ಆದರೆ ಯಾರೊಬ್ಬ ಆಟಗಾರರು ದೊಡ್ಡ ಇನ್ನಿಂಗ್ಸ್ ಕಟ್ಟಲಿಲ್ಲ. ಸಮಯೋಚಿತವಾಗಿ ವಿಂಡೀಸ್ ವಿಕೆಟ್ ಪಡೆಯಿತು. ಕೊನೆಯ ಎರಡು ಓವರ್ ನಲ್ಲಿ 13 ರನ್ ಅಗತ್ಯವಿತ್ತು. ಚೇಸ್ ಎಸೆತ ಓವರ್ ನಲ್ಲಿ ಮಹರಾಜ್ ಔಟಾದರು. ಆದರೆ ಈ ಓವರ್ ನ ಕೊನೆಯ ಎಸೆತಕ್ಕೆ ರಬಾಡಾ ಬೌಂಡರಿಗಟ್ಟಿದರು. ಕೊನೆಯ ಓವರ್ ನ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸಿದ ಎನ್ಸನ್ ದಕ್ಷಿಣ ಆಫ್ರಿಕಾ ತಂಡವನ್ನು ಸೆಮಿ ಫೈನಲ್ ಗೇರಿಸಿದರು.

ಈ ಸೋಲಿನೊಂದಿಗೆ ವೆಸ್ಟ್ ಇಂಡೀಸ್ ಕೂಟವನ್ನು ಅಂತ್ಯಗೊಳಿಸಿತು. ಬಿ ಗುಂಪಿನಿಂದ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಸೆಮಿ ಫೈನಲ್ ಪ್ರವೇಶಿಸಿತು.

ಟಾಪ್ ನ್ಯೂಸ್

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.