![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 28, 2023, 5:50 AM IST
ಸೆಂಚುರಿಯನ್: ಏಕದಿನ ಪಂದ್ಯದಲ್ಲಿ ಸರ್ವಾಧಿಕ ಮೊತ್ತವನ್ನು ಬೆನ್ನಟ್ಟಿ ಗೆದ್ದು ವಿಶ್ವದಾಖಲೆ ನಿರ್ಮಿಸಿರುವ ದಕ್ಷಿಣ ಆಫ್ರಿಕಾ ಇದೀಗ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲೂ ಚೇಸಿಂಗ್ ದಾಖಲೆ ಸ್ಥಾಪಿಸಿದೆ. ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಸೆಂಚುರಿಯನ್ನಲ್ಲಿ ನಡೆದ ಮುಖಾಮುಖಿಯಲ್ಲಿ ಹರಿಣಗಳ ಪಡೆ ಈ ಸಾಧನೆಗೈದಿತು.
ಬ್ಯಾಟಿಂಗ್ಗೆ ಇಳಿಸಲ್ಪಟ್ಟ ವೆಸ್ಟ್ ಇಂಡೀಸ್ 5 ವಿಕೆಟಿಗೆ 258 ರನ್ ರಾಶಿ ಹಾಕಿತು. ಇದನ್ನು ಬೆನ್ನಟ್ಟಿಕೊಂಡು ಹೋದ ದಕ್ಷಿಣ ಆಫ್ರಿಕಾ 18.5 ಓವರ್ಗಳಲ್ಲಿ 4 ವಿಕೆಟಿಗೆ 259 ರನ್ ಬಾರಿಸಿ ಅಮೋಘ ಗೆಲುವು ಸಾಧಿಸಿತು. ನ್ಯೂಜಿಲ್ಯಾಂಡ್ ಎದುರಿನ 2018ರ ಆಕ್ಲೆಂಡ್ ಪಂದ್ಯದಲ್ಲಿ ಆಸ್ಟ್ರೇಲಿಯ 5ಕ್ಕೆ 245 ರನ್ ಚೇಸ್ ಮಾಡಿ ಗೆದ್ದದ್ದು ಈವರೆಗಿನ ದಾಖಲೆಯಾಗಿತ್ತು.
ಹಾಗೆಯೇ ಏಕದಿನ ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಮೊದಲ ಬಾರಿಗೆ 500 ರನ್ ಹರಿದು ಬಂತು (517 ರನ್). 2018ರ ಭಾರತ-ವೆಸ್ಟ್ ಇಂಡೀಸ್ ನಡುವಿನ ಲಾಡರ್ಹಿಲ್ ಪಂದ್ಯದಲ್ಲಿ 489 ರನ್ ಒಟ್ಟುಗೂಡಿದ ದಾಖಲೆ ಪತನಗೊಂಡಿತು.
ಆರಂಭಕಾರ ಕ್ವಿಂಟನ್ ಡಿ ಕಾಕ್ ಅವರ ಸ್ಫೋಟಕ 100 ರನ್ (44 ಎಸೆತ, 9 ಬೌಂಡರಿ, 8 ಸಿಕ್ಸರ್), ಇವರು ರೀಝ ಹೆಂಡ್ರಿಕ್ಸ್ (68) ಜತೆಗೂಡಿ ಮೊದಲ ವಿಕೆಟಿಗೆ 10.5 ಓವರ್ಗಳಲ್ಲಿ ದಾಖಸಿದ 152 ರನ್ ಜತೆಯಾಟ ದಕ್ಷಿಣ ಆಫ್ರಿಕಾದ ಯಶಸ್ವಿ ಚೇಸಿಂಗ್ನಲ್ಲಿ ಪ್ರಮುಖ ಪಾತ್ರ ವಹಿಸಿತು.
ವೆಸ್ಟ್ ಇಂಡೀಸ್ ಪರ ವನ್ಡೌನ್ ಬ್ಯಾಟರ್ ಜಾನ್ಸನ್ ಚಾರ್ಲ್ಸ್ 46 ಎಸೆತಗಳಿಂದ 118 ರನ್ ಸಿಡಿಸಿದರು (10 ಬೌಂಡರಿ, 11 ಸಿಕ್ಸರ್).
ಈ ಪಂದ್ಯ ಒಟ್ಟು 35 ಸಿಕ್ಸರ್ ಹಾಗೂ 46 ಬೌಂಡರಿಗಳಿಂದ ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಿತು.
ಸಂಕ್ಷಿಪ್ತ ಸ್ಕೋರ್
ವೆಸ್ಟ್ ಇಂಡೀಸ್-5 ವಿಕೆಟಿಗೆ 258 (ಚಾರ್ಲ್ಸ್ 118, ಮೇಯರ್ 51, ಶೆಫರ್ಡ್ ಔಟಾಗದೆ 41, ಜಾನ್ಸೆನ್ 52ಕ್ಕೆ 3, ಪಾರ್ನೆಲ್ 43ಕ್ಕೆ 2). ದಕ್ಷಿಣ ಆಫ್ರಿಕಾ-18.5 ಓವರ್ಗಳಲ್ಲಿ 4 ವಿಕೆಟಿಗೆ 259 (ಡಿ ಕಾಕ್ 100, ಹೆಂಡ್ರಿಕ್ಸ್ 68, ಮಾರ್ಕ್ರಮ್ ಔಟಾಗದೆ 38, ಪೊವೆಲ್ 27ಕ್ಕೆ 1). ಪಂದ್ಯಶ್ರೇಷ್ಠ: ಕ್ವಿಂಟನ್ ಡಿ ಕಾಕ್.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.