ODI ಸಮರಕ್ಕೆ ಶ್ರೀಲಂಕಾ ರೆಡಿ: ಏಕದಿನದಲ್ಲೂ ಮೇಲುಗೈ ಭಾರತದ ಗುರಿ

ಪತಿರಣ, ಮಧುಶಂಕ ಹೊರಕ್ಕೆ

Team Udayavani, Aug 2, 2024, 6:45 AM IST

Rohit-SHarma-(2)

ಕೊಲಂಬೊ: ಮೂರು ಪಂದ್ಯಗಳ ಟಿ20 ಸರಣಿ ಕ್ಲೀನ್‌ಸ್ವೀಪ್ ಸಾಧನೆಗೈದ ಭಾರತ ತಂಡವು ಶುಕ್ರವಾರದಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲೂ ಮೇಲುಗೈ ಸಾಧಿಸಲು ಯೋಚಿಸುತ್ತಿದೆ. ಸರಣಿಯ ಮೊದಲ ಪಂದ್ಯ ಇಲ್ಲಿನ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸೂರ್ಯಕುಮಾರ್‌ ಯಾದವ್‌ ನೇತೃತ್ವದ ಭಾರತ ತಂಡ ಟಿ20 ಸರಣಿಯಲ್ಲಿ ಅಮೋಘ ನಿರ್ವಹಣೆ ನೀಡಿತಲ್ಲದೇ 3-0 ಅಂತರದಿಂದ ಗೆದ್ದು ಪ್ರಾಬಲ್ಯ ಮೆರೆದಿತ್ತು. ಇದೀಗ ವಿಶ್ವಕಪ್‌ ವಿಜೇತ ತಂಡದ ನಾಯಕರೂ ಆಗಿರುವ ರೋಹಿತ್‌ ಶರ್ಮ ನೇತೃತ್ವದ ಭಾರತೀಯ ತಂಡ ಏಕದಿನ ಸರಣಿಯೂಲ್ಲ ಸಂಪೂರ್ಣ ಹಿಡಿತ ಸಾಧಿಸಲು ಹಾತೊರೆಯುತ್ತಿದೆಯಲ್ಲದೇ ಗೆಲುವಿನ ಅಭಿಯಾನ ಮುಂದುವರಿಸುವ ಗುರಿ ಇಟ್ಟುಕೊಂಡಿದೆ. ಇದು ಹೊಸ ಕೋಚ್‌ ಗೌತಮ್‌ ಗಂಭೀರ್‌ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಮೊದಲ ಏಕದಿನ ಸರಣಿಯಾಗಿದೆ.

ಖ್ಯಾತ ಆಟಗಾರರಾದ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ, ಕೆಎಲ್‌ ರಾಹುಲ್‌ ಮತ್ತು ಶ್ರೇಯಸ್‌ ಅಯ್ಯರ್‌ ಅವರೆಲ್ಲ ಮರಳಿದ್ದರಿಂದ ತಂಡ ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದೆ. ತಂಡದ ಬೌಲಿಂಗ್‌ ಪಾಳಯವೂ ಉತ್ತಮ ಸ್ಥಿತಿಯಲ್ಲಿದೆ.ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌, ಅರ್ಷದೀಪ್‌ ಸಿಂಗ್‌, ರಿಯಾನ್‌ ಪರಾಗ್‌, ಅಕ್ಷರ್‌ ಪಟೇಲ್‌ ಅವರನ್ನು ಒಳಗೊಂಡ ತಂಡ ಬೌಲಿಂಗ್‌ನಲ್ಲಿಯೂ ಬಲಷ್ಠವಾಗಿದೆ.

ಪತಿರಣ, ಮಧುಶಂಕ ಹೊರಕ್ಕೆ
ಇದೇ ವೇಳೆ ಚರಿತ ಅಸಲಂಕ ನೇತೃತ್ವದ ಶ್ರೀಲಂಕಾ ತಂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಗಾಯಗೊಂಡಿರುವ ವೇಗಿಗಳಾದ ಮತೀಷ ಪತಿರಣ ಮತ್ತು ದಿಲ್ಶನ್‌ ಮಧುಶಂಕ ಹೊರಬಿದ್ದಿರುವುದರಿಂದ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ತಂಡದ ಫೀಲ್ಡಿಂಗ್‌ ಅಭ್ಯಾಸದ ವೇಳೆ ಮಧುಶಂಕ ಅವರ ಎಡ ಕಾಲಿಗೆ ನೋವಾಯಿತು. ಭಾರತ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಚೆಂಡನ್ನು ಹಾರಿ ಹಿಡಿಯುವ ವೇಳೆ ಪತಿರಣ ತೀವ್ರ ಗಾಯೊಂಡರು. ಆ ಪಂದ್ಯದಲ್ಲಿ ಅವರು ಬೌಲಿಂಗ್‌ ಮಾಡಿಲ್ಲ.

ಅವರಿಬ್ಬರ ಅಸುಪಸ್ಥಿತಯಿಂದಾಗಿ ಶ್ರೀಲಂಕಾ ತಂಡ ಮೊಹಮ್ಮದ್‌ ಶಿರಾಜ್‌ ಮತ್ತು ಇಶನ್‌ ಮಾಲಿಂಗ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಇವರಲ್ಲದೇ ಮೀಸಲು ಆಟಗಾರರಾಗಿ ಕುಸಲ್‌ ಜನಿತ್‌, ಪ್ರಮೋದ್‌ ಮಧುಶನ್‌ ಮತ್ತು ಜೆಫ್ರಿ ವಂಡರ್‌ಸೇ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ವಿಕೆಟ್‌ ಹಿಂದುಗಡೆ ಉತ್ತಮ ನಿರ್ವಹಣೆ ನೀಡುತ್ತಿರುವ ಕೆಎಲ್‌ ರಾಹುಲ್‌ ಮತ್ತು ರಿಷಭ್‌ ಪಂತ್‌ ಏಕದಿನ ತಂಡದಲ್ಲಿದ್ದಾರೆ. ಏಕದಿನ ಸರಣಿ ವೇಳೆ ಇವರಿಬ್ಬರಲ್ಲಿ ಯಾರನ್ನು ವಿಕೆಟ್‌ಕೀಪಿಂಗ್‌ ನಿರ್ವಹಣೆಗೆ ಆಯ್ಕೆ ಮಾಡಲು ಗಂಭೀರ್‌ ನೇತೃತ್ವದ ಭಾರತೀಯ ತಂಡ ಚಿಂತನೆ ನಡೆಸುತ್ತಿದೆ. ಪಂತ್‌ ಅವರಿಗೆ ಹೋಲಿಸಿದರೆ ಕೆಎಲ್‌ ರಾಹುಲ್‌ ವಿಕೆಟ್‌ ಹಿಂದುಗಡೆ ಮತ್ತು ಬ್ಯಾಟಿಂಗ್‌ನಲ್ಲೂ ಗಮನಾರ್ಹ ನಿರ್ವಹಣೆ ನೀಡಿದ್ದಾರೆ.

ಸ್ಥಳ: ಕೊಲಂಬೊ
ಆರಂಭ: ಮಧ್ಯಾಹ್ನ 2.30
 ಪ್ರಸಾರ: ಸೋನಿ ಸ್ಪೋರ್ಟ್ಸ್

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.