1st ODI; ಪ್ರೇಮದಾಸ ಸ್ಟೇಡಿಯಂನಲ್ಲಿ ರೋಚಕ ಹಣಾಹಣಿ: ಲಂಕಾ -ಭಾರತ ಪಂದ್ಯ ಟೈ !

ನಾಯಕ ಅಸಲಂಕಾ, ಹಸರಂಗ ಬಿಗಿ ದಾಳಿ ಭಾರತದ ಗೆಲುವನ್ನು ಕಸಿದುಕೊಂಡಿತು

Team Udayavani, Aug 2, 2024, 10:18 PM IST

1-sl

ಕೊಲಂಬೊ : ಇಲ್ಲಿನ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಶುಕ್ರವಾರ(ಆಗಸ್ಟ್ ೨) ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ರೋಚಕ ಹಣಾಹಣಿಗೆ ಸಾಕ್ಷಿಯಾಗಿ ಟೈ ನಲ್ಲಿ ಅಂತ್ಯಗೊಂಡಿತು.

T20 ಸರಣಿಯ ಕೊನೆಯ ಪಂದ್ಯ ರೋಚಕ ಸೂಪರ್ ಓವರ್ ಗೆ ಸಾಕ್ಷಿಯಾದ ಬೆನ್ನಲ್ಲೇ ಎರಡು ತಂಡಗಳ ನಡುವೆ ಬ್ಯಾಕ್ ಟು ಬ್ಯಾಕ್ ಸಮಬಲದ ಆಟ ಕಂಡು ಬಂದಿತು. ಇಂದು ಸೂಪರ್ ಓವರ್ ಇರಲಿಲ್ಲ.

ಶ್ರೀಲಂಕಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ 47.5 ಓವರ್ ಗಳಲ್ಲಿ 230 ರನ್ ಗಳಿಗೆ ಆಲೌಟಾಯಿತು.

ಘಟಾನುಘಟಿ ಬ್ಯಾಟ್ಸ್ ಮ್ಯಾನ್ ಗಳಿದ್ದರು ಸಾಧಾರಣ ಗುರಿ ತಲುಪುವುದು ಭಾರತಕ್ಕೆ ಕಷ್ಟವಾಯಿತು. ನಾಯಕ ಚರಿತ್ ಅಸಲಂಕಾ ಕೊನೆಯ ಕ್ಷಣದಲ್ಲಿ ಎರಡು ಪ್ರಮುಖ ವಿಕೆಟ್ ಕಿತ್ತು ಪಂದ್ಯ ಟೈ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೊನೆಯಲ್ಲಿ ಶಿವಂ ದುಬೆ ಮತ್ತು ಅರ್ಶದೀಪ್ ಸಿಂಗ್ ಅವರನ್ನು ಎಲ್ ಬಿ ಡಬ್ಲ್ಯೂ ಬಲೆಗೆ ಬೀಳಿಸಿ ಭಾರತದ ಗೆಲುವು ತಪ್ಪಿಸಿದರು.

ಅಸಲಂಕಾ 3 ವಿಕೆಟ್ ಕಿತ್ತರೆ , ವನಿಂದು ಹಸರಂಗ ಕೂಡ 3 ವಿಕೆಟ್ ಕಿತ್ತು ಭಾರತ ತಂಡವನ್ನು ಕಟ್ಟಿ ಹಾಕಿದರು. ಬ್ಯಾಟಿಂಗ್ ನಲ್ಲಿ ಮಿಂಚಿದ್ದ ವೆಲ್ಲಲಗೆ (ಔಟಾಗದೆ 67 ರನ್ ) 2 ವಿಕೆಟ್ ಕಿತ್ತರು.

ಭಾರತದ ಪರ ನಾಯಕ ರೋಹಿತ್ ಶರ್ಮ 58, ಗಿಲ್ 16, ಕೊಹ್ಲಿ 24, ವಾಷಿಂಗ್ಟನ್ ಸುಂದರ್ 5, ಶ್ರೇಯಸ್ ಅಯ್ಯರ್ 23, ಕೆ.ಎಲ್. ರಾಹುಲ್ 31, ಅಕ್ಷರ್ ಪಟೇಲ್ 33, ಶಿವಂ ದುಬೆ 25 ರನ್ ಗಳಿಸಿ ಔಟಾದರೆ ಸಿರಾಜ್ 5 ರನ್ ಗಳಿಸಿ ಔಟಾಗದೆ ಉಳಿದರು.

ಲಂಕಾ ಬ್ಯಾಟಿಂಗ್ ನಲ್ಲಿ ಪಾತುಮ್ ನಿಸ್ಸಂಕ 56 ರನ್ , ಕುಸಾಲ್ ಮೆಂಡಿಸ್ ಮತ್ತು ನಾಯಕ ಅಸಲಂಕಾ ತಲಾ 14 ರನ್ ಗಳಿಸಿ ಔಟಾದರು. ಆ ಬಳಿಕ ತಂಡಕ್ಕೆ ಆಧಾರವಾದ ದುನಿತ್ ವೆಲ್ಲಲಗೆ ಔಟಾಗದೆ 65 ಎಸೆತಗಳಲ್ಲಿ 67 ರನ್ ಗಳಿಸಿ ತಂಡ ಇನ್ನೂರರ ಗಡಿ ದಾಟಲು ಕಾರಣವಾದರು. ಕೊನೆಯಲ್ಲಿ ಹಸರಂಗ 24 ಮತ್ತು ಧನಂಜಯ 17 ರನ್ ಕೊಡುಗೆ ಸಲ್ಲಿಸಿದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.