
SLvsNZ: ಲಂಕಾ ಸ್ಪಿನ್ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ ಕಿವೀಸ್ ಗೆ ಸರಣಿ ಸೋಲು
Team Udayavani, Sep 29, 2024, 3:06 PM IST

ಗಾಲೆ: ಶ್ರೀಲಂಕಾದ ಸ್ಪಿನ್ ಹೊಡೆತಕ್ಕೆ ಸಿಲುಕಿದ ನ್ಯೂಜಿಲ್ಯಾಂಡ್ ತಂಡವು ಸರಣಿ ಸೋಲನುಭವಿಸಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು ಇನ್ನಿಂಗ್ಸ್ ಮತ್ತು 154 ರನ್ ಗಳ ಅಧಿಕಾರಯುತ ಗೆಲುವು ಸಾಧಿಸಿತು.
ಮೊದಲ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ ತಂಡವು 5 ವಿಕೆಟ್ ನಷ್ಟಕ್ಕೆ 602 ರನ್ ಮಾಡಿದ್ದರೆ, ನ್ಯೂಜಿಲ್ಯಾಂಡ್ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 88 ರನ್ ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ 360 ರನ್ ಗಳಿಗೆ ಆಲೌಟಾಯಿತು.
ಮಳೆಯಿಂದ ಶನಿವಾರದ ಆಟ ಬೇಗನೇ ಕೊನೆಗೊಂಡಾಗ ದ್ವಿತೀಯ ಇನ್ನಿಂಗ್ಸ್ ನಲ್ಲಿ 5 ವಿಕೆಟಿಗೆ 199 ರನ್ ಗಳಿಸಿತ್ತು. ಅಲ್ಲಿಂದ ಆಟ ಆರಂಭಿಸಿದ ಬ್ಲಂಡಲ್, ಫಿಲಿಪ್ಸ್ ಮತ್ತು ಸ್ಯಾಂಟ್ನರ್ ಆಸರೆಯಾದರು. ಟಾಮ್ ಬ್ಲಂಡೆಲ್ 60 ರನ್ ಗಳಿಸಿದರೆ, ಗ್ಲೆನ್ ಫಿಲಿಪ್ಸ್ 78 ರನ್ ಮತ್ತು ಮಿಚೆಲ್ ಸ್ಯಾಂಟ್ನರ್ 67 ರನ್ ಮಾಡಿದರು. ಅಷ್ಟಾದರೂ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.
ಲಂಕಾ ಪರ ನಿಶಾನ್ ಪೆರಿಸ್ ಆರು ವಿಕೆಟ್ ಕಿತ್ತರೆ, ಪ್ರಭಾತ್ ಜಯಸೂರ್ಯ ಮೂರು ವಿಕೆಟ್ ಪಡೆದರು. ಒಂದು ವಿಕೆಟ್ ಧನಂಜಯ ಡಿಸಿಲ್ವಾ ಪಾಲಾಯಿತು.
ಸರಣಿಯನ್ನು ಶ್ರೀಲಂಕಾ 2-0ಯಿಂದ ವೈಟ್ ವಾಶ್ ಮಾಡಿತು. ಕಮಿಂದು ಮೆಂಡಿಸ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಪ್ರಭಾತ್ ಜಯಸೂರ್ಯ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.