Super-8; ಜೋರ್ಡನ್‌ ಹ್ಯಾಟ್ರಿಕ್‌: ಸೆಮಿಫೈನಲ್‌ಗೆ ಇಂಗ್ಲೆಂಡ್‌


Team Udayavani, Jun 24, 2024, 12:01 AM IST

1-jordan

ಬ್ರಿಜ್‌ಟೌನ್‌: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ 3ನೇ ಹ್ಯಾಟ್ರಿಕ್‌ ದಾಖಲಾಗಿದೆ. ಪ್ಯಾಟ್‌ ಕಮಿನ್ಸ್‌ ಅವರ ಸತತ 2 ಹ್ಯಾಟ್ರಿಕ್‌ ಸಾಧನೆಯ ಬಳಿಕ ಇಂಗ್ಲೆಂಡ್‌ನ‌ ಪೇಸ್‌ ಬೌಲರ್‌ ಕ್ರಿಸ್‌ ಜೋರ್ಡನ್‌ ಈ ಯಾದಿಯನ್ನು ಅಲಂ ಕರಿಸಿದ್ದಾರೆ. ಅಮೆರಿಕ ವಿರುದ್ಧದ ರವಿವಾರದ ಸೂಪರ್‌-8 ಮುಖಾಮುಖಿಯಲ್ಲಿ ಜೋರ್ಡನ್‌ 5 ಎಸೆತಗಳಲ್ಲಿ 4 ವಿಕೆಟ್‌ ಉಡಾಯಿಸಿ ಮೆರೆದರು. ಇಂಗ್ಲೆಂಡ್‌ 10 ವಿಕೆಟ್‌ ಜಯದೊಂದಿಗೆ ಸೆಮಿಫೈನಲ್‌ ಪ್ರವೇಶಿಸಿತು.

ಜೋರ್ಡನ್‌ 19ನೇ ಓವರ್‌ನ ಮೊದಲ ಎಸೆತದಲ್ಲಿ ಕೋರಿ ಆ್ಯಂಡರ್ಸನ್‌ ವಿಕೆಟ್‌ ಉಡಾಯಿಸಿದ ಬಳಿಕ 3ನೇ, 4ನೇ ಹಾಗೂ 5ನೇ ಎಸೆತಗಳಲ್ಲಿ ಅಲಿ ಖಾನ್‌, ನೋಸ್ತುಶ್‌ ಕೆಂಜಿಗೆ ಮತ್ತು ಸೌರಭ್‌ ನೇತ್ರಾವಲ್ಕರ್‌ ಅವರನ್ನು ಔಟ್‌ ಮಾಡಿದರು. ಜೋರ್ಡನ್‌ ಸಾಧನೆ 10 ರನ್ನಿಗೆ 4 ವಿಕೆಟ್‌.

ಅಮೆರಿಕ 18.5 ಓವರ್‌ಗಳಲ್ಲಿ 115ಕ್ಕೆ ಕುಸಿದರೆ, ಇಂಗ್ಲೆಂಡ್‌ 9.4 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 117 ರನ್‌ ಬಾರಿಸಿತು. ಬಟ್ಲರ್‌ 83, ಸಾಲ್ಟ್ 25 ರನ್‌ ಮಾಡಿ ಅಜೇಯರಾಗಿ ಉಳಿದರು. ಹರ್ಮೀತ್‌ ಸಿಂಗ್‌ ಅವರ ಒಂದೇ ಓವರ್‌ನಲ್ಲಿ ಬಟ್ಲರ್‌ ಸತತ 5 ಸಿಕ್ಸರ್‌ ಬಾರಿಸಿ ಅಬ್ಬರಿಸಿದರು.

ವಿಂಡೀಸ್‌ಗೆ ಮಹತ್ವದ ಪಂದ್ಯ

ನಾರ್ತ್‌ ಸೌಂಡ್‌: ಟಿ20 ವಿಶ್ವಕಪ್‌ ಸೂಪರ್‌-8 ಗ್ರೂಪ್‌-2ರ ಅಂಕಪಟ್ಟಿಯ ಅಗ್ರಸ್ಥಾನಿ ದಕ್ಷಿಣ ಆಫ್ರಿಕಾ ತಂಡ, ಸೋಮವಾರ ವೆಸ್ಟ್‌ ಇಂಡೀಸ್‌ ಸವಾಲು ಎದುರಿಸಲಿದೆ. ಸೆಮಿಫೈನಲ್‌ ಪ್ರವೇಶದ ನಿಟ್ಟಿನಲ್ಲಿ ವೆಸ್ಟ್‌ ಇಂಡೀಸ್‌ಗೆ ಇದು ಮಹತ್ವದ ಪಂದ್ಯವಾಗಿದೆ.

ಗ್ರೂಪ್‌-2ರಲ್ಲಿ ಎರಡೂ ಪಂದ್ಯ ಗೆದ್ದಿರುವ ದಕ್ಷಿಣ ಆಫ್ರಿಕಾ ಬಹುತೇಕ ಸೆಮಿಫೈನಲ್‌ ಸನಿಹದಲ್ಲಿದೆ. ಆದರೆ ಎರಡರಲ್ಲಿ ಒಂದು ಪಂದ್ಯ ಗೆದ್ದು 2 ಅಂಕ ಗಳಿಸಿರುವ ವಿಂಡೀಸ್‌ಗೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಹಿಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌ ವಿರುದ್ಧ 7 ರನ್‌ಗಳ ರೋಚಕ ಜಯ ಗಳಿಸಿ ಓಟ ಮುಂದುವರಿಸಿತ್ತು. ವೆಸ್ಟ್‌ ಇಂಡೀಸ್‌ ದುರ್ಬಲ ಅಮೆರಿಕ ವಿರುದ್ಧ 9 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿ ಸೆಮಿಫೈನಲ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿತ್ತು. ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ ಇಂಡೀಸ್‌ 22 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಎರಡೂ ತಂಡಗಳೂ ತಲಾ 11 ಬಾರಿ ಗೆದ್ದಿವೆ.

ಟಾಪ್ ನ್ಯೂಸ್

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.