John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ
Team Udayavani, Jul 7, 2024, 8:12 AM IST
ಟೊರಾಂಟೊ: 16 ಬಾರಿಯ ವಿಶ್ವ ಚಾಂಪಿಯನ್, ಡಬ್ಲ್ಯೂ ಡಬ್ಲ್ಯೂಇ (WWE) ಸೂಪರ್ ಸ್ಟಾರ್ ಜಾನ್ ಸೀನ (John Cena) ಅವರು ಅಚ್ಚರಿಯ ಬೆಳವಣಿಗೆಯಲ್ಲಿ ವಿದಾಯ ಘೋಷಿಸಿದರು. 2025ರಲ್ಲಿ ರಿಂಗ್ ನಲ್ಲಿ ತನ್ನ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಜಾನ್ ಸೀನ ಹೇಳಿದ್ದಾರೆ.
ಟೊರಾಂಟೊದಲ್ಲಿ ನಡೆದ ಮನಿ ಇನ್ ದಿ ಬ್ಯಾಂಕ್ ಲೈವ್ ಕಾರ್ಯಕ್ರಮದಲ್ಲಿ ಅಚ್ಚರಿಯ ಎಂಟ್ರಿ ಕೊಟ್ಟ ಜಾನ್ ಸೀನ ತನ್ನ ನಿರ್ಧಾರ ಪ್ರಟಿಸಿ ಅಭಿಮಾನಿ ವರ್ಗಕ್ಕೆ ಶಾಕ್ ನೀಡಿದರು. ಸೀನ ಧರಿಸಿದ್ದ ಟಿ ಶರ್ಟ್ ನಲ್ಲಿ ‘ ದಿ ಲಾಸ್ಟ್ ಟೈಮ್ ಈಸ್ ನೌ” ಎಂದು ಬರೆದಿತ್ತು.
ಸೆನಾ ಕಂಪನಿಯಿಂದ ನಿವೃತ್ತಿ ಘೋಷಿಸುವ ಮೊದಲು, ಟೊರೊಂಟೊದಲ್ಲಿ ಪ್ರೇಕ್ಷಕರಿಗೆ WWE ಹಾಲ್ ಆಫ್ ಫೇಮರ್ ಟ್ರಿಶ್ ಸ್ಟ್ರಾಟಸ್ ಪರಿಚಯಿಸಿದರು. 16 ಬಾರಿಯ ವಿಶ್ವ ಚಾಂಪಿಯನ್ ಜಾನ್ ಸೀನ ರಸಲ್ ಮೇನಿಯಾ 41 ದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ.
“ಇಂದು ರಾತ್ರಿ, ನಾನು ಡಬ್ಲ್ಯೂ ಡಬ್ಲ್ಯೂಇ ನಿಂದ ನನ್ನ ನಿವೃತ್ತಿಯನ್ನು ಘೋಷಿಸುತ್ತೇನೆ” ಎಂದು ರಿಂಗ್ನೊಳಗೆ ಸೀನಾ ಹೇಳಿದರು.
BREAKING: @JohnCena announces retirement from in-ring competition, stating that #WrestleMania 41 in Las Vegas will be his last. pic.twitter.com/TB6U3QtO1h
— WWE (@WWE) July 7, 2024
ಸೀನ ಅವರು 2024ರ ರಾಯಲ್ ರಂಬಲ್, ಎಲಿಮಿನೇಶನ್ ಚೇಂಬರ್ ಮತ್ತು ರಸಲ್ ಮೇನಿಯಾ 41ರಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
2002ರಲ್ಲಿ ಡಬ್ಲ್ಯೂ ಡಬ್ಲ್ಯೂಇ ಕಂಪನಿಗೆ ಸೇರಿದ ಜಾನ್ ಸೀನ ಶೀಘ್ರದಲ್ಲಿ ಜನ ಮೆಚ್ಚುವ ಪಟುವಾಗಿ ಬೆಳೆದವರು. 13 ಬಾರಿ ಡಬ್ಲ್ಯೂ ಡಬ್ಲ್ಯೂಇ ಟೈಟಲ್, ಮೂರು ಬಾರಿ ಹೆವಿವೈಟ್ ಚಾಂಪಿಯನ್ ಶಿಪ್ ಮತ್ತು ಎರಡು ಬಾರಿ ರಾಯಲ್ ರಂಬಲ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಹಾಲಿವುಡ್ ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾರಣ ಡಬ್ಲ್ಯೂ ಡಬ್ಲ್ಯೂಇ ರಿಂಗ್ ನಲ್ಲಿ ಅಪರೂಪವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.