T20 Cricket: ಕುಸಿತದಿಂದ ಪಾರಾದುದೇ ದೊಡ್ಡ ಸಾಧನೆ: ಸೂರ್ಯಕುಮಾರ್‌


Team Udayavani, Jul 31, 2024, 10:57 PM IST

T20 Cricket: ಕುಸಿತದಿಂದ ಪಾರಾದುದೇ ದೊಡ್ಡ ಸಾಧನೆ: ಸೂರ್ಯಕುಮಾರ್‌

ಪಲ್ಲೆಕೆಲೆ: ಇನ್ನೇನು ಸೋತೇ ಬಿಟ್ಟಿತು ಎಂಬ ಸ್ಥಿತಿಯಲ್ಲಿದ್ದ ಭಾರತ, ಮಂಗಳವಾರದ ಅಂತಿಮ ಟಿ20 ಪಂದ್ಯದಲ್ಲಿ ಶ್ರೀಲಂಕಾವನ್ನು ಸೂಪರ್‌ ಓವರ್‌ನಲ್ಲಿ ಮಣಿಸುವ ಮೂಲಕ ಅಸಾಮಾನ್ಯ ಸಾಹಸಗೈದದ್ದು, ಚಾಂಪಿಯನ್ನರ ಆಟವನ್ನಾಡಿ ಸರಣಿಯನ್ನು 3-0 ಅಂತರದಿಂದ ಕ್ಲೀನ್‌ಸ್ವೀಪ್ ಆಗಿ ವಶಪಡಿಸಿಕೊಂಡದ್ದು ಈಗ ಇತಿಹಾಸ.

ಈ ಸಂದರ್ಭದಲ್ಲಿ ಮಾತಾಡಿದ ನಾಯಕ ಸೂರ್ಯಕುಮಾರ್‌ ಯಾದವ್‌, ಕೊನೆಯ ಎರಡು ಓವರ್‌ಗಳಿಗಿಂತ 30ಕ್ಕೆ 4 ವಿಕೆಟ್‌, 48ಕ್ಕೆ 5 ವಿಕೆಟ್‌ ಕಳೆದುಕೊಂಡ ಸ್ಥಿತಿಯಲ್ಲಿದ್ದ ಭಾರತ 137ರ ತನಕ ಸಾಗಿದ್ದೇ ದೊಡ್ಡ ಸಾಧನೆ ಎಂದಿದ್ದಾರೆ.

“ಈ ಪಿಚ್‌ನಲ್ಲಿ 140 ರನ್‌ ಮಾಡಿದರೆ ಪಂದ್ಯ ಉಳಿಸಿಕೊಳ್ಳಬಹುದೆಂಬ ನಿರೀಕ್ಷೆ ಇತ್ತು. 220-220 ರನ್‌ ಮಾಡಿ ಗೆಲ್ಲುವುದಕ್ಕಿಂತ ಹೀಗೆ ಕುಸಿತದಿಂದ ಚೇತರಿಸಿಕೊಂಡು ಸಾಮಾನ್ಯ ಮೊತ್ತ ಗಳಿಸಿ ಜಯ ಸಾಧಿಸಿದಾಗ ಲಭಿಸುವ ಸಂತೋಷ ಹೆಚ್ಚು’ ಎಂದರು.

ಗೆಲುವು ಕಳೆದುಕೊಂಡ ಲಂಕಾ
ಭಾರತ 9 ವಿಕೆಟಿಗೆ 137 ರನ್‌ ಗಳಿಸಿದರೆ, ಶ್ರೀಲಂಕಾ 8 ವಿಕೆಟಿಗೆ 137 ರನ್‌ ಮಾಡಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತೆಂದೇ ಹೇಳಬಹುದು. 18 ಓವರ್‌ ಮುಕ್ತಾಯಕ್ಕೆ 4 ವಿಕೆಟಿಗೆ 129 ರನ್‌ ಮಾಡಿದ್ದ ಶ್ರೀಲಂಕಾ, ಅಂತಿಮ 2 ಓವರ್‌ಗಳಲ್ಲಿ 6 ವಿಕೆಟ್‌ಗಳಿಂದ 9 ರನ್‌ ಗಳಿಸದೇ ಹೋಯಿತು!

ಇಲ್ಲಿ ಭಾರತ ಬೌಲಿಂಗ್‌ ಟ್ರಿಕ್ಸ್‌ ಮಾಡಿತು. ಅಲ್ಲಿಯ ತನಕ ಚೆಂಡನ್ನೇ ಕೈಗೆತ್ತಿಕೊಳ್ಳದಿದ್ದ ರಿಂಕು ಸಿಂಗ್‌ 19ನೇ ಓವರ್‌ ಎಸೆಯಲು ಬಂದರು. ಕೇವಲ 3 ರನ್‌ ನೀಡಿ ಇಬ್ಬರನ್ನು ಔಟ್‌ ಮಾಡಿದರು. ಅಂತಿಮ ಓವರ್‌ ಮೊಹಮ್ಮದ್‌ ಸಿರಾಜ್‌ ಪಾಲಾಗಬಹುದೆಂಬುದು ಎಲ್ಲರ ನಿರೀಕ್ಷೆ ಆಗಿತ್ತು. ಅವರು 3 ಓವರ್‌ಗಳಿಂದ ಕೇವಲ 11 ರನ್‌ ನೀಡಿ ನಿಯಂತ್ರಣ ಸಾಧಿಸಿದ್ದರು. ಆದರೆ ಸ್ವತಃ ಸೂರ್ಯಕುಮಾರ್‌ ಯಾದವ್‌ ಬೌಲಿಂಗ್‌ಗೆ

ಇಳಿಯುವ ಮೂಲಕ ಎಲ್ಲರ ಹುಬ್ಬೇರಿಸಿದರು. ಕೇವಲ 5 ರನ್‌ ನೀಡಿ, 2 ವಿಕೆಟ್‌ ಕಬಳಿಸಿ ಪಂದ್ಯವನ್ನು ಸೂಪರ್‌ ಓವರ್‌ಗೆ ಕೊಂಡೊಯ್ದರು!

ಸೂಪರ್‌ ಓವರ್‌…
ಸೂಪರ್‌ ಓವರ್‌ನಲ್ಲೂ ಅಚ್ಚರಿ ಕಾದಿತ್ತು. ಚೆಂಡನ್ನು ವಾಷಿಂಗ್ಟನ್‌ ಸುಂದರ್‌ಗೆ ಹಸ್ತಾಂತರಿಸಲಾಯಿತು. ಈ ನಡೆ ಕೂಡ ಸೂಪರ್‌ ಹಿಟ್‌ ಆಯಿತು. 3 ಎಸೆತಗಳಲ್ಲಿ 2 ರನ್ನಿಗೆ ಲಂಕೆಯ ಎರಡೂ ವಿಕೆಟ್‌ ಬಿತ್ತು. ಬಳಿಕ ಸೂರ್ಯಕುಮಾರ್‌ ಮೊದಲ ಎಸೆತವನ್ನೇ ಬೌಂಡರಿಗೆ ಬಡಿದಟ್ಟಿ ಭಾರತದ ಗೆಲುವು ಸಾರಿದರು!
ಶುಕ್ರವಾರ ಏಕದಿನ ಸರಣಿ ಆರಂಭವಾಗಲಿದೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.