![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 26, 2022, 10:47 PM IST
ಹೈದರಾಬಾದ್: ಮೂರನೇ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಸೂರ್ಯಕುಮಾರ್ ಯಾದವ್ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರನ್ನು ಹೊಗಳಿದವರ ಸಾಲಿನಲ್ಲಿ ಆಸ್ಟ್ರೇಲಿಯದ ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ ಕೂಡ ಸೇರಿದ್ದಾರೆಂಬುದು ವಿಶೇಷ.
“ಸೂರ್ಯಕುಮಾರ್ ಯಾದವ್ ಭಾರತದ ಹೊಸ ಬ್ಯಾಟಿಂಗ್ ಶಕ್ತಿಯಾಗಿ ಮೂಡಿದ್ದಾರೆ. ಮುಂಬರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಅವರು ಅತ್ಯಂತ ಅಪಾಯಕಾರಿಯಾಗಿ ಗೋಚರಿಸುವುದರಲ್ಲಿ ಅನುಮಾನವಿಲ್ಲ’ ಎಂಬುದಾಗಿ ಮೆಕ್ಡೊನಾಲ್ಡ್ ಹೇಳಿದರು.
“ಭಾರತೀಯರ ಬ್ಯಾಟಿಂಗ್ ಕೌಶಲದಿಂದಾಗಿ ಆಸ್ಟ್ರೇಲಿಯದ ಬೌಲಿಂಗ್ ತೀರಾ ಸಾಮಾನ್ಯವಾಗಿ ಕಂಡಿತು. ಆದರೆ ಮಿಚೆಲ್ ಸ್ಟಾರ್ಕ್ ಮರಳಿದ ಬಳಿಕ ನಮ್ಮ ಬೌಲಿಂಗ್ ಆಕ್ರಮಣ ಲಯ ಕಂಡುಕೊಳ್ಳಲಿದೆ’ ಎಂದರು.
“ರವೀಂದ್ರ ಜಡೇಜ ಗೈರಿನಿಂದ ಭಾರತ ತಂಡ ದುರ್ಬಲಗೊಳ್ಳಿಲಿದೆ ಎಂದು ನಾವು ಭಾವಿಸಿದ್ದೆವು. ಆದರೆ ಅಕ್ಷರ್ ಪಟೇಲ್ ಸಮರ್ಥವಾಗಿ ಈ ಸ್ಥಾನ ತುಂಬುವ ಸೂಚನೆ ನೀಡಿದ್ದಾರೆ. ಸರಣಿಯಲ್ಲಿ ಸ್ಥಿರವಾದ ಬೌಲಿಂಗ್ ತೋರ್ಪಡಿಸಿದ್ದು ಅಕ್ಷರ್ ಮಾತ್ರ’ ಎಂದರು.
“ವಾರ್ನರ್ ಗೈರಲ್ಲಿ ಇನ್ನಿಂಗ್ಸ್ ಆರಂಭಿಸುವ ಸವಾಲು ಸ್ವೀಕರಿಸಿದ ಕ್ಯಾಮರಾನ್ ಗ್ರೀನ್ ಈ ಸರಣಿಯ ಆಕರ್ಷಣೆ ಎನಿಸಿದರು’ ಎಂಬುದಾಗಿ ಮೆಕ್ಡೊನಾಲ್ಡ್ ಹೇಳಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.