ಸ್ವಿಸ್‌ ಬ್ಯಾಡ್ಮಿಂಟನ್‌: ಸಿಂಧು ಆಘಾತಕಾರಿ ನಿರ್ಗಮನ

ಪುರುಷರ ಡಬಲ್ಸ್‌: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ರೆಡ್ಡಿ ಕ್ವಾರ್ಟರ್‌ ಫೈನಲ್‌ಗೆ

Team Udayavani, Mar 25, 2023, 6:57 AM IST

pv sindhu

ಬಾಸೆಲ್‌ (ಸ್ವಿಜರ್ಲೆಂಡ್‌): ಪಿ.ವಿ.ಸಿಂಧು ಅವರ ಸೋಲಿನ ಅಭಿಯಾನ ಸ್ವಿಸ್‌ ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲೂ ಮುಂದುವರಿದಿದೆ. ಹಾಲಿ ಚಾಂಪಿಯನ್‌ ಆಗಿರುವ ಅವರಿಲ್ಲಿ ದ್ವಿತೀಯ ಸುತ್ತಿನಲ್ಲೇ ಎಡವಿದ್ದಾರೆ. ಆದರೆ ಪುರುಷರ ಡಬಲ್ಸ್‌ನಲ್ಲಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶ್ವದ 9ನೇ ರ್‍ಯಾಂಕಿಂಗ್‌ ಆಟಗಾರ್ತಿಯಾಗಿರುವ ಪಿ.ವಿ.ಸಿಂಧು, ಇಂಡೋನೇಷ್ಯಾದ ಶ್ರೇಯಾಂಕರಹಿತ ಶಟ್ಲರ್‌ ಪುತ್ರಿ ಕುಸುಮಾ ವರ್ದನಿ ಎದುರು 15-21, 21-12, 18-21 ಅಂತರದ ಆಘಾತಕಾರಿ ಸೋಲುಂಡರು. 38ನೇ ರ್‍ಯಾಂಕಿಂಗ್‌ನ ಕುಸುಮಾ ವರ್ದನಿ ಮತ್ತು ಪಿ.ವಿ.ಸಿಂಧು ನಡುವೆ ನಡೆದ ಮೊದಲ ಅಂತಾರಾಷ್ಟ್ರೀಯ ಮುಖಾಮುಖೀ ಇದಾಗಿತ್ತು.

ಪುರುಷರ ಡಬಲ್ಸ್‌ನಲ್ಲಿ ದ್ವಿತೀಯ ಶ್ರೇಯಾಂಕದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಭಾರೀ ಹೋರಾಟ ನಡೆಸಿ ತೈವಾನ್‌ನ ಫಾಂಗ್‌ ಚಿ ಲೀ-ಫಾಂಗ್‌ ಜೆನ್‌ ಲೀ ಅವರನ್ನು 12-21, 21-17, 28-26 ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾದರು. ವಿಶ್ವದ 6ನೇ ರ್‍ಯಾಂಕಿಂಗ್‌ನ ಭಾರತೀಯ ಜೋಡಿಯಿನ್ನು ಡೆನ್ಮಾರ್ಕ್‌ನ ಜೆಪ್‌ ಬೇ-ಲಾಸ್ಸೆ ಮಲ್ಹೆದ್‌ ಅವರನ್ನು ಎದುರಿಸಲಿದೆ.

ಪ್ರಣಯ್‌, ಶ್ರೀಕಾಂತ್‌ಗೆ ಸೋಲು: ಸಿಂಧುಗಿಂತ ಮೊದಲು ವಿಶ್ವದ 9ನೇ ರ್‍ಯಾಂಕಿಂಗ್‌ ಹಾಗೂ 5ನೇ ಶ್ರೇಯಾಂಕದ ಭಾರತೀಯ ಆಟಗಾರ ಎಚ್‌.ಎಸ್‌.ಪ್ರಣಯ್‌ ಕೂಡ ದ್ವಿತೀಯಸುತ್ತಿನ ಆಘಾತಕ್ಕೆ ಸಿಲುಕಿದ್ದರು. ಅವರು ಫ್ರಾನ್ಸ್‌ನ ಶ್ರೇಯಾಂಕರಹಿತ ಆಟಗಾರ ಕ್ರಿಸ್ಟೊ ಪೊಪೋವ್‌ ವಿರುದ್ಧ 8-21, 8-21 ಅಂತರದಿಂದ ಮುಗ್ಗರಿಸಿದ್ದರು. ಹಾಗೆಯೇ ಕೆ.ಶ್ರೀಕಾಂತ್‌ ಕೂಡ ಹಾಂಕಾಂಗ್‌ನ ಚುಕ್‌ ವ್ಯೂ ಲೀ ವಿರುದ್ಧ 20-22, 21-17 ಅಂತರದಿಂದ, ರಾಷ್ಟ್ರೀಯ ಚಾಂಪಿಯನ್‌ ಮಿಥುನ್‌ ಮಂಜುನಾಥ್‌ ಚೀನಾ ತೈಪೆಯ ಚಿಯ ಹಾವೊ ಲೀ ವಿರುದ್ಧ 19-21, 10-21 ಅಂತರದಿಂದ ಎಡವಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.