ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಮುಂಬಯಿಗೆ ಶರಣಾದ ಕರ್ನಾಟಕ


Team Udayavani, Nov 26, 2019, 5:20 AM IST

SURYAKUMAR-YADAV

ಸೂರತ್‌: ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಕೂಟದ ಕೊನೆಯ ಸೂಪರ್‌ ಲೀಗ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ 7 ವಿಕೆಟ್‌ಗಳಿಂದ ಮುಂಬಯಿಗೆ ಶರಣಾಗಿದೆ. ಸೂರ್ಯಕುಮಾರ್‌ ಯಾದವ್‌ ಅವರ ಆರ್ಭಟಕ್ಕೆ ಕಡಿವಾಣ ಹಾಕಲು ವಿಫ‌ಲವಾದದ್ದು ಕರ್ನಾಟಕಕ್ಕೆ ಹಿನ್ನಡೆಯಾಗಿ ಪರಿಣಮಿಸಿತು.

“ಬಿ’ ವಿಭಾಗದ ಸೂಪರ್‌ ಲೀಗ್‌ನಲ್ಲಿ ಹ್ಯಾಟ್ರಿಕ್‌ ಜಯ ಸಾಧಿಸಿ ಮೆರೆಯುತ್ತಿದ್ದ ಕರ್ನಾಟಕ, ಕೂಟದಲ್ಲಿ ಸತತ 7 ಪಂದ್ಯಗಳನ್ನು ಗೆದ್ದು ಪ್ರಭುತ್ವ ಸಾಧಿಸಿತ್ತು. ಆದರೆ ಸೋಮವಾರದ ಪಂದ್ಯದಲ್ಲಿ ಮುಂಬಯಿ ಎದುರು ಪಾಂಡೆ ಪಡೆಯ ಆಟ ನಡೆಯಲಿಲ್ಲ.

ಕರ್ನಾಟಕ ಸೂಪರ್‌ ಲೀಗ್‌ ಹಂತದ ಎಲ್ಲ 4 ಪಂದ್ಯಗಳನ್ನು ಮುಗಿಸಿದ್ದು, 3 ಗೆಲುವು ಹಾಗೂ ಒಂದು ಸೋಲಿನೊಂದಿಗೆ ಒಟ್ಟು 12 ಅಂಕಗಳೊಂದಿಗೆ ಗುಂಪಿನ ಅಗ್ರಸ್ಥಾನಿಯಾಗಿದೆ. ಈ ಗುಂಪಿನಿಂದ ಅಗ್ರ 2 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದ್ದು, 3 ತಂಡಗಳು ರೇಸ್‌ನಲ್ಲಿವೆ. ಸದ್ಯ ಕರ್ನಾಟಕ ಸುರಕ್ಷಿತವಾಗಿದೆ.

ಮುಂಬಯಿ ಭರ್ಜರಿ ಚೇಸಿಂಗ್‌
ಮೊದಲು ಬ್ಯಾಟಿಂಗ್‌ಗೆ ಇಳಿದ ಕರ್ನಾಟಕ ತಂಡ ಆರಂಭಿಕ ಬ್ಯಾಟ್ಸ್‌ಮನ್‌ ದೇವದತ್ತ ಪಡಿಕ್ಕಲ್‌ (57) ಮತ್ತು ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್‌ ರೋಹನ್‌ ಕದಮ್‌ (71) ಅವರ ಅರ್ಧ ಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 171 ರನ್‌ ಗಳಿಸಿತು. ಈ ಗುರಿ ಬೆನ್ನಟ್ಟಿದ ಮುಂಬಯಿ ತಂಡ ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ ಬ್ಯಾಟಿಂಗ್‌ (ಅಜೇಯ 94 ರನ್‌) ಹಾಗೂ ಆರಂಭಕಾರ ಪೃಥ್ವಿ ಶಾ (30) ಅವರ ದಿಟ್ಟ ಹೋರಾಟ ನೆರವಿನಿಂದ 19 ಓವರ್‌ಗಳಲ್ಲಿ ಮೂರೇ ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿ ವಿಜಯದ ನಗು ಹೊಮ್ಮಿಸಿತು.

ಸೂರ್ಯಕುಮಾರ್‌ ಯಾದವ್‌ 53 ಎಸೆತಗಳಿಂದ 11 ಬೌಂಡರಿ, 4 ಸಿಕ್ಸರ್‌ ನೆರವಿನಿಂದ ಅಜೇಯ 94 ರನ್‌ ಸಿಡಿಸಿದರು. ಇವರೊಂದಿಗೆ ಶಿವಂ ದುಬೆ 22 ರನ್‌ ಮಾಡಿ ಔಟಾಗದೆ ಉಳಿದರು (18 ಎಸೆತ, 2 ಸಿಕ್ಸರ್‌). ಈ ಜೋಡಿಯಿಂದ 4ನೇ ವಿಕೆಟಿಗೆ 8.1 ಓವರ್‌ಗಳಿಂದ 84 ರನ್‌ ಹರಿದು ಬಂತು.

ಕರ್ನಾಟಕ ಕೆ.ಎಲ್‌. ರಾಹುಲ್‌ ಅವರನ್ನು ಶೂನ್ಯಕ್ಕೆ ಕಳೆದುಕೊಂಡಿತು. ನಾಯಕ ಮನೀಷ್‌ ಪಾಂಡೆ (4), ಕರುಣ್‌ ನಾಯರ್‌ (8) ಕೂಡ ಅಗ್ಗಕ್ಕೆ ಔಟಾದರು. 19 ರನ್ನಿಗೆ 3 ವಿಕೆಟ್‌ ಬಿದ್ದಾಗ ಜತೆಗೂಡಿದ ಪಡಿಕ್ಕಲ್‌-ಕದಮ್‌ 80 ರನ್‌ ಪೇರಿಸಿದರು.

ಸಂಕ್ಷಿಪ್ತ ಸ್ಕೋರ್‌
ಕರ್ನಾಟಕ-20 ಓವರ್‌ಗಳಲ್ಲಿ 6 ವಿಕೆಟಿಗೆ 171 (ಕದಮ್‌ 71, ಪಡಿಕ್ಕಲ್‌ 57, ಠಾಕೂರ್‌ 29ಕ್ಕೆ 2, ದುಬೆ 39ಕ್ಕೆ 2). ಮುಂಬಯಿ-19 ಓವರ್‌ಗಳಲ್ಲಿ 3 ವಿಕೆಟಿಗೆ 174 (ಸೂರ್ಯಕುಮಾರ್‌ ಔಟಾಗದೆ 94, ಶಾ 30, ದುಬೆ ಔಟಾಗದೆ 22).

ಸೆಮಿಫೈನಲ್‌ಗೆ ಪೈಪೋಟಿ
ಸೋಮವಾರದ ಫ‌ಲಿತಾಂಶದ ಬಳಿಕ “ಬಿ’ ವಿಭಾಗದಲ್ಲಿ ಜಾರ್ಖಂಡ್‌ ಹೊರತುಪಡಿಸಿ ಉಳಿದ ತಂಡಗಳು ಸೆಮಿಫೈನಲ್‌ ರೇಸ್‌ನಲ್ಲಿ ಉಳಿದುಕೊಂಡಿರುವ ಚಿತ್ರಣ ಲಭಿಸಿದೆ.
ಕರ್ನಾಟಕದೊಂದಿಗೆ ಪೈಪೋಟಿಯಲ್ಲಿರುವ ತಂಡಗಳೆಂದರೆ ತಮಿಳುನಾಡು (3 ಪಂದ್ಯ, 8 ಅಂಕ) ಮತ್ತು ಮುಂಬಯಿ (3 ಪಂದ್ಯ, 8 ಅಂಕ). ರನ್‌ರೇಟ್‌ನಲ್ಲಿ ಕರ್ನಾಟಕವೇ ಮುಂದಿದೆ (+0.762). ತಮಿಳುನಾಡು (+0.413) ಮತ್ತು ಮುಂಬಯಿ (-0.589) ಅನಂತರದ ಸ್ಥಾನದಲ್ಲಿವೆ. ಮುಂಬಯಿಯನ್ನು ಮಣಿಸಿದ್ದೇ ಆದಲ್ಲಿ ಕರ್ನಾಟಕ ಸೋಮವಾರವೇ ಸೆಮಿಫೈನಲ್‌ಗೆ ಲಗ್ಗೆ ಇರಿಸುತ್ತಿತ್ತು.

ದಿನದ ಇನ್ನೊಂದು ಪಂದ್ಯದಲ್ಲಿ ತಮಿಳುನಾಡು 4 ವಿಕೆಟ್‌ಗಳಿಂದ ಪಂಜಾಬ್‌ಗ ಸೋಲುಣಿಸಿತು. ತಮಿಳುನಾಡು ಬುಧವಾರದ ಕೊನೆಯ ಲೀಗ್‌ ಪಂದ್ಯದಲ್ಲಿ ಜಾರ್ಖಂಡ್‌ ವಿರುದ್ಧ ಆಡಲಿದೆ. ಮುಂಬಯಿ ತಂಡ ಪಂಜಾಬನ್ನು ಎದುರಿಸಲಿದೆ. ಪಂಜಾಬ್‌ 4 ಅಂಕ ಹೊಂದಿದ್ದು, +1.426ರಷ್ಟು ಅತ್ಯುತ್ತಮ ರನ್‌ರೇಟ್‌ ಹೊಂದಿದೆ. ಮುಂಬಯಿ ಎದುರು ಬೃಹತ್‌ ಗೆಲುವು ಸಾಧಿಸಿದರೆ ಪಂಜಾಬ್‌ಗೂ ಅವಕಾಶವಿದೆ. ಆದರೆ ತಮಿಳುನಾಡು ವಿರುದ್ಧ ಜಾರ್ಖಂಡ್‌ ಗೆಲ್ಲಬೇಕು!

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.