T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ


Team Udayavani, Jul 7, 2024, 8:01 PM IST

1-wqwewewq

ಹರಾರೆ : ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ T20 ಸರಣಿಯ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಸೋಲಿನ ಆಘಾತಕ್ಕೆ ಸಿಲುಕಿದ್ದ ಭಾರತ ತಂಡ ಭಾನುವಾರ ಹಳಿಗೆ ಮರಳಿ ಭರ್ಜರಿ ಜಯ ತನ್ನದಾಗಿಸಿಕೊಂಡಿದೆ. ಈಗ 5 ಪಂದ್ಯಗಳ ಸರಣಿ 1-1 ರಿಂದ ಸಮಬಲವಾಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ಅಭಿಷೇಕ್ ಶರ್ಮ ಅವರ ಶತಕ ಮತ್ತು ರುತುರಾಜ್ ಗಾಯಕ್ವಾಡ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಜಿಂಬಾಬ್ವೆಗೆ 235 ರನ್ ಗಳ ಭರ್ಜರಿ ಸವಾಲು ಮುಂದಿಟ್ಟಿತು ಗುರಿ ಬೆನ್ನಟ್ಟಿದ ಆತಿಥೇಯ ತಂಡ 18.4 ಓವರ್ ಗಳಲ್ಲಿ 134 ಕ್ಕೆ ಆಲೌಟಾಯಿತು. ಪ್ರಾಬಲ್ಯ ಸಾಧಿಸಿ 100 ರನ್ ಗಳ ಅಮೋಘ ಜಯವನ್ನು ಕಂಡ ಯುವ ಭಾರತ ತಂಡ ಮೊದಲ ಪಂದ್ಯದ ಸೋಲಿನ ಕಹಿ ನೆನಪು ಮರೆಯಿತು.

ವೆಸ್ಲಿ ಮಾಧೆವೆರ್ 43 ರನ್, ಬ್ರಿಯಾನ್ ಬೆನೆಟ್ 26, ಜೋನಾಥನ್ ಕ್ಯಾಂಪ್ಬೆಲ್ 10, ಲ್ಯೂಕ್ ಜೊಂಗ್ವೆ 33 ರನ್ ಗಳಿಸಿದರು. ಉಳಿದ ಆಟಗಾರರು ಒಂದಂಕಿ ದಾಟಲಿಲ್ಲ. ಆರಂಭಿಕ ಆಟಗಾರ ಕೈಯಾ 4 ರನ್ ಗಳಿಸಿದ್ದ ವೇಳೆ ಮುಖೇಶ್ ಕುಮಾರ್ ಕ್ಲೀನ್ ಬೌಲ್ಡ್ ಮಾಡಿದರು. ನಾಯಕ ಸಿಕಂದರ್ ರಝ 4 ರನ್ ಗೆ ಪೆವಿಲಿಯನ್ ಗೆ ಮರಳಿದರು.

ಭಾರತದ ಪರ ಬಿಗಿ ದಾಳಿ ನಡೆಸಿದ ಆವೇಶ್ ಖಾನ್ 3 ವಿಕೆಟ್ ಕಿತ್ತರು. ಮುಖೇಶ್ ಕುಮಾರ್ ದುಬಾರಿ ಎನಿಸಿದರೂ 3 ವಿಕೆಟ್ ಕಬಳಿಸಿದರು. ರವಿ ಬಿಷ್ಣೋಯಿ 2 ವಿಕೆಟ್ ಮತ್ತು ವಾಷಿಂಗ್ಟನ್ ಸುಂದರ್ ಒಂದು ವಿಕೆಟ್ ಕಿತ್ತರು.

ಅಭಿಷೇಕ್ ಶತಕ; ಅಮೋಘ ಆಟ

ಚೊಚ್ಚಲ ಪಂದ್ಯದಲ್ಲಿ ವಿಫಲರಾಗಿದ್ದ ಆರಂಭಿಕ ಆಟಗಾರ ಅಭಿಷೇಕ್ ಶರ್ಮ ಇಂದು ಅವಕಾಶವನ್ನು ಬಾಚಿಕೊಂಡು ಅಮೋಘ ಆಟವಾಡಿ ಭರ್ಜರಿ ಶತಕ ಸಿಡಿಸಿದರು. ಜಿಂಬಾಬ್ವೆ ಬೌಲರ್ ಗಳನ್ನು ದಂಡಿಸಿದ ಶರ್ಮ 100 ರನ್ ಗಳಿಸಿ ಔಟಾದರು.47 ಎಸೆತಗಳಲ್ಲಿ ಶತಕ ಗಳಿಸಿ ಔಟಾದರು.7ಬೌಂಡರಿ ಮತ್ತು 8 ಆಕರ್ಷಕ ಸಿಕ್ಸರ್ ಗಳನ್ನು ಸಿಡಿಸಿದರು.

ತಂಡ 10 ರನ್ ಗಳಿಸುವಷ್ಟರಲ್ಲೇ 2 ರನ್ ಗಳಿಸಿದ್ದ ನಾಯಕ ಗಿಲ್ ಔಟಾದರು. ಶರ್ಮ ಅವರಿಗೆ ಸಾಥ್ ನೀಡಿದ ರುತುರಾಜ್ ಗಾಯಕ್ವಾಡ್ ಔಟಾಗದೆ 77(47 ಎಸೆತ) ರನ್ ಸಿಡಿಸಿದರು. ಅಬ್ಬರಿಸಿದ ರಿಂಕ್ ಸಿಂಗ್ ಕೂಡ 48(22ಎಸೆತ)ಗಳಿಸಿ ಔಟಾಗದೆ ಉಳಿದರು. ಭರ್ಜರಿ 5 ಸಿಕ್ಸರ್ ಗಳನ್ನು ಸಿಡಿಸಿದರು. ಮುಜರಬಾನಿ ಮತ್ತು ವೆಲ್ಲಿಂಗ್ಟನ್ ಮಸಕಡ್ಜ ತಲಾ ಒಂದು ವಿಕೆಟ್ ಪಡೆದರು.

ಭಾರತದಿಂದ 2 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿರುವುದು ಜಿಂಬಾಬ್ವೆ ವಿರುದ್ಧ 2018 ರಲ್ಲಿ ಆಸ್ಟ್ರೇಲಿಯ ಗಳಿಸಿದ 229 ಕ್ಕೆ 2 ಅನ್ನು ಮೀರಿದ ಗರಿಷ್ಠ ಮೊತ್ತವಾಗಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.