T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


Team Udayavani, Jun 30, 2024, 8:38 AM IST

T20 WC; This is my luck…..: Coach Rahul Dravid

ಬಾರ್ಬಡೋಸ್: ಹಲವು ಕಾಯುವಿಕೆಯ ಬಳಿಕ ಅಂದರೆ ಸುಮಾರು 17 ವರ್ಷಗಳ ಬಳಿಕ ಭಾರತವು ಟಿ20 ವಿಶ್ವಕಪ್ ಜಯಿಸಿದೆ. ಬ್ರಿಜ್ ಟೌನ್ ನ ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ರೋಹಿತ್ ಬಳಗವು ದಕ್ಷಿಣ ಆಫ್ರಿಕಾ ತಂಡವನ್ನು ಏಳು ರನ್ ಗಳ ಅಂತರದಿಂದ ಸೋಲಿಸಿತು. ಈ ಮೂಲಕ ಕೋಟಿ ಕೋಟಿ ಭಾರತೀಯರು ಕಾಯುತ್ತಿದ್ದ ಘಳಿಗೆಗೆ ಕೆರಿಬಿಯನ್ ದ್ವೀಪ ಸಾಕ್ಷಿಯಾಯಿತು.

ಕಳೆದ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್, ಏಕದಿನ ಫೈನಲ್ ಗೆ, ಇದೀಗ ಟಿ20 ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಭಾರತೀಯ ತಂಡದ ಪಯಣ ಕೂಡಾ ಈ ಗೆಲುವಿನೊಂದಿಗೆ ಅಂತ್ಯವಾಗಿದೆ. ಟಿ20 ವಿಶ್ವಕಪ್ ಅವರ ಕೊನೆಯ ಕೂಟವಾಗಿತ್ತು.

ಟಿ20 ವಿಶ್ವಕಪ್ 2024 ಗೆದ್ದ ಬಳಿಕ ಮಾತನಾಡಿದ ದ್ರಾವಿಡ್, “ಒಬ್ಬ ಆಟಗಾರನಾಗಿ, ನಾನು ಟ್ರೋಫಿ ಗೆಲ್ಲುವ ಅದೃಷ್ಟವನ್ನು ಹೊಂದಿರಲಿಲ್ಲ ಆದರೆ ನಾನು ನನ್ನ ಅತ್ಯುತ್ತಮವಾದುದನ್ನು ನೀಡಿದ್ದೆ. ಕೋಚ್ ಆಗಿ, ತಂಡ ಈ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗುವಂತೆ ಮಾಡಿದ್ದು ನನ್ನ ಅದೃಷ್ಟ ಇದು ಉತ್ತಮ ಪ್ರಯಾಣವಾಗಿದೆ … ” ಎಂದಿದ್ದಾರೆ.

“ಇದು 2 ವರ್ಷಗಳ ಪ್ರಯಾಣ, ಕೇವಲ ಈ ಟಿ20 ವಿಶ್ವಕಪ್ ನದ್ದು ಅಲ್ಲ. ಈ ತಂಡದ ನಿರ್ಮಾಣ, ಬಯಸಿದ್ದ ಕೌಶಲ್ಯಗಳು, ನಾವು ಬಯಸಿದ ಆಟಗಾರರು… ಇವೆಲ್ಲಾ ನಾನು 2021 ರಲ್ಲಿ ಹುದ್ದೆಗೆ ಬಂದಾಗ ಪ್ರಾರಂಭವಾದ ಚರ್ಚೆಗಳು. ಕೇವಲ ಈ ವಿಶ್ವಕಪ್‌ ನ ಸಿದ್ದತೆಯಲ್ಲ. ಇದು 2 ವರ್ಷಗಳ ಪ್ರಯಾಣದಂತೆ ಭಾಸವಾಗುತ್ತಿದೆ. ಎರಡು ವರ್ಷದಿಂದ ಏನೆಲ್ಲಾ ಮಾಡಿದ್ದೆವು ಅದೆಲ್ಲಾ ಈಗ ಬಾರ್ಬಡೋಸ್ ನಲ್ಲಿ ಬಂದು ಸಮ್ಮಿಳಿತವಾಗಿದೆ ಅಷ್ಟೇ” ಎಂದು ರಾಹುಲ್ ಹೇಳಿದರು.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ ನಿವೃತ್ತಿಯ ಕುರಿತು ಮಾತನಾಡಿದ ಅವರು, “ಒಬ್ಬ ವ್ಯಕ್ತಿಯಾಗಿ ನಾನು ಅವರನ್ನು ಮಿಸ್ ಮಾಡಿಕೊಳ್ಳುತ್ತೇನೆ… ಅವರು ಯಾವ ರೀತಿಯ ವ್ಯಕ್ತಿ ಎನ್ನುವುದು, ಅವರು ನನಗೆ ತೋರಿದ ಗೌರವ, ತಂಡಕ್ಕಾಗಿ ಅವರು ಹೊಂದಿದ್ದ ಕಾಳಜಿ ಮತ್ತು ಬದ್ಧತೆ ನನ್ನನು ಪ್ರಭಾವಿಸಿದೆ. ಅವರು ಎಂದಿಗೂ ಹಿಮ್ಮೆಟ್ಟಲಿಲ್ಲ, ಒಬ್ಬ ವ್ಯಕ್ತಿಯಾಗಿ ನಾನು ರೋಹಿತ್ ರನ್ನು ಮಿಸ್ ಮಾಡಿಕೊಳ್ಳುತ್ತೇನೆ” ಎಂದರು.

ಭಾರತೀಯ ಕ್ರಿಕೆಟ್ ತಂಡದಲ್ಲಿರುವ ಇಂದಿನ ಹುಡುಗರು ಅದ್ಭುತ ಪ್ರತಿಭೆಗಳಿದ್ದಾರೆ. ಈ ಸಮಯದಲ್ಲಿ ಅವರ ಶಕ್ತಿ ಮತ್ತು ಆತ್ಮವಿಶ್ವಾಸ ಮತ್ತೊಂದು ಹಂತದಲ್ಲಿದೆ. ಮುಂಬರುವ ದಿನಗಳಲ್ಲಿ ಭಾರತವು ಮುಂದಿನ 5-6 ವರ್ಷಗಳಲ್ಲಿ ಹಲವಾರು ಟ್ರೋಫಿಗಳನ್ನು ಗೆಲ್ಲುತ್ತದೆ. ಇಷ್ಟೆಲ್ಲಾ ಸಾಮರ್ಥ್ಯವಿದೆ, ಇಷ್ಟೆಲ್ಲಾ ಒಳ್ಳೆಯ ಕ್ರಿಕೆಟ್ ಆಡುತ್ತಿದ್ದೇವೆ, ಆದರೆ ದೊಡ್ಡ ಟ್ರೋಫಿ ಎಂಬ ಗೆರೆ ದಾಟಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರವೊಂದಿತ್ತು. ಆದರೆ ಮುಂದಿನ ದಿನಗಳಲ್ಲಿ ಹುಡುಗರು ಇದೇ ವಿಶ್ವಾಸದಲ್ಲಿ ತುಂಬಾ ಟ್ರೋಫಿ ಗೆಲ್ಲಲಿದ್ದಾರೆ ಎಂಬ ದೈರ್ಯವಿದೆ” ಎಂದು ಕೋಚ್ ರಾಹುಲ್ ದ್ರಾವಿಡ್ ಹೇಳಿದರು.

ಟಾಪ್ ನ್ಯೂಸ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.