T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ


Team Udayavani, Jun 25, 2024, 11:18 AM IST

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಕಿಂಗ್‌ ಸ್ಟನ್:‌ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅಫ್ಘಾನಿಸ್ಥಾನ ಬಾಂಗ್ಲಾದೇಶವನ್ನು ಮಣಿಸಿ ಚೊಚ್ಚಲ ಬಾರಿಗೆ ಸೆಮಿಫೈನಲ್ ಗೇರಿದೆ.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಗಿಳಿದ ಅಫ್ಘಾನಿಸ್ಥಾನ ಆರಂಭದಲ್ಲಿ ಜೊತೆಯಾಟ ನೀಡಿದ ಬಳಿಕ ಮಂದಗತಿಯ ಆಟವನ್ನು ಆಡಿತು.

ಗುರ್ಬಜ್‌(43 ರನ್), ಇಬ್ರಾಹಿಂ ಜದ್ರಾನ್‌(18‌ ರನ್) ಪವರ್‌ ಪ್ಲೇ ಓವರ್‌ ನಲ್ಲಿ ಬಿರುಸಿನ ಆಟವನ್ನು ನೀಡಿದ ಬಳಿಕ ಅಘ್ಘಾನ್‌ ತಂಡದ ಇತರೆ ಬ್ಯಾಟರ್‌ ಗಳು ಕನಿಷ್ಠ ರನ್‌ ಬಾರಿಸಿ ಪೆವಿಲಿಯನ್‌ ನತ್ತ ಸಾಗಿದರು.

ಅಂತಿಮ ಹಂತದಲ್ಲಿ ಬಂದ ಕ್ಯಾಪ್ಟನ್‌ ರಶೀದ್‌ ಖಾನ್‌ 19 ರನ್‌ ಬಾರಿಸಿ ನೂರಾರ ಗಡಿದಾಟಿಸಿದರು.

ಬಾಂಗ್ಲಾದ ಪರವಾಗಿ ರಿಶಾದ್ ಹುಸೇನ್‌ 3 ಪ್ರಮುಖ ವಿಕೆಟ್‌ ಗಳನ್ನು ಪಡೆದರು. ಮುಸ್ತಫಿಜುರ್, ತಸ್ಕಿನ್ ಅಹ್ಮದ್ ತಲಾ 1 ವಿಕೆಟ್‌ ಪಡೆದರು.‌

20 ಓವರ್‌ ನಲ್ಲಿ 5 ವಿಕೆಟ್‌ ಕಳೆದುಕೊಂಡು 115 ರನ್‌ ಗಳ ಕನಿಷ್ಠ ಗುರಿಯನ್ನು ಅಘ್ಘಾನ್‌ ಬಾಂಗ್ಲಾಕ್ಕೆ ನೀಡಿತು.

12.1 ಓವರ್‌ ಯೊಳಗೆ ಪಂದ್ಯವನ್ನು ಗೆದ್ದರೆ ಬಾಂಗ್ಲಾ ಕೂಡ ಸೆಮಿಪೈನಲ್‌ ಗೆ ಹೋಗುವ ಅವಕಾಶವಿತ್ತು. ಈ ಕಾರಣದಿಂದ ಆರಂಭದಲ್ಲೇ ಬಿರುಸಿದ ಬ್ಯಾಟಿಂಗ್‌ ಮಾಡಲು ಬಾಂಗ್ಲಾ ಆಟಗಾರರು ಮುಂದಾದರು.

ಆರಂಭಿಕ ಆಟಗಾರ ಲಿಟನ್‌ ದಾಸ್ 54 ರನ್‌ ಗಳಿಸಿ ಔಟಾಗದೆ ತಂಡವನ್ನು ಗೆಲುವಿನತ್ತ ಸಾಗಿಸಲು ಪ್ರಯತ್ನಿಸಿದರು. ಆದರೆ ಉಳಿದ ಆಟಗಾರರು ಸಾಲಾಗಿ ವಿಕೆಟ್‌ ಒಪ್ಪಿಸುತ್ತಾ ಹೋದರು. ಬಾಂಗ್ಲಾದ ಭರವಸೆ ಆಟಗಾರರಾದ ಶಾಕಿಬ್ ಅಲ್ ಹಸನ್, ತಂಝೀದ್ ಹಸನ್, ನಜ್ಮುಲ್ ಹೊಸೈನ್ ಶಾಂತೋ, ಸೌಮ್ಯ ಸರ್ಕಾರ್, ಮಹಮ್ಮದುಲ್ಲಾ ಎರಡಂಕಿ ರನ್‌ ಗಳಿಸಲೂ ಕೂಡ ಪರದಾಡುವ ಸ್ಥಿತಿ ಕಂಡುಬಂತು.

ಕನಿಷ್ಠ ಮೊತ್ತದ ಪಂದ್ಯದಲ್ಲಿ ಅಘ್ಘಾನ್‌ ಬ್ಯಾಟರ್‌ ಗಳನ್ನು ಕಟ್ಟಿಹಾಕಿ ಪಂದ್ಯದ ಮೇಲೆ ಗರಿಷ್ಠ ಒತ್ತಡವನ್ನು ಹಾಕಿದರು. ಒಂದು ಹಂತದಲ್ಲಿ ಸುಲಭವಾಗಿ ಪಂದ್ಯವನ್ನು ಗೆಲುವ ಸಾಧ್ಯತೆಯಿದ್ದ ಪಂದ್ಯದಲ್ಲಿ ಅಘ್ಘಾನ್‌ ಬೌಲರ್‌ ಗಳು ಮೈಲುಗೈ ಸಾಧಿಸಿದರು.

ಮಳೆಯ ಕಾರಣದಿಂದ ಪಂದ್ಯವನ್ನು 19 ಓವರ್‌ ಗೆ ಇಳಿಸಲಾಗಿತ್ತು. 114 ರ ಗುರಿಯನ್ನು ನೀಡಲಾಗಿತ್ತು.

ನವೀನ್‌ ಉಲ್‌ ಹಕ್‌ ಹಾಗೂ ನಾಯಕ ರಶೀದ್‌ ಖಾನ್‌ ಅವರ ಬೌಲಿಂಗ್‌ ಬಾಂಗ್ಲಾದ ಬ್ಯಾಟರ್‌ ಗಳು ತತ್ತರಿಸಿದರು. ನವೀನ್‌ ಹಾಗೂ ರಶೀದ್‌ ತಲಾ 4 ವಿಕೆಟ್‌ ಗಳನ್ನು ಪಡೆದರು.

ಅಘ್ಘಾನ್‌ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶವನ್ನು ಪಡೆದಿದೆ. ಇನ್ನೊಂದೆಡೆ  ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿದ್ದಿದೆ.

ಮೊದಲ ಸೆಮಿಫೈನಲ್‌ ಜೂ.26 ರಂದು ದಕ್ಷಿಣ ಆಫ್ರಿಕಾ – ಅಫ್ಘಾನಿಸ್ತಾನ ನಡುವೆ ನಡೆಯಲಿದೆ. ಎರಡನೇ ಸೆಮಿಫೈನಲ್‌ ಜೂ.27 ರಂದು ಭಾರತ – ಇಂಗ್ಲೆಂಡ್‌ ನಡುವೆ ನಡೆಯಲಿದೆ.

ಟಾಪ್ ನ್ಯೂಸ್

KPCC ಇಂದು ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

Congress ಒಳ ಬೇಗುದಿ: ಇಂದು ಕೆಪಿಸಿಸಿ ಸಭೆ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

KPCC ಇಂದು ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

Congress ಒಳ ಬೇಗುದಿ: ಇಂದು ಕೆಪಿಸಿಸಿ ಸಭೆ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.