![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 6, 2024, 10:39 AM IST
ಗಯಾನ: ಇನ್ನು ಕೆಲವೇ ದಿನಗಳಲ್ಲಿ ಐಸಿಸಿ ಟಿ20 ವಿಶ್ವಕಪ್ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ಈ ಬಾರಿಯ ಟಿ20 ವಿಶ್ವಕಪ್ ನಡೆಯಲಿದ್ದು, ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಚುಟುಕು ಕ್ರಿಕೆಟ್ ಕೂಟವನ್ನು ಯಶಸ್ವಿಯಾಗಿ ನಡೆಸಲು ಐಸಿಸಿ ಸಿದ್ದತೆ ಮಾಡುತ್ತಿದೆ. ಇದೀಗ ಈ ಮೆಗಾ ಕೂಟಕ್ಕೆ ಉಗ್ರರ ಕರಿನೆರಳು ಬಿದ್ದಿದೆ.
ಜಾಗತಿಕ ಕ್ರಿಕೆಟ್ ಪಂದ್ಯಾವಳಿಯ ಮೇಲೆ ಭದ್ರತಾ ಬೆದರಿಕೆಯು ಉತ್ತರ ಪಾಕಿಸ್ತಾನದದಿಂದ ಬಂದಿದೆ ಎಂದು ಹೇಳಲಾಗುತ್ತದೆ. ಇದೀಗ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುಲು ಕ್ರಿಕೆಟ್ ಸಂಸ್ಥೆಯು ಮುಂದಾಗಿದೆ.
“ನಾವು ಆತಿಥೇಯ ದೇಶಗಳು ಮತ್ತು ನಗರಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇವೆ. ನಮ್ಮ ಈವೆಂಟ್ ಗೆ ಗುರುತಿಸಲಾದ ಯಾವುದೇ ಅಪಾಯಗಳನ್ನು ತಗ್ಗಿಸಲು ಸೂಕ್ತವಾದ ಯೋಜನೆಗಳು ಜಾರಿಗೊಳಿಸುತ್ತೇವೆ” ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ನ ಸಿಇಒ ಜಾನಿ ಗ್ರೇವ್ಸ್ ಹೇಳಿದ್ದಾರೆ.
ಪ್ರೋ- ಇಸ್ಲಾಮಿಕ್ ಸ್ಟೇಟ್ನಿಂದ ಭದ್ರತಾ ಬೆದರಿಕೆ ಬಂದಿದೆ ಎಂದು ವರದಿಯು ಹೇಳುತ್ತದೆ. “ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿವೆ, ಇದರಲ್ಲಿ ಅಫ್ಘಾನಿಸ್ತಾನ-ಪಾಕಿಸ್ತಾನ ಶಾಖೆಯ ವೀಡಿಯೊ ಸಂದೇಶಗಳು ಸೇರಿವೆ. ISKhorasan (IS-K) ಇದು ಹಲವಾರು ದೇಶಗಳಲ್ಲಿ ದಾಳಿಗಳನ್ನು ಎತ್ತಿ ತೋರಿಸಿತು ಮತ್ತು ಬೆಂಬಲಿಗರನ್ನು ಅವರ ದೇಶಗಳಲ್ಲಿ ಯುದ್ಧಭೂಮಿಗೆ ಸೇರುವಂತೆ ಒತ್ತಾಯಿಸಿತು” ಎಂದು ವರದಿಯಾಗಿದೆ.
ಕೂಟದಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗೂ ಸೂಕ್ತ ಭದ್ರತೆ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಗ್ರೇವ್ಸ್ ಹೇಳಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.