T20 World Cup: ಪಾಕ್ ವಿರುದ್ದದ ಪಂದ್ಯಕ್ಕೆ ಮುನ್ನ ಮತ್ತೆ ಗಾಯಗೊಂಡ ರೋಹಿತ್ ಶರ್ಮಾ
Team Udayavani, Jun 8, 2024, 1:09 PM IST
ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ನಲ್ಲಿ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಸಿದ್ದತೆ ನಡೆಸುತ್ತಿದೆ. ರವಿವಾರ ರಾತ್ರಿ (ಭಾರತೀಯ ಕಾಲಮಾನ) ನ್ಯೂಯಾರ್ಕ್ ನ ನಸ್ಸೌ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಲಿದೆ.
ಈ ಪಂದ್ಯಕ್ಕಾಗಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ ನಾಯಕ ರೋಹಿತ್ ಶರ್ಮಾ ಅವರ ಕೈಗೆ ಏಟಾಗಿದೆ ಎಂದು ವರದಿಯಾಗಿದೆ. ಥ್ರೋ ಡೌನ್ ಸ್ಪೆಷಲಿಸ್ಟ್ ಅವರ ಎಸೆತಗಳನ್ನು ಎದುರಿಸುವ ವೇಳೆ ಚೆಂಡು ರೋಹಿತ್ ಬೆರಳಿಗೆ ತಾಗಿದೆ. ಭಾರತೀಯ ಫಿಸಿಯೋಗಳು ಕೂಡಲೇ ರೋಹಿತ್ ಅವರನ್ನು ಪರೀಕ್ಷಿಸಿದರು. ಬ್ಯಾಟಿಂಗ್ ಅಭ್ಯಾಸವನ್ನು ಒಂದೆರಡು ನಿಮಿಷಗಳ ಕಾಲ ಸ್ಥಗಿತಗೊಳಿಸಲಾಯಿತು. ಬಳಿಕ ರೋಹಿತ್ ಬ್ಯಾಟಿಂಗ್ ಮುಂದುವರಿಸಿದರು. ಇದು ಸದ್ಯ ತಂಡಕ್ಕೆ ನಿರಾಳತೆ ಒದಗಿಸಿದೆ.
ಐರ್ಲೆಂಡ್ ವಿರುದ್ದದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ರೋಹಿತ್ ಅವರ ರಟ್ಟೆಗೆ ಚೆಂಡು ಬಡಿದಿತ್ತು. ಬಳಿಕ ಅವರು ಕ್ರೀಸ್ ತೊರೆದಿದ್ದರು. ಪಂದ್ಯದ ಬಳಿಕ ಮಾತನಾಡಿದ್ದಅವರು ರಟ್ಟೆ ಸ್ವಲ್ಪ ನೋವುತ್ತಿದೆ ಎಂದಿದ್ದರು.
ಶುಕ್ರವಾರ ನ್ಯೂಯಾರ್ಕ್ ನಲ್ಲಿ ಭಾರತ ತಂಡವು ಮೂರು ಗಂಟೆಗಳ ಕಾಲ ಅಭ್ಯಾಸ ನಡೆಸಿದೆ. ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ತಂಡದೊಂದಿಗೆ ಮಸ್ತಿ ಮಾಡುತ್ತಿರುವುದು ಕಂಡು ಬಂತು.
Plenty of smiles at India training in New York on Friday ahead of their #T20WorldCup match against Pakistan, with a player from a rival camp making a surprise visit 👀 pic.twitter.com/gNBl3VnYCf
— T20 World Cup (@T20WorldCup) June 8, 2024
ಭಾರತ ತಂಡವು ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ದ ಎಂಟು ವಿಕೆಟ್ ಅಂತರದ ಸುಲಭ ಗೆಲುವು ಸಾಧಿಸಿದೆ. ಮತ್ತೊಂದೆಡೆ ಪಾಕಿಸ್ತಾನ ತಂಡವು ಯುಎಸ್ಎ ವಿರುದ್ದದ ಸೂಪರ್ ಓವರ್ ಥ್ರಿಲ್ಲರ್ ನಲ್ಲಿ ಸೋಲು ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.