![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 7, 2019, 8:50 PM IST
ರಾಜ್ ಕೋಟ್: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಗೆಲುವಿಗೆ 154 ರನ್ ಗಳ ಗುರಿ ಲಭಿಸಿದೆ. ಟಾಸ್ ಗೆದ್ದ ಭಾರತ ಬಾಂಗ್ಲಾವನ್ನು ಬ್ಯಾಟಿಂಗ್ ಗೆ ಇಳಿಸಿತು. 20 ಓವರುಗಳ ಮುಕ್ತಾಯಕ್ಕೆ ಬಾಂಗ್ಲಾ 06 ವಿಕೆಟುಗಳನ್ನು ಕಳೆದುಕೊಂಡು 153 ರನ್ ಗಳಿಸಿತು.
ಬಾಂಗ್ಲಾ ಆರಂಭಿಕರಾದ ಲಿಟನ್ ದಾಸ್ (29) ಮತ್ತು ಮುಹಮ್ಮದ್ ನಯೀಮ್ (36) ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿದರು. ಮೊದಲ ವಿಕೆಟಿಗೆ ಈ ಜೋಡಿ 60 ರನ್ ಗಳ ಅಮೂಲ್ಯ ಭಾಗೀದಾರಿಕೆ ಒದಗಿಸಿದರು.
ಬಳಿಕ ಸೌಮ್ಯ ಸರ್ಕಾರ್ (30) ಬಿರುಸಿನ ಆಟಕ್ಕೆ ಇಳಿದಿದ್ದರಿಂದ ಬಾಂಗ್ಲಾ ಭಾರೀ ಮೊತ್ತ ಪೇರಿಸುವ ಸೂಚನೆ ಲಭಿಸಿತ್ತು. ಆದರೆ 20 ಎಸೆತಗಳಲ್ಲಿ 30 ರನ್ ಸಿಡಿಸಿದ್ದ ಸೌಮ್ಯ ಸರ್ಕಾರ್ ಔಟಾಗುವುದರೊಂದಿಗೆ ಬಾಂಗ್ಲಾ ರನ್ ಓಟಕ್ಕೆ ಕಡಿವಾಣ ಬಿತ್ತು. ಬಾಂಗ್ಲಾ ಬ್ಯಾಟಿಂಗ್ ಸರದಿಯಲ್ಲಿ ಮಿಂಚಿದ ಇನ್ನೊಬ್ಬ ಬ್ಯಾಟ್ಸ್ ಮನ್ ಕಪ್ತಾನ ಮುಹಮದುಲ್ಲಾ 30 ರನ್ ಗಳಿಸಿದರು.
ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರು 02 ವಿಕೆಟ್ ಗಳಿಸಿದರು. ದೀಪಕ್ ಚಾಹರ್, ಖಲೀಲ್ ಅಹಮ್ಮದ್, ವಾಷಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಪಡೆದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.