![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 14, 2021, 9:20 AM IST
ಬ್ರಿಸ್ಬೇನ್: ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಗಾಯಾಳು ಆಟಗಾರರನ್ನು ಹೊರತುಪಡಿಸಿ ಭಾರತದ ಉಳಿದ ಸದಸ್ಯರೆಲ್ಲ ಬುಧವಾರ ಉತ್ತಮ ಅಭ್ಯಾಸ ನಡೆಸಿದರು.
ರೋಹಿತ್, ಶುಭಮನ್ ಗಿಲ್, ನಾಯಕ ರಹಾನೆ ಅವರೆಲ್ಲ ಹೆಚ್ಚಿನ ಅವಧಿಯನ್ನು ನೆಟ್ಸ್ ನಲ್ಲಿ ಕಳೆದರು. ಚೈನಾಮನ್ ಬೌಲರ್ ಕುಲದೀಪ್ ಯಾದವ್ ಕೂಡ ಸುದೀರ್ಘ ಅಭ್ಯಾಸ ನಡೆಸಿದರು. ಸೀಮರ್ ಶಾರ್ದೂಲ್ ಠಾಕೂರ್, ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಗಮನ ಸೆಳೆದರು.
ಪ್ರಧಾನ ಕೋಚ್ ರವಿಶಾಸ್ತ್ರಿ, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೊಡ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರು ಆಟಗಾರರ ಅಭ್ಯಾಸವನ್ನು ಸೂಕ್ಷ್ಮವಾಗಿ ಗಮನಿಸಿದರು.
ಇದನ್ನೂ ಓದಿ:ಬ್ರಿಸ್ಬೇನ್ ಸಕ್ಸಸ್ಗೆ ಹನ್ನೊಂದರ ಬಳಗದ ಸರ್ಕಸ್
“ಸಿಡ್ನಿಯ ಅಮೋಘ ಫೈಟ್ಬ್ಯಾಕ್ ಬಳಿಕ ನಮ್ಮ ಪಾಲಿಗಿದು ಪುನರ್ ಸಂಘಟನೆಯ ಸಮಯ. ಅಂತಿಮ ಟೆಸ್ಟ್ ಪಂದ್ಯಕ್ಕೆ ನಮ್ಮ ಸಿದ್ಧತೆ ಆರಂಭಗೊಂಡಿದೆ’ ಎಂಬುದಾಗಿ ಬಿಸಿಸಿಐ ಟ್ವೀಟ್ ಮಾಡಿದೆ.
ಕಠಿನ ಕ್ವಾರಂಟೈನ್
ಇದಕ್ಕೂ ಮುನ್ನ ಟೀಮ್ ಇಂಡಿಯಾ ಸದಸ್ಯರು ಬ್ರಿಸ್ಬೇನ್ ಹೊಟೇಲ್ನಲ್ಲಿ ಕಠಿನ ಕ್ವಾರಂಟೈನ್ಗೆ ಒಳಗಾಗಿದ್ದರು. ಪಕ್ಕದ ಹೊಟೇಲಿನಲ್ಲಿ “ಬ್ರಿಟನ್ ಕೊರೊನಾ’ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತದ ಕ್ರಿಕೆಟಿಗರಿಗೆ ರೂಮ್ ಸಿಬಂದಿಯನ್ನೂ ನೀಡಿರಲಿಲ್ಲ. ಇದಕ್ಕೆ ತಂಡದ ಆಡಳಿತ ಮಂಡಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ ಬುಧವಾರ ಈ ಸಮಸ್ಯೆ ಪರಿಹಾರ ಕಂಡಿತು. ಜಿಮ್, ಸ್ವಿಮ್ಮಿಂಗ್ ಪೂಲ್ಗಳೂ ಭಾರತದ ಕ್ರಿಕೆಟಿಗರಿಗೆ ತೆರೆಯಲ್ಪಟ್ಟವು
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.